ದೇಶ- ವಿದೇಶ

ಹೊರ್ಮುಜ್‌ ಜಲಸಂಧಿಯಿಂದ ನುಗ್ಗಿಬಂದ ಅಮೆರಿಕದ ಯುದ್ಧನೌಕೆಗಳು : ಇರಾನ್‌ನಿಂದ ದಾಳಿ

ವಾಷಿಂಗ್ಟನ್ : ಹಾರ್ಮುಜ್ ಜಲಸಂಧಿಯಲ್ಲಿ ಅಮೆರಿಕದ ಮೂರು ಯುದ್ಧನೌಕೆಗಳ ಮೇಲೆ ಇರಾನ್ ಕ್ಷಿಪಣಿ, ಡ್ರೋನ್ ಮತ್ತು ಸಣ್ಣ ದೋಣಿಗಳ ಮೂಲಕ ‘ಪ್ರಚೋದನೆ ಇಲ್ಲದೆ’ ದಾಳಿ ನಡೆಸಿದ ಬೆನ್ನಲ್ಲೇ ಅಮೆರಿಕ ಸೇನೆ ಗುರುವಾರ ಇರಾನ್ ಬಂದರುಗಳ ಮೇಲೆ ‘ಆತ್ಮರಕ್ಷಣಾ’ ದಾಳಿ ನಡೆಸಿದೆ. ಆದರೂ ಉಭಯ ದೇಶಗಳ ನಡುವಿನ ಕದನ ವಿರಾಮ ಒಪ್ಪಂದ ಜಾರಿಯಲ್ಲಿದೆ ಎಂದು ಅಮೆರಿಕ ಅಧಿಕಾರಿಗಳು ಹೇಳಿದ್ದಾರೆ.

ಯುಎಸ್ ಸೆಂಟ್ರಲ್ ಕಮಾಂಡ್ ಪ್ರಕಾರ, ಹಾರ್ಮುಜ್ ಜಲಸಂಧಿಯ ಮೂಲಕ ಗಲ್ಫ್ ಆಫ್ ಒಮನ್‌ಗೆ ಸಾಗುತ್ತಿದ್ದ ಯುಎಸ್‌ಎಸ್ ಟ್ರಕ್ಸ್ಟನ್, ಯುಎಸ್‌ಎಸ್ ರಾಫೆಲ್ ಪೆರಾಲ್ಟಾ ಮತ್ತು ಯುಎಸ್‌ಎಸ್ ಮೇಸನ್ ಎಂಬ ಮೂರು ಗೈಡೆಡ್-ಮಿಸೈಲ್ ಡಿಸ್ಟ್ರಾಯರ್‌ಗಳ ಮೇಲೆ ಇರಾನ್ ಬ್ಯಾಲಿಸ್ಟಿಕ್ ಕ್ಷಿಪಣಿ, ಕ್ರೂಸ್ ಕ್ಷಿಪಣಿ ಮತ್ತು ಆತ್ಮಾಹುತಿ ಡ್ರೋನ್‌ಗಳಿಂದ ದಾಳಿ ನಡೆಸಿತು. ಸಣ್ಣ ದೋಣಿಗಳೂ ದಾಳಿಯಲ್ಲಿ ಭಾಗಿಯಾಗಿದ್ದವು.

ಅಮೆರಿಕದ ಯುದ್ಧ ವಿಮಾನಗಳು ಮತ್ತು ಹೆಲಿಕಾಪ್ಟರ್‌ಗಳು ಎಲ್ಲಾ ಕ್ಷಿಪಣಿ, ಡ್ರೋನ್‌ಗಳನ್ನು ಹೊಡೆದುರುಳಿಸಿದವು. ಸಣ್ಣ ದೋಣಿಗಳನ್ನು ನಾಶಪಡಿಸಲಾಯಿತು. ‘ಮೂರು ಯುದ್ಧನೌಕೆಗಳಿಗೆ ಯಾವುದೇ ಹಾನಿಯಾಗಿಲ್ಲ. ಆದರೆ ಇರಾನ್ ದಾಳಿಕೋರರು ಸಂಪೂರ್ಣವಾಗಿ ನಾಶವಾಗಿದ್ದಾರೆ’ ಎಂದು ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಟ್ರೂತ್ ಸೋಷಿಯಲ್‌ನಲ್ಲಿ ಬರೆದುಕೊಂಡಿದ್ದಾರೆ.

ಪ್ರತೀಕಾರದ ದಾಳಿ
ದಾಳಿಯ ನಂತರ ಅಮೆರಿಕ ಇರಾನ್‌ನ ಕ್ವೆಶ್ಮ್ ಬಂದರು ಮತ್ತು ಬಂದರ್ ಅಬ್ಬಾಸ್‌ನಲ್ಲಿನ ಕ್ಷಿಪಣಿ-ಡ್ರೋನ್ ಉಡಾವಣಾ ತಾಣಗಳು, ಕಮಾಂಡ್ ಕೇಂದ್ರಗಳ ಮೇಲೆ ವೈಮಾನಿಕ ದಾಳಿ ನಡೆಸಿತು. ಟ್ರಂಪ್ ಇದನ್ನು ‘ಪ್ರೀತಿಯ ತಿವಿತ’ ಎಂದು ಬಣ್ಣಿಸಿದ್ದಾರೆ.

ಇರಾನ್ ಆರೋಪವೇನು?
ಇರಾನ್ ಸರ್ಕಾರಿ ಮಾಧ್ಯಮಗಳ ಪ್ರಕಾರ, ಅಮೆರಿಕ ಸೇನೆ ತನ್ನ ತೈಲ ಟ್ಯಾಂಕರ್ ಮೇಲೆ ದಾಳಿ ನಡೆಸಿದ್ದಕ್ಕೆ ಪ್ರತೀಕಾರವಾಗಿ ಯುದ್ಧನೌಕೆಗಳ ಮೇಲೆ ಕ್ಷಿಪಣಿ ಹಾರಿಸಲಾಯಿತು. ‘ಶತ್ರುಗಳ ಘಟಕಗಳು ಹಾರ್ಮುಜ್ ಜಲಸಂಧಿಯಲ್ಲಿ ಹಾನಿಗೊಳಗಾಗಿ ಹಿಮ್ಮೆಟ್ಟುವಂತಾಯಿತು’ ಎಂದು ಇರಾನ್ ಸೇನೆ ಹೇಳಿದೆ. ಆದರೆ ಅಮೆರಿಕ ಇದನ್ನು ನಿರಾಕರಿಸಿದೆ.

ಕದನ ವಿರಾಮ ಉಲ್ಲಂಘನೆಯೇ?
ಎರಡೂ ಕಡೆಯವರು ಕದನ ವಿರಾಮ ಉಲ್ಲಂಘನೆಯಾಗಿಲ್ಲ ಎಂದು ಹೇಳಿಕೊಂಡಿದ್ದಾರೆ. ‘ನಾವು ಉದ್ವಿಗ್ನತೆ ಬಯಸುವುದಿಲ್ಲ. ಆದರೆ ಅಮೆರಿಕ ಪಡೆಗಳನ್ನು ರಕ್ಷಿಸಲು ಸಿದ್ಧರಿದ್ದೇವೆ’ ಎಂದು ಸೆಂಟ್ಕಾಂ ಹೇಳಿದೆ.

ಯುಎಇ ಮೇಲೂ ದಾಳಿ
ಇದೇ ವೇಳೆ ಯುಎಇಯ ಫುಜೈರಾ ಬಂದರಿನ ತೈಲ ಸಂಸ್ಕರಣಾಗಾರದ ಮೇಲೆ ಇರಾನ್ ಕ್ಷಿಪಣಿ, ಡ್ರೋನ್ ದಾಳಿ ನಡೆಸಿದ್ದು, ಮೂವರು ಭಾರತೀಯರು ಗಾಯಗೊಂಡಿದ್ದಾರೆ.

ಹಾರ್ಮುಜ್ ಬಿಕ್ಕಟ್ಟು
ಫೆಬ್ರವರಿ 28ರಿಂದ ಆರಂಭವಾದ ಅಮೆರಿಕ-ಇಸ್ರೇಲ್-ಇರಾನ್ ಯುದ್ಧದ ನಂತರ ಹಾರ್ಮುಜ್ ಜಲಸಂಧಿ ಬಹುತೇಕ ಮುಚ್ಚಿದ್ದು, ಸುಮಾರು 2,000 ಹಡಗುಗಳು ಸಿಲುಕಿವೆ. ವಿಶ್ವದ ಕಚ್ಚಾತೈಲದ ಶೇ.20ರಷ್ಟು ಇದೇ ಮಾರ್ಗದಲ್ಲಿ ಸಾಗುತ್ತದೆ. ಟ್ರಂಪ್ ‘ಪ್ರಾಜೆಕ್ಟ್ ಫ್ರೀಡಂ’ ಹೆಸರಿನಲ್ಲಿ ಹಡಗುಗಳಿಗೆ ರಕ್ಷಣೆ ನೀಡುವುದಾಗಿ ಘೋಷಿಸಿದ್ದರು.

ಸದ್ಯ ಗಲ್ಫ್‌ನಲ್ಲಿ ಉದ್ವಿಗ್ನತೆ ಮುಂದುವರಿದಿದ್ದು, ತೈಲ ಬೆಲೆ ಏರಿಕೆಯ ಆತಂಕ ಎದುರಾಗಿದೆ.

ಆಂದೋಲನ ಡೆಸ್ಕ್

Recent Posts

ಡಿಕೆಶಿ ಸಂಪುಟದಲ್ಲಿ ಡಾ.ಎಚ್‌ಸಿಎಂ ಕೈ ಬಿಟ್ಟಿದ್ದಕ್ಕೆ ದಸಂಸ ತೀವ್ರ ಅಸಮಾಧಾನ

ಮೈಸೂರು:  ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನೇತೃತ್ವದ ಕಾಂಗ್ರೆಸ್ ಸರ್ಕಾರದಲ್ಲಿ ಹಿರಿಯ, ಅನುಭವಿ, ಹಾಗೂ ವೈಚಾರಿಕ ಪ್ರಜ್ಞೆಯ   ಸಮರ್ಥ ದಲಿತ ರಾಜಕಾರಣಿಯಾಗಿದ್ದ ಮಾಜಿ…

4 hours ago

ನನ್ನ ಗೆಲುವು ಜೆಡಿಎಸ್ ಭಿಕ್ಷೆ ಅಲ್ಲ, ನಾಗಮಂಗಲ ಜನರ ಭಿಕ್ಷೆ : ಸಚಿವ ಚಲುವರಾಯಸ್ವಾಮಿ

ನಾಗಮಂಗಲ : ನಾಲ್ಕನೇ ಬಾರಿ ಸಚಿವರಾದ ನಂತರ ಪ್ರಥಮ ಬಾರಿಗೆ ಸ್ವಕ್ಷೇತ್ರ ನಾಗಮಂಗಲಕ್ಕೆ ಆಗಮಿಸಿದ ಸಚಿವ ಎನ್. ಚಲುವರಾಯಸ್ವಾಮಿ ಅವರಿಗೆ…

4 hours ago

ಓದುಗರ ಪತ್ರ: ಪುಷ್ಪ ವೃಷ್ಟಿ..!

ಪುಷ್ಪ ವೃಷ್ಟಿ..! ಅತಿವೃಷ್ಟಿ, ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ‘ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ ಕಾರಣ, ಅಲ್ಲಿಗಿಲ್ಲ ಮಂತ್ರಿ…

15 hours ago

ಓದುಗರ ಪತ್ರ: ರೈತ ಮಕ್ಕಳ ವಿದ್ಯಾಭ್ಯಾಸ ಶುಲ್ಕದಲ್ಲಿ

ರಿಯಾಯಿತಿಗೆ ಸರ್ಕಾರ ಕ್ರಮ ಕೈಗೊಳ್ಳಲಿ ರಾಜ್ಯದ ಹಲವು ಭಾಗಗಳಲ್ಲಿ ಕಳೆದ ವರ್ಷಕ್ಕಿಂತ ಈ ಬಾರಿ ನಿರೀಕ್ಷಿಸಿದಷ್ಟು ಮಳೆಯಿಲ್ಲದ ಕಾರಣ ಕೃಷಿ ಕ್ಷೇತ್ರ…

15 hours ago

ಓದುಗರ ಪತ್ರ: ಧಾರ್ಮಿಕ ಮುಖಂಡರು ರೈತರ ಬೆನ್ನಿಗೆ ನಿಲ್ಲಬೇಕು

ರಾಜ್ಯದಲ್ಲಿ ನಗರೀಕರಣದ ವೇಗದಿಂದಾಗಿ ಕೃಷಿ ಭೂಮಿಯ ವಿಸ್ತೀರ್ಣ ಸುಮಾರು ಶೇ. ೧೩ರಷ್ಟು ಕುಸಿದಿದೆ ಎಂದು ವರದಿಗಳು ಹೇಳಿವೆ. ಮೂಲಸೌಕರ್ಯಗಳ ಹೆಸರಿನಲ್ಲಿ…

15 hours ago

ಧ್ರುವೀಕರಣದ ನೆಲೆಗಟ್ಟಿನ ಮೇಲೆ ರಾಜ್ಯ ರಾಜಕಾರಣ

ಆರ್.‌ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ಕರ್ನಾಟಕದ ರಾಜಕಾರಣ ಧ್ರುವೀಕರಣದ ನೆಲೆಗಟ್ಟಿಗೆ ಬಂದು ತಲುಪಿದೆ. ಅಂದ ಹಾಗೆ ಧ್ರುವೀಕರಣಕ್ಕೆ ಅಸಮಾ ಧಾನ,ಅತೃಪ್ತಿ,ಭಿನ್ನಾಭಿಪ್ರಾಯಗಳೇ…

15 hours ago