ಗೊಂಡಾ: ಉತ್ತರ ಪ್ರದೇಶದ ಗೊಂಡಾದ ಇಟಿಯಾ ಥೋಕ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಭೀಕರ ರಸ್ತೆ ಅಪಘಾತದಲ್ಲಿ 15 ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದ ವಾಹನವೊಂದು ಕಾಲುವೆಗೆ ಉರುಳಿ ಬಿದ್ದ ಪರಿನಾಮ 11 ಮಂದಿ ಸಾವನ್ನಪ್ಪಿದ್ದಾರೆ.
ಬೊಲೆರೋ ವಾಹನವು ನಿಯಂತ್ರಣ ತಪ್ಪಿ ಕಾಲುವೆಗೆ ಬಿದ್ದಿದ್ದು, ಸಾವುನೋವುಗಳಿಗೆ ಕಾರಣವಾಗಿದೆ.
ವಾಹನದಲ್ಲಿ ಚಾಲಕ ಸೇರಿದಂತೆ ಒಟ್ಟು 15 ಜನರು ಪ್ರಯಾಣಿಸುತ್ತಿದ್ದರು. ಗ್ರಾಮಸ್ಥರು ಹಾಗೂ ರಕ್ಷಣಾ ತಂಡಗಳ ಸಹಾಯದಿಂದ ಮುಳುಗಿದ ವಾಹನದಿಂದ 11 ಶವಗಳನ್ನು ಹೊರತೆಗೆಯಲಾಗಿದೆ. ಇತರ ನಾಲ್ವರು ಪ್ರಯಾಣಿಕರನ್ನು ಗಂಭೀರ ಸ್ಥಿತಿಯಲ್ಲಿ ರಕ್ಷಿಸಲಾಗಿದ್ದು, ಅವರನ್ನು ತಕ್ಷಣ ವೈದ್ಯಕೀಯ ಚಿಕಿತ್ಸೆಗಾಗಿ ಹತ್ತಿರದ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ಇನ್ನು ಸಿಎಂ ಯೋಗಿ ಆದಿತ್ಯನಾಥ್ ಅವರು ಮೃತರ ಕುಟುಂಬಗಳಿಗೆ ತೀವ್ರ ಸಂತಾಪ ಸೂಚಿಸಿದ್ದು, ಅಪಘಾತದಲ್ಲಿ ಸಾವನ್ನಪ್ಪಿದವರ ಕುಟುಂಬದವರಿಗೆ 5 ಲಕ್ಷ ರೂಗಳ ಆರ್ಥಿಕ ನೆರವು ಘೋಷಣೆ ಮಾಡಿದ್ದಾರೆ.
ಇನ್ನು ಮೃತರ ಕುಟುಂಬಸ್ಥರಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಕೂಡ ತಲಾ 2 ಲಕ್ಷ ಪರಿಹಾರ ಘೋಷಣೆ ಮಾಡಿದ್ದು, ಘಟನೆಯಲ್ಲಿ ಗಾಯಗೊಂಡಿರುವ ಗಾಯಾಳುಗಳು ಆದಷ್ಟು ಬೇಗ ಚೇತರಿಸಿಕೊಳ್ಳಲಿ ಎಂದು ಟ್ವೀಟ್ ಮಾಡಿದ್ದಾರೆ.
ಡಾ.ಕೆ.ಪಿ.ಸಿದ್ಧಲಿಂಗಸ್ವಾಮಿ ಇಂದು ಶ್ರೀ ಶಿವರಾತ್ರಿ ರಾಜೇಂದ್ರ ಸ್ವಾಮೀಜಿ ೧೧೧ನೇ ಜಯಂತಿ ಕೆಲವರು ತಮ್ಮ ಕಾಲದಲ್ಲಿ ಬದುಕುತ್ತಾರೆ; ಕೆಲವರು ತಮ್ಮ ಕಾಲವನ್ನೇ…
ಆತ್ಮಬಲ ಅಸ್ತ್ರದಿಂದ ಬ್ರಿಟಿಷರ ಮಣಿಸಿದ ಗಾಂಧಿ ಗಾಂಧಿಜಿ ಕಲ್ಪನೆಯ ಸರ್ವೋದಯ ಸಮಾಜದಲ್ಲಿ ಎಲ್ಲರೂ ಸ್ವತಂತ್ರವಾಗಿರುತ್ತಾರೆ. ಇಲ್ಲಿ ಜಾತಿ, ವರ್ಗ, ಶೋಷಣೆ…
ರೋಹಿಣಿ ಸಂಗಪ್ಪ ದಳವಾಯಿ ಮೈಸೂರು ರಾಜ್ಯ ಕಂಡ ಅಪ್ರತಿಮ ಹೋರಾಟಗಾರ್ತಿ ಮತ್ತು ಜನಸೇವಕಿ ಯಶೋಧರಾ ದಾಸಪ್ಪ. ತಮ್ಮ ದಿಟ್ಟ ನಿಲುವು,…
ನಲವತ್ತು ವರುಷಗಳ ಕೆಳಗೆ ಇಂಗ್ಲೆಂಡಿನಲ್ಲಿ ಭಾರತೀಯ ವಿದ್ಯಾರ್ಥಿಗಳ ಸಂಖ್ಯೆ ಈಗ ಇರುವುದಕ್ಕಿಂತ ಬಹಳ ಕಡಿಮೆಯಾಗಿತ್ತು. ತಾವು ಮದುವೆಯಾದವರಾಗಿದ್ದರೂ, ಬ್ರಹ್ಮಚಾರಿಗಳೆಂದು ನಟಿಸುವುದು…
ಭೇರ್ಯ ಮಹೇಶ್ ಮಳೆ ಅಭಾವದಿಂದ ಬಿತ್ತನೆ ಮಾಡಿದ್ದ ಬೆಳೆಗಳು ಒಣಗಿ, ರೈತರಿಗೆ ಸಾಕಷ್ಟು ನಷ್ಟ ಕೆ.ಆರ್.ನಗರ: ಕೆ.ಆರ್.ನಗರ ಮತ್ತು ಸಾಲಿಗ್ರಾಮ…