ನವದೆಹಲಿ: ಲೋಕಸಭೆಯಲ್ಲಿ ವಿ-ಬಿಜಿ ರಾಮ್ ಜಿ ಮಸೂದೆ ಅಂಗೀಕಾರಗೊಂಡಿದೆ.
ಸಂಸತ್ತಿನ ಚಳಿಗಾಲದ ಅಧಿವೇಶನದಲ್ಲಿ ಇಂದು ಲೋಕಸಭೆಯು ರೋಜ್ಗಾರ್ ಮತ್ತು ಅಜೀವಿಕಾ ಮಿಷನ್ ಮಸೂದೆ 2025ನ್ನು ಅಂಗೀಕರಿಸಿತು.
ಇದು ವಿರೋಧ ಪಕ್ಷದ ಸಂಸದರಿಂದ ತೀವ್ರ ಪ್ರತಿಭಟನೆಗೆ ಕಾರಣವಾಯಿತು. ಸರ್ಕಾರವು ರಾಷ್ಟ್ರಪಿತನನ್ನು ಅವಮಾನಿಸಿದೆ ಹಾಗೂ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಕಾಯ್ದೆಯ ನಿಬಂಧನೆಗಳನ್ನು ದುರ್ಬಲಗೊಳಿಸಿದೆ ಎಂದು ಆರೋಪಿಸಿದರು.
ಇದನ್ನು ಓದಿ: ಕಳೆದ 3 ವರ್ಷಗಳಲ್ಲಿ 88 ಪೊಲೀಸರು ಅಪರಾಧ ಕೃತ್ಯಗಳಲ್ಲಿ ಭಾಗಿ: ಸಚಿವ ಪರಮೇಶ್ವರ್
ಕೇಂದ್ರ ಗ್ರಾಮೀಣಾಭಿವೃದ್ಧಿ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಈ ಕ್ರಮವನ್ನು ಸಮರ್ಥಿಸಿಕೊಂಡರು. 2009ರ ಚುನಾವಣೆಗಳನ್ನು ಗಮನದಲ್ಲಿಟ್ಟುಕೊಂಡು ಮಹಾತ್ಮ ಗಾಂಧಿಯವರ ಹೆಸರನ್ನು ಎನ್ಆರ್ಇಜಿಎಗೆ ಸೇರಿಸಲಾಗಿದೆ ಎಂದು ಹೇಳಿದರು.
ಪ್ರಧಾನಿ ನರೇಂದ್ರ ಮೋದಿ ಅವರು ಎಂಜಿಎನ್ಇಜಿಎ ಅನ್ನು ಸರಿಯಾಗಿ ಮತ್ತು ಬಲವಾಗಿ ಜಾರಿಗೆ ತಂದರು ಎಂದು ನಾನು ಹೇಳಲು ಬಯಸುತ್ತೇನೆ ಎಂದು ಲೋಕಸಭೆಯಲ್ಲಿ ಮಾತನಾಡುತ್ತಾ ಚೌಹಾಣ್ ಹೇಳಿದರು.
ವಯನಾಡು: ಬೆಳಿಗ್ಗೆಯಿಂದಲೇ ವಯನಾಡಿನಲ್ಲಿ ಮಳೆಯ ನಡುವೆ ರಕ್ಷಣಾ ಕಾರ್ಯಾಚರಣೆ ಮುಂದುವರಿದಿದ್ದು, ನಾಪತ್ತೆಯಾಗಿರುವ ಐವರಿಗೆ ಶೋಧ ಕಾರ್ಯ ಕಾರ್ಯ ನಡೆಯುತ್ತಿದೆ. ಮೆಪ್ಪಾಡಿ…
ಮಂಡ್ಯ: ಕಾವೇರಿ ಜಲಾನಯದ ಪ್ರದೇಶ ಹಾಗೂ ಕೊಡಗಿನಲ್ಲಿ ಮುಂಗಾರು ಮಳೆ ಚುರುಕುಗೊಂಡ ಹಿನ್ನೆಲೆಯಲ್ಲಿ ಪ್ರಸಿದ್ಧ ಕೃಷ್ಣರಾಜಸಾಗರ ಜಲಾಶಯಕ್ಕೆ ನೀರಿನ ಒಳಹರಿವು…
ಆರ್ಕೆಸ್ಟ್ರಾ. . . ಈ ಪದ ಕೇಳಿದರೆ ಸಾಕು, ಯುವಜನರ ಎದೆ ಯಲ್ಲಿ ತಮ್ಮ ಮೆಚ್ಚಿನ ಸಿನಿಮಾಗಳ ಹಾಡುಗಳ ಝೇಂಕಾರ,…
ʼಫನ್ ಸ್ಮಾರ್ಟ್ ನಾಲೆಡ್ಜ್ ಸಲ್ಯೂಶನ್ ಫೌಂಡೇಶನ್ʼ ಮೂಲಕ ಮಾನವೀಯ ಸೇವೆ ೨೬ ವರ್ಷ ಪ್ರಾಯದ, ಕೊಲ್ಕೊತ್ತಾದ ಮಾನವ್ ಸೋನಿ…
ಶಿವಮೊಗ್ಗ: ಮಲೆನಾಡಿನಲ್ಲಿ ಭಾರೀ ಮಳೆಯಾಗುತ್ತಿರುವ ಪರಿಣಾಮ ವಿಶ್ವವಿಖ್ಯಾತ ಜೋಗ ಜಲಪಾತ ಜೀವಕಳೆ ಪಡೆದುಕೊಂಡಿದೆ. ಕಳೆದ ನಾಲ್ಕೈದು ದಿನಗಳಿಂದ ಶಿವಮೊಗ್ಗದಲ್ಲಿ ಭಾರೀ…