ತಿರುವನಂತಪುರಂ: ಕೇರಳಂ ಮುಖ್ಯಮಂತ್ರಿಯಾಗಿ ವಿ.ಡಿ.ಸತೀಶನ್ ಅವರಿಂದು ಪ್ರಮಾಣವಚನ ಸ್ವೀಕರಿಸಿದರು. ರಾಜ್ಯಪಾಲ ಆರ್.ವಿ.ಅರ್ಲೇಕರ್ ಅವರು ಪ್ರಮಾಣವಚನ ಬೋಧಿಸಿದರು.
ಸತೀಶನ್ ಜೊತೆಗೆ ಅವರ ಸಂಪುಟ ಸಹೋದ್ಯೋಗಿಗಳು ಪ್ರಮಾಣ ವಚನ ಸ್ವೀಕರಿಸಿದ್ದಾರೆ.
ಪ್ರಮಾಣವಚನ ಸಮಾರಂಭದಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ರಾಹುಲ್ ಗಾಂಧಿ, ಸಂಸದೆ ಪ್ರಿಯಾಂಕಾ ಗಾಂಧಿ ಸೇರಿದಂತೆ ಇತರರು ಭಾಗಿಯಾಗಿದ್ದರು.
ನಿರ್ಗಮಿತ ಸಿಎಂ ಪಿಣರಾಯಿ ವಿಜಯನ್ ಮತ್ತು ಬಿಜೆಪಿ ರಾಜೀವ್ ಚಂದ್ರಶೇಖರ್ ಕೂಡ ವೇದಿಕೆಯಲ್ಲಿದ್ದರು. ಎಡಪಕ್ಷ ನೇತೃತ್ವದ ಎಲ್ಡಿಎಫ್ನಿಂದ ಸತತ ಎರಡು ಬಾರಿ ಸೋಲುಗಳ ನಂತರ ಕಾಂಗ್ರೆಸ್ಗೆ ಮರಳಿದ್ದ ಸತೀಶನ್ ಈಗ ಕೇರಳಂ ಸಿಎಂ ಆಗಿದ್ದಾರೆ.





