ಅಹಮದಾಬಾದ್: ವಡೋದರಾ ಸೇತುವೆ ಕುಸಿತದಲ್ಲಿ ಇಂದು ಮತ್ತೊಂದು ಮೃತದೇಹ ಪತ್ತೆಯಾಗಿದ್ದು, ಸಾವಿನ ಸಂಖ್ಯೆ 14ಕ್ಕೆ ಏರಿಕೆಯಾಗಿದೆ.
ಎರಡನೇ ದಿನದ ಶೋಧ ಮತ್ತು ರಕ್ಷಣಾ ಕಾರ್ಯಗಳು ಆರಂಭಗೊಂಡಿದ್ದು, ಆರು ಜನರು ಇನ್ನೂ ನಾಪತ್ತೆಯಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ವಡೋದರಾ ಮತ್ತು ಆನಂದ್ ನಗರಗಳನ್ನು ಸಂಪರ್ಕಿಸುವ ಮಹಿಸಾಗರ್ ನದಿಗೆ ಅಡ್ಡಲಾಗಿ ನಿರ್ಮಿಸಲಾದ ಗಂಭೀರಾ ಸೇತುವೆಯ ಒಂದು ಭಾಗ ಬುಧವಾರ ಕುಸಿದು ಕಂಡಿದ್ದು, ವಾಹನಗಳು ನದಿಗೆ ಉರುಳಿವೆ.
ರಸ್ತೆ ಮತ್ತು ಕಟ್ಟಡ ಇಲಾಖೆಯ ಹಿರಿಯ ಅಧಿಕಾರಿಗಳ ತಂಡವು ಘಟನೆಯ ಬಗ್ಗೆ ಉನ್ನತ ಮಟ್ಟದ ತನಿಖೆ ನಡೆಸಲು ಸ್ಥಳಕ್ಕೆ ಆಗಮಿಸಿದೆ. ದುರಂತದ ತನಿಖೆಗೆ ಆದೇಶಿಸಿರುವುದಾಗಿ ಗುಜರಾತ್ ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಅವರು ತಿಳಿಸಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಕೂಡ ಮೃತರ ಬಗ್ಗೆ ದುಃಖ ವ್ಯಕ್ತಪಡಿಸಿದ್ದು, ಮೃತರ ಸಂಬಂಧಿಕರಿಗೆ ತಲಾ 2 ಲಕ್ಷ ರೂ. ಪರಿಹಾರ ಘೋಷಿಸಿದ್ದಾರೆ. ಗಾಯಾಳುಗಳು ಶೀಘ್ರ ಗುಣಮುಖರಾಗಲಿ ಎಂದು ಪ್ರಾರ್ಥಿಸಿದ್ದಾರೆ.





