Vadodara Gambhira Bridge Collapse PM Modi announces Rs 2 lakh compensation
ಗುಜರಾತ್: ಇಲ್ಲಿನ ವಡೋದರಾ ಸೇತುವೆ ಕುಸಿತದಲ್ಲಿ ಮೃತಪಟ್ಟವರ ಕುಟುಂಬದವರಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಪ್ರಧಾನಮಂತ್ರಿ ರಾಷ್ಟ್ರೀಯ ಪರಿಹಾರ ನಿಧಿಯಿಂದ 2 ಲಕ್ಷ ರೂ ಪರಿಹಾರ ಘೋಷಣೆ ಮಾಡಿದ್ದಾರೆ.
ಗುಜರಾತ್ನ ಗಂಭೀರಾ ಸೇತುವೆಯ ಒಂದು ಭಾಗ ಕುಸಿದು ಬಿದ್ದ ಪರಿಣಾಮ ಈ ಘಟನೆ ನಡೆದಿದೆ. ಘಟನೆಯಲ್ಲಿ ಕನಿಷ್ಠ 8 ಮಂದಿ ಸಾವನ್ನಪ್ಪಿದ್ದು, ಇನ್ನೂ ಅನೇಕರು ನಾಪತ್ತೆಯಾಗಿರುವ ಶಂಕೆ ವ್ಯಕ್ತವಾಗಿದೆ.
ವಿಷಯ ತಿಳಿಯುತ್ತಿದ್ದಂತೆ ಸಾಮಾಜಿಕ ಜಾಲತಾಣವಾದ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿರುವ ಪ್ರಧಾನಿ ನರೇಂದ್ರ ಮೋದಿ ಅವರು, ಗುಜರಾತ್ನ ವಡೋದರಾ ಜಿಲ್ಲೆಯಲ್ಲಿ ಸೇತುವೆ ಕುಸಿದು ಸಂಭವಿಸಿದ ಜೀವಹಾನಿ ತೀವ್ರ ದುಃಖಕರವಾಗಿದೆ. ತಮ್ಮ ಪ್ರೀತಿ ಪಾತ್ರರನ್ನು ಕಳೆದುಕೊಂಡವರಿಗೆ ಸಂತಾಪ ಸೂಚಿಸುತ್ತೇನೆ. ಗಾಯಾಳುಗಳು ಶೀಘ್ರದಲ್ಲೇ ಚೇತರಿಸಿಕೊಳ್ಳಲಿ.
ಮೃತರ ಪ್ರತಿಯೊಬ್ಬರ ಹತ್ತಿರದ ಸಂಬಂಧಿಗಳಿಗೆ ಪಿಎಂಎನ್ಆರ್ಪಿಎಫ್ನಿಂದ 2 ಲಕ್ಷ ರೂ ಗಳ ಪರಿಹಾರ ನೀಡಲಾಗುವುದು. ಗಾಯಾಳುಗಳಿಗೆ 50,000 ರೂ ನೀಡಲಾಗುವುದು ಎಂದು ಪೋಸ್ಟ್ ಮಾಡಿದ್ದಾರೆ.
ಈ ಮಧ್ಯೆ ಸೇತುವೆ ಕುಸಿತ ದುರಂತದಲ್ಲಿ ಸಂಭವಿಸಿದ ಜೀವಹಾನಿಗೆ ಗುಜರಾತ್ ಸಿಎಂ ಭೂಪೇಂದ್ರ ಪಟೇಲ್ ದುಃಖ ವ್ಯಕ್ತಪಡಿಸಿದ್ದು, ಘಟನೆಯ ಬಗ್ಗೆ ತಕ್ಷಣವೇ ತನಿಖೆಗೆ ಆದೇಶ ನೀಡಿದ್ದಾರೆ.
ಮಹೇಶ್ ಕರೋಠಿ ಕಿಕ್ಕೇರಿ: ಇಲ್ಲಿಗೆ ಸಮೀಪದ ಮಂದಗೆರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕ್ಯಾತನಹಳ್ಳಿ ಗ್ರಾಮದಲ್ಲಿ ಕಳೆದ ೨-೩ ವರ್ಷಗಳಿಂದ ಹಲವು…
ನೆಂಟರಿಷ್ಟರು ಮನೆಗೆ ಬಂದರು ಎಂದರೆ... ಏನು ಎತ್ತ, ಹೇಗೆ ಅವರ ಆತಿಥ್ಯ? ಇಂಥ ಸಂಕಷ್ಟಗಳಿಗೆಲ್ಲಾ ಕಾರಣ,ಬಂದ್ ಆಗಿರುವ ಆ ಹಾರ್ಮುಜ್…
ಮೈಸೂರಿನಿಂದ ಎಚ್.ಡಿ.ಕೋಟೆ ಮಾರ್ಗದಲ್ಲಿ ಬರುವ ಮಾದಾಪುರ ಗ್ರಾಮದಿಂದ ಕೆ. ಬೆಳತ್ತೂರು ಹಾಗೂ ಲೆಂಕೆ ಗ್ರಾಮದವರೆಗೂ ರಸ್ತೆ ಡಾಂಬರೀಕರಣವಾಗಿದೆ. ಈ ರಸ್ತೆಯಲ್ಲಿ…
ಜಾತ್ರೆಗಳು ಹಾಗೂ ಹಬ್ಬಗಳು ಗ್ರಾಮದ ಎಲ್ಲಾ ಜನರು ಒಟ್ಟುಗೂಡಿ ಮಾಡುವ ಕಾರ್ಯಕ್ರಮವಾಗಿವೆ. ಇದರಲ್ಲಿ ಜನರ ಒಗ್ಗಟ್ಟು, ಪರಸ್ಪರ ಸಹಕಾರ ಕಾಣುತ್ತೇವೆ.…
ಮೈಸೂರಿನ ಬಹುತೇಕ ಎಲ್ಲ ಬಡಾವಣೆಗಳಲ್ಲೂ, ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ (ಸೆಸ್ಕ್)ದಿಂದ ಅಂಡರ್ ಗ್ರೌಂಡ್ ಕೇಬಲ್ ಅನ್ನು ಅಳಡಿಸುತ್ತಿದ್ದು, ಕಾಮಗಾರಿಯ…
ಮೀಸಲಾತಿ ವ್ಯವಸ್ಥೆ ಜಾರಿ ಸಂಬಂಧ ಪರ ಮತ್ತು ವಿರೋಧದ ಚರ್ಚೆ ಹಾದಿ ಬೀದಿ, ಹಳ್ಳಿಯ ಪಂಚಾಯಿತಿ ಕಟ್ಟೆಗಳಲ್ಲಿ ಮತ್ತು ಖಾಸಗಿಯಾಗಿ…