ಹೊಸದಿಲ್ಲಿ : ‘ರಾಷ್ಟ್ರಗೀತೆ’ಗೂ ಮುನ್ನ ‘ವಂದೇ ಮಾತರಂ’ ಹಾಡುವುದನ್ನು ಕೇಂದ್ರ ಸರ್ಕಾರ ಕಡ್ಡಾಯ ಮಾಡಿದ್ದು, ಕಾಂಗ್ರೆಸ್ ಕೈಬಿಟ್ಟಿದ್ದ ಚರಣಗಳ ಮರುಸೇರ್ಪಡೆಗೊಳಿಸಿದೆ. ವಂದೇ ಮಾತರಂ’ ಗೀತೆ ಕುರಿತು ಕೇಂದ್ರ ಗೃಹ ಸಚಿವಾಲಯವು ಹೊಸ ಮಾರ್ಗಸೂಚಿಗಳನ್ನು ಹೊರಡಿಸಿದ್ದು, ರಾಷ್ಟ್ರಗೀತೆ ’ಜನ ಗಣ ಮನ’ ಹಾಡುವಾಗ ಪಾಲಿಸುವ ಶಿಷ್ಟಾಚಾರಗಳನ್ನು ‘ವಂದೇ ಮಾತರಂ’ಗೂ ಕಡ್ಡಾಯಗೊಳಿಸಿದೆ.
‘ವಂದೇ ಮಾತರಂ’ ಗೀತೆ ಪ್ರಸಾರವಾಗುವಾಗ ಅಥವಾ ಹಾಡುವಾಗ ಪ್ರತಿಯೊಬ್ಬರೂ ಎದ್ದು ನಿಂತು ಗೌರವ ಸೂಚಿಸುವುದು ಕಡ್ಡಾಯವಾಗಿದೆ. ಎಲ್ಲಾ ಸರ್ಕಾರಿ ಸಮಾರಂಭಗಳು ಮತ್ತು ಶಾಲೆಗಳಲ್ಲಿ ’ಜನ ಗಣ ಮನ’ ಹಾಡಿದ ತಕ್ಷಣವೇ ’ವಂದೇ ಮಾತರಂ’ ಗೀತೆಯನ್ನು ಹಾಡಬೇಕೆಂದು ತಿಳಿಸಲಾಗಿದೆ.
ಆದೇಶದ ಪ್ರಕಾರ, ರಾಷ್ಟ್ರಗೀತೆಗೂ ಮುನ್ನ ವಂದೇ ಮಾತರಂನ 6 ಚರಣಗಳನ್ನು ಹಾಡಬೇಕು ಎಂದು ಸೂಚನೆ ನೀಡಲಾಗಿದೆ. ಹಾಗೆಯೇ ಗೀತೆಯನ್ನು ನುಡಿಸಿದರೆ ಅಥವಾ ಹಾಡಿದರೆ ಎಲ್ಲರೂ ಕಡ್ಡಾಯವಾಗಿ ಎದ್ದು ನಿಲ್ಲಬೇಕು ಎಂದು ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ.
ಆರು ಚರಣಗಳನ್ನು ವಂದೇ ಮಾತರಂ ಗೀತೆಯ 3.10 ನಿಮಿಷಗಳ ಗೀತೆಯನ್ನು ನುಡಿಸಬೇಕು ಅಥವಾ ಹಾಡಬೇಕು. ಇದರಲ್ಲಿ ತ್ರಿವರ್ಣ ಧ್ವಜ ಹಾರಿಸುವಾಗ, ಸರ್ಕಾರಿ ಕಾರ್ಯಕ್ರಮಗಳಿಗೆ ರಾಷ್ಟ್ರಪತಿಗಳ ಆಗಮನದ ಸಮಯದಲ್ಲಿ, ಅವರ ಭಾಷಣಗಳು ಮತ್ತು ರಾಷ್ಟ್ರವನ್ನುದ್ದೇಶಿಸಿ ಭಾಷಣ ಮಾಡುವ ಮೊದಲು ಮತ್ತು ನಂತರ, ಹಾಗೆಯೇ ರಾಜ್ಯಪಾಲರ ಆಗಮನ ಮತ್ತು ಭಾಷಣಗಳ ಮೊದಲು ಮತ್ತು ನಂತರವೂ ಸೇರಿದೆ.
ಯಾವುದೇ ಸಾಕ್ಷ್ಯಚಿತ್ರಗಳ ಪ್ರದರ್ಶನಗಳ ಮಧ್ಯೆ ಗೀತೆ ಹಾಡಿದರೆ ಎದ್ದುನಿಲ್ಲುವ ಅಗತ್ಯವಿಲ್ಲ. 6 ಚರಣಗಳಿರುವ ವಂದೇ ಮಾತರಂ ಗೀತೆಯನ್ನು ಹಾಡುವುದು ಕಡ್ಡಾಯ ಈ ನಿರ್ದೇಶನವನ್ನು ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳು, ಸಚಿವಾಲಯಗಳು ಮತ್ತು ಸಾಂವಿಧಾನಿಕ ಸಂಸ್ಥೆಗಳಿಗೆ ಇಂಗ್ಲಿಷ್ ಮತ್ತು ಹಿಂದಿಯಲ್ಲಿ ನೀಡಲಾಗಿದೆ.
ಹೊಸದಿಲ್ಲಿ: ಉತ್ತರಾಖಂಡದ ಹಲ್ದ್ವಾನಿಯಲ್ಲಿ ತಾವು ಭಾಷಣ ಮಾಡಿದ್ದ ರಾಮಲೀಲಾ ಮೈದಾನದ ವೇದಿಕೆಯಲ್ಲಿ ‘ಶ್ರೀರಾಮ ಸೇನಾ’ ಸಂಘಟನೆಯು ಶುದ್ಧೀಕರಣ (ಹವನ) ನಡೆಸಿದ್ದಕ್ಕೆ…
ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ಹರಿಸಬೇಕು ಎಂಬ ನೀರು ನಿರ್ವಹಣಾ ಪ್ರಾಧಿಕಾರದ ಆದೇಶ ಖಂಡಿಸಿ ಹಾಗೂ…
ಮೈಸೂರು: ಮೈಸೂರಿನ ಶಂಕರ ಮಠದ ರಸ್ತಯಲ್ಲಿರುವ ಹೊಸ ಮಠದ ಚಿದಾನಂದ ಸ್ವಾಮೀಜಿ ಅವರು ಇಂದು ಲಿಂಗೈಕ್ಯರಾಗಿದ್ದಾರೆ. ವಯೋಸಹಜ ಆರೋಗ್ಯ ಸಮಸ್ಯೆಗಳಿಂದ…
ಅಧಿಕಾರಿಗಳ ತಪಾಸಣೆ ವೇಳೆ ಬೆಂಗಳೂರಿನ ಕೆಲವು ಪಂಚತಾರಾ ಹೋಟೆಲ್ಗಳಲ್ಲಿ, ಕೊಳೆತ ಮಾಂಸ, ಹಳೆಯ ತರಕಾರಿಗಳು ಇರುವುದು ಪತ್ತೆಯಾಗಿರುವುದೇ ಎಲ್ಲೆಲ್ಲೂ ಚರ್ಚಿತ…
೨೦೨೮ - ೨೯ ರ ಶೈಕ್ಷಣಿಕ ವರ್ಷದ ವೇಳೆಗೆ ದೇಶಾದ್ಯಂತ ಹೆಚ್ಚುವರಿಯಾಗಿ ೫,೦೦೦ ಸ್ನಾತಕೋತ್ತರ ವೈದ್ಯಕೀಯ ಸೀಟುಗಳನ್ನು ಸೇರ್ಪಡೆಗೊಳಿಸಿ ದೇಶದಲ್ಲಿ…
ಪ್ರಸ್ತುತ ವರ್ಷ ಮುಂಗಾರು ಕೈಕೊಟ್ಟಿದ್ದು ಎಲ್ನಿನೋ ಪರಿಣಾಮ ಎಂದು ವರದಿಗಳು ಹೇಳಿವೆ. ಜೊತೆಗೆ ಹವಾಮಾನ ಇಲಾಖೆ ಅದನ್ನು ಪುಷ್ಟೀಕರಿಸಿದ್ದು, ಈ…