ಶ್ರೀನಗರ: ಜಮ್ಮು-ಕಾಶ್ಮೀರದಲ್ಲಿ ಉಗ್ರರು ಮತ್ತೆ ಅಟ್ಟಹಾಸ ಮುಂದುವರಿಸಿದ್ದು, ಕಥುವಾ ಜಿಲ್ಲೆಯಲ್ಲಿ ಭಾರತೀಯ ಸೇನೆಯ ಬೆಂಗಾವಲು ವಾಹನದ ಮೇಲೆ ಉಗ್ರರು ದಾಳಿ ನಡೆಸಿದ್ದಾರೆ.
ಕಥುವಾ ಜಿಲ್ಲೆಯ ಮಚೇಡಿ ಪ್ರದೇಶದ ಜೆಂಡಾನಲ್ಲಾ ಗ್ರಾಮದ ಬಳಿ ಇಂದು ಮಧ್ಯಾಹ್ನ 3.30ರ ಸುಮಾರಿಗೆ ಸೇನಾ ವಾಹನಗಳನ್ನು ಗುರಿಯಾಗಿಸಿಕೊಂಡು ಉಗ್ರರು ದಾಳಿ ನಡೆಸಿದ್ದಾರೆ. ಉಗ್ರರ ದಾಳಿಯಲ್ಲಿ ಇಬ್ಬರು ಯೋಧರು ಗಾಯಗೊಂಡಿದ್ದಾರೆ ಎಂದು ಉನ್ನತ ಮೂಲಗಳು ತಿಳಿಸಿವೆ.
ಕಳೆದ ಎರಡು ದಿನಗಳಲ್ಲಿ ಇದು ಸೇನೆಯ ಮೇಲೆ ನಡೆದ ಎರಡನೇ ದಾಳಿಯಾಗಿದೆ. ಜೊತೆಗೆ ಒಂದು ವಾರದಲ್ಲಿ ಸೇನಾ ವಾಹನವನ್ನೇ ಗುರಿಯಾಗಿಸಿ ನಡೆಸಿದ ಎರಡನೇ ದಾಳಿಯೂ ಆಗಿದೆ. ಇತ್ತೀಚೆಗೆ ಇಲ್ಲಿನ ಕುಲ್ಗಾಮ್ ಜಿಲ್ಲೆಯಲ್ಲಿ ನಡೆದ 2 ಪ್ರತ್ಯೇಕ ಎನ್ಕೌಂಟರ್ಗಳಲ್ಲಿ ೬ ಭಯೋತ್ಪಾದಕರು ಮೃತಪಟ್ಟಿದ್ದರು.
ಭಾರತೀಯ ಸೇನೆಯ ವಾಹನ ತೆರಳುವ ಮಾಹಿತಿ ಪಡೆದಿದ್ದ ಉಗ್ರರು, ಯೋಜನೆ ರೂಪಿಸಿ ದಾಳಿ ಮಾಡಿದ್ದಾರೆ ಎನ್ನಲಾಗಿದೆ. ಭಯೋತ್ಪಾದಕರು ಗುಂಡಿನ ದಾಳಿ ನಡೆಸಿದ ನಂತರ ಸೈನಿಕರು ಪ್ರತಿದಾಳಿ ನಡೆಸಿದ್ದಾರೆ.
ಸದ್ಯ ಸೇನಾ ವಾಹನವನ್ನು ಗುರಿಯಾಗಿಸಿ ದಾಳಿ ನಡೆಸುತ್ತಿರುವ ಉಗ್ರರಿಗೆ ಭಾರತೀಯ ಸೇನೆಯ ಯೋಧರು ತಿರುಗೇಟು ನೀಡುತ್ತಿದ್ದಾರೆ. ಅರಣ್ಯ ಪ್ರದೇಶದಲ್ಲಿ ಸುಮಾರು 2-3 ಉಗ್ರರು ಅಡಗಿರುವ ಬಗ್ಗೆ ಶಂಕೆ ವ್ಯಕ್ತವಾಗಿದ್ದು, ಉಗ್ರರಿಗಾಗಿ ಶೋಧಕಾರ್ಯ ಮುಂದುವರಿದಿದೆ.
ಸೆಸ್ಕ್ ವತಿಯಿದ ಮೈಸೂರು ನಗರದಲ್ಲಿ ಕೈಗೊಂಡಿರುವ ಯೋಜನೆ ಮೈಸೂರು : ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ನಿಯಮಿತ (ಸೆಸ್ಕ್)ದಿಂದ ಮೈಸೂರು…
ಕೇರಳಂ : ಕೇರಳದ ನೂತನ ಮುಖ್ಯಮಂತ್ರಿಯಾಗಿ ವಿ.ಡಿ.ಸತೀಶನ್ ಆಯ್ಕೆಯಾಗಿದ್ದಾರೆ. ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಹಾಗೂ ಎಐಸಿಸಿ…
ಮೈಸೂರು : ಪ್ರಾಥಮಿಕ ತರಗತಿಯಿಂದ 12 ನೇ ತರಗತಿಯವರೆಗೆ ಜನಿವಾರ, ಹಿಜಾಬ್, ಉಡುದಾರ, ರುದ್ರಾಕ್ಷಿ ಹಾಕಿಕೊಳ್ಳಬಹುದು. ಈಗಾಗಲೇ ಸಾಂಪ್ರದಾಯಿಕವಾಗಿ ಅನುಸರಿಸುವ…
ಬೀಚಿಂಗ್ : ಚೀನಾದ ವಿರುದ್ಧ ಬಹಿರಂಗವಾಗಿಯೇ ಆಕ್ರೋಶ ಹೊರಹಾಕುತ್ತಿದ್ದ ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈಗ ಚೀನಾವನ್ನು ಹಾಡಿ ಹೊಗಳಿದ್ದಾರೆ.…
ನವದೆಹಲಿ : ಸ್ಲೀಪರ್ ಬಸ್ನಲ್ಲಿ ಪ್ರಯಾಣಿಸುತ್ತಿದ್ದ ಮಹಿಳೆಯ ಮೇಲೆ ಮೂಹಿಕ ಅತ್ಯಾಚಾರ ಎಸಗಿರುವ ಘಟನೆ ದೆಹಲಿಯ ನಂಗ್ಲೋಯಿಯಲ್ಲಿ ನಡೆದಿದೆ. ಬಸ್ಸಿನಲ್ಲಿ…
ಶಿಥಿಲಗೊಂಡಿರುವ ಸುಮಾರು 130 ವರ್ಷ ಇತಿಹಾಸ ಹೊಂದಿರುವ ಕಟ್ಟಡ ಕೆ.ಪಿ.ಮದನ್ ಮೈಸೂರು : ಪುಟ್ಟದಾದರೂ ವಿಶಿಷ್ಟ ವಾಸ್ತು ಶೈಲಿಯಿಂದ ಗಮನಸೆಳೆಯುವ…