ದೇಶ- ವಿದೇಶ

ಬಾಲಿವುಡ್‌ ಹಿರಿಯ ನಟ ಸತೀಶ್‌ ಶಾ ನಿಧನ

ಮುಂಬೈ : ಜಾನೆ ಭಿ ದೋ ಯಾರೋ, ಮೈ ಹೂ ನಾ ಮತ್ತು ಹಿಟ್ ಟಿವಿ ಶೋ ಸಾರಾಭಾಯಿ ವರ್ಸಸ್ ಸಾರಾಭಾಯಿ ಸೇರಿದಂತೆ ಹಲವು ಚಿತ್ರಗಳಲ್ಲಿ ಅಭಿನಯಿಸಿದ್ದ ಬಾಲಿವುಡ್ ಹಿರಿಯ ನಟ ಸತೀಶ್ ಶಾ ಅವರು ಶನಿವಾರ ನಿಧನರಾಗಿದ್ದಾರೆ. ಅವರಿಗೆ 74 ವರ್ಷ ವಯಸ್ಸಾಗಿತ್ತು.

ಹಿರಿಯ ನಟ ಸತೀಶ್ ಶಾ ಅವರು ಇಂದು ಮಧ್ಯಾಹ್ನ ಬಾಂದ್ರಾ ಪೂರ್ವದಲ್ಲಿರುವ ತಮ್ಮ ನಿವಾಸದಲ್ಲಿ ನಿಧನರಾದರು ಎಂದು 30 ವರ್ಷಗಳಿಗೂ ಹೆಚ್ಚು ಕಾಲ ಅವರ ಆಪ್ತ ಸಹಾಯಕರಾಗಿರುವ ರಮೇಶ್ ಕಡತಲ ಅವರು ತಿಳಿಸಿದ್ದಾರೆ.

“ಸತೀಶ್ ಶಾ ಅವರು ಹೃದಯಾಘಾತದಿಂದ ನಿಧನರಾದಂತೆ ತೋರುತ್ತಿದೆ. ಆದರೆ ಅವರ ಸಾವಿನ ಹಿಂದಿನ ಕಾರಣ ತಿಳಿಯಲು ವೈದ್ಯರಿಂದ ಅಂತಿಮ ವರದಿಗಳಿಗಾಗಿ ನಾವು ಕಾಯುತ್ತಿದ್ದೇವೆ” ಎಂದು ಕಡತಲ ಪಿಟಿಐಗೆ ತಿಳಿಸಿದ್ದಾರೆ.

ಸತೀಶ್ ಶಾ ಅವರ ನಿಧನಕ್ಕೆ ಹಿಂದಿ ಕಿರುತೆರೆ ವಲಯ ಮತ್ತು ಬಾಲಿವುಡ್‌ ಕಂಬನಿ ಮಿಡಿದಿದ್ದು ಹಲವರು ತೀವ್ರ ಸಂತಾಪ ಸೂಚಿಸಿದ್ದಾರೆ.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಸ್ವಾಗತಾರ್ಹ ಸಂಕಲ್ಪ!

ಸ್ವಾಗತಾರ್ಹ ಸಂಕಲ್ಪ! ಮತ್ತೆ ಗುಡಿಗಿದ್ದಾರೆ ಮುಖ್ಯಮಂತ್ರಿಗಳು ‘ಭ್ರಷ್ಟಾಚಾರಿಗಳ ಬಡಿದು ಹಾಕುವೆ’ಎಂದು ಅಭಿವೃದ್ಧಿಗೆ ಮಾರಕ ಪ್ರಜೆಗಳ ಶೋಷಕ ಈ ಭ್ರಷ್ಟಾಚಾರ ಎಂಬ…

3 hours ago

ಓದುಗರ ಪತ್ರ: ಸತ್ಪ್ರಜೆಗಳಾಗಿ ಜೀವಿಸುವುದೇ ಸ್ವಾತಂತ್ರ್ಯ ಹೋರಾಟಗಾರರಿಗೆ ನಾವು ನೀಡುವ ಗೌರವ

ಆಗಸ್ಟ್ ಹದಿನೈದು ಬಂತೆಂದರೆ ಸಾಕು, ನಮ್ಮಲ್ಲಿ ದೇಶಪ್ರೇಮದ ರೋಮಾಂಚನ. ಶಾಲೆ-ಕಚೇರಿಗಳಲ್ಲಿ ರಾಷ್ಟ್ರಧ್ವಜರೋಹಣ, ಸಿಹಿತಿಂಡಿ ಹಂಚಿಕೆ, ದೇಶಭಕ್ತಿ ಗೀತೆಗಳು ಮತ್ತು ಭಾಷಣಗಳು…

3 hours ago

ಓದುಗರ ಪತ್ರ: ಸೇತುವೆ ಅವ್ಯವಸ್ಥೆ; ಸಂಚಾರ ದುಸ್ತರ

ಮೈಸೂರು ತಾಲ್ಲೂಕಿನ ಬ್ಯಾತಹಳ್ಳಿ ಮತ್ತು ದಡದಹಳ್ಳಿ ನಡುವೆ ಹರಿಯುತ್ತಿರುವ ಎಣ್ಣೆಹೊಳೆ ದಾಟಲು ಸೇತುವೆಯೊಂದನ್ನು ನಿರ್ಮಿಸಲಾಗಿದೆ. ಇದು ಅತ್ಯಂತ ದುಸ್ಥಿತಿಯಲ್ಲಿದೆ. ಈ…

3 hours ago

ಕಪ್ಪು ವರ್ಣೀಯರ ಕಣ್ಣೀರ ಕಥನ

ಗೋವಿಂದರಾಜು ಲಕ್ಷ್ಮೀಪುರ, ಇಂಗ್ಲಿಷ್ ಸಹಪ್ರಾಧ್ಯಾಪಕ, ಮಹಾರಾಣಿ ಮಹಿಳಾ ವಿಜ್ಞಾನ ಕಾಲೇಜು, ಮೈಸೂರು ಐಪಿಎಸ್ ಅಧಿಕಾರಿ ಚೆನ್ನಬಸವಣ್ಣ ಅವರ ಅಲ್ಕೆಬುಲಾನದ ಹೃದಯದಿಂದ…

3 hours ago

ಯಶ್: ‘ಟಾಕ್ಸಿಕ್’ ಬೆನ್ನೇರಿದ ಯಶೋ ಮಾರ್ಗ

ವೈಡ್‌ ಆಂಗಲ್ ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ  ‘ಫಸ್ಟ್ , ಯು ಹ್ಯಾವ್ ಟು ಬಿಲೀವ್ ಇನ್ ಇಟ್, ದೆನ್…

3 hours ago

ರೈತರ ಪಾಲಿಗೆ ಕಹಿಯಾದ ಸಿಹಿಗುಂಬಳ

ದಾ.ರಾ.ಮಹೇಶ್ ಹನಗೋಡು ಹೋಬಳಿ ರೈತರು ಬೆಳೆದ ಸಿಹಿಗುಂಬಳಕ್ಕೆ ದೊರೆಯದ ಮಾರುಕಟ್ಟೆ  ವೀರನಹೊಸಹಳ್ಳಿ: ಜೋಳ, ಶುಂಠಿ, ಮತ್ತಿತರ ಸಾಂಪ್ರದಾಯಿಕ ಕೃಷಿ ಬಿಟ್ಟು…

3 hours ago