ದೇಶ- ವಿದೇಶ

ಉಪ ರಾಷ್ಟ್ರಪತಿ ಚುನಾವಣೆ : ಎನ್‌ಡಿಎ ಅಭ್ಯರ್ಥಿಯಾಗಿ ಸಿ.ಪಿ ರಾಧಾಕೃಷ್ಣನ್‌ ಕಣಕ್ಕೆ

ಹೊಸದಿಲ್ಲಿ : ಉಪರಾಷ್ಟ್ರಪತಿ ಚುನಾವಣೆಗೆ ಆಡಳಿತರೂಢ ಎನ್‌ಡಿಎ ಮೈತ್ರಿಕೂಟದ ಅಭ್ಯರ್ಥಿಯಾಗಿ ಮಹಾರಾಷ್ಟ್ರ ರಾಜ್ಯಪಾಲ ಸಿ.ಪಿ ರಾಧಾಕೃಷ್ಣನ್ ಅವರು ಕಣಕ್ಕಿಳಿಯಲಿದ್ದಾರೆ.

ಭಾನುವಾರ ಹೊಸದಿಲ್ಲಿಯ ಪಕ್ಷದ ಪ್ರಧಾನ ಕಚೇರಿಯಲ್ಲಿ ಭಾರತೀಯ ಜನತಾ ಪಕ್ಷವು ತನ್ನ ಸಂಸದೀಯ ಮಂಡಳಿಯ ಸಭೆಯನ್ನು ನಡೆಸಿತು. ಬಳಿಕ ಅಭ್ಯರ್ಥಿಯನ್ನು ಘೋಷಿಸಿತು.

ಸಿ.ಪಿ ರಾಧಕೃಷ್ಣನ್‌ ಕೊಯಮತ್ತೂರಿನಿಂದ ಎರಡು ಭಾರಿ ಸಂಸದರಾಗಿದ್ದರು. ಮಾಜಿ ಪ್ರಧಾನಿ ವಾಜಪೇಯಿ ಮತ್ತು ಬಿಜೆಪಿ ನಾಯಕ ಎಲ್.ಕೆ ಅಡ್ವಾಣಿ ಅವರ ನಾಯಕತ್ವದಡಿ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ.

ಜಗದೀಪ್ ಧಂಖರ್ (74) ಅವರು ಆರೋಗ್ಯ ಕಾರಣಗಳನ್ನು ನೀಡಿ ಜುಲೈ 21, 2025 ರಂದು ಉಪ ರಾಷ್ಟ್ರಪತಿ ಹುದ್ದೆಗೆ ರಾಜೀನಾಮೆ ನೀಡಿದ್ದರು. ಭಾರತದ ಉಪರಾಷ್ಟ್ರಪತಿ ಚುನಾವಣೆಗೆ ಚುನಾವಣಾ ಆಯೋಗ ವೇಳಾಪಟ್ಟಿಯನ್ನು ಪ್ರಕಟಿಸಿದೆ. ಸೆಪ್ಟೆಂಬರ್ 9 ರಂದು ಬೆಳಿಗ್ಗೆ 10 ರಿಂದ ಸಂಜೆ 5 ರವರೆಗೆ ಸಂಸತ್ ಭವನದ ಮೊದಲ ಮಹಡಿಯಲ್ಲಿ ಮತದಾನ ನಡೆಯಲಿದೆ.

ಆಂದೋಲನ ಡೆಸ್ಕ್

Recent Posts

ಘೋಷಣೆಗೆ ಸೀಮಿತವಾದ ವಾಣಿಜ್ಯ ಗ್ಯಾಸ್ ಪೂರೈಕೆ

ಪ್ರಶಾಂತ್ ಮಲ್ಲಿಕ್‌  ಹೋಟೆಲ್ ಉದ್ಯಮದ ಕಂಗಾಲು ಸ್ಥಿತಿ ಮುಂದುವರಿಕೆ ಮೈಸೂರಲ್ಲಿ ಶೇ.೧೦ರಷ್ಟು ಹೋಟೆಲ್‌ಗಳು ಬಂದ್ ಗ್ಯಾಸ್ ಸಿಗದ ಕಾರಣ ಸೌದೆಗೆ…

3 hours ago

ಇಂದಿರಾ ಕ್ಯಾಂಟೀನ್‌ಗೂ ಸಂಕಷ್ಟ ; ಸೀಮಿತಗೊಂಡ ತಿನಿಸುಗಳ ತಯಾರಿ

ನವೀನ್ ಡಿಸೋಜ ಹೋಟೆಲ್‌ಗಳಿಗೆ ಪೂರೈಕೆಯಾಗದ ವಾಣಿಜ್ಯ ಬಳಕೆಯ ಅನಿಲ ಸಿಲಿಂಡರ್ ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಅಗತ್ಯವಿರುವಷ್ಟು ವಾಣಿಜ್ಯ ಬಳಕೆಯ ಅನಿಲ…

3 hours ago

ಮಂಡ್ಯ ಜಿಲ್ಲೆಯ 307 ಗ್ರಾಮಗಳಲ್ಲಿ ನೀರಿನ ಸಮಸ್ಯೆ

ಖಾಸಗಿ ಬೋರ್‌ವೆಲ್‌ಗಳನ್ನು ವಶಕ್ಕೆ ಪಡೆದು ನೀರು ಪೂರೈಸಲು ಜಿಲ್ಲಾಡಳಿತ ನಿರ್ಧಾರ ಮಂಡ್ಯ: ಪಂಚ ನದಿಗಳು ಹರಿಯುವ ಮಂಡ್ಯ ಜಿಲ್ಲೆಯಲ್ಲಿ ಬೇಸಿಗೆ…

3 hours ago

ಚಾಮುಂಡಿ ವಿಹಾರದಲ್ಲಿರುವ ಈಜುಕೊಳಕ್ಕೆ ಹೈಟೆಕ್ ಸ್ಪರ್ಶ!

ಚಿರಂಜೀವಿ ಸಿ.ಹುಲ್ಲಹಳ್ಳಿ ದಸರಾ ವೇಳೆ ಆರಂಭವಾಗಿದ್ದ ಕಾಮಗಾರಿ ಈಗ ಪೂರ್ಣ; ಈಜು ಸ್ಪರ್ಧೆಗಳು ಆರಂಭ ಮೈಸೂರು: ನಗರದ ಚಾಮುಂಡಿವಿಹಾರ ಕ್ರೀಡಾಂಗಣದಲ್ಲಿರುವ…

3 hours ago

ರಸ್ತೆಗೆ ಹರಿಯುತ್ತಿರುವ ಒಳಚರಂಡಿ ಕೊಳಚೆ ನೀರು

೬ ತಿಂಗಳಿಂದ ಪರಿಹಾರವಾಗದ ಸಮಸ್ಯೆ; ರಾಮಕೃಷ್ಣನಗರ ‘ಐ’ ಬ್ಲಾಕ್ ನಿವಾಸಿಗಳಿಗೆ ನರಕಯಾತನೆ ಮೈಸೂರು: ರಾಮಕೃಷ್ಣನಗರ ‘ಐ’ ಬ್ಲಾಕ್‌ನ ೨ನೇ ಮುಖ್ಯರಸ್ತೆಯಲ್ಲಿ…

3 hours ago

ನಾಮಪತ್ರ ಭರಾಟೆ

ಬೆಂಗಳೂರು: ರಾಜ್ಯದಲ್ಲಿ ಬೇಸಿಗೆಯ ಬಿಸಿಲಿನ ಝಳ ಏರುತ್ತಿರುವಾಗಲೇ ಉಪಚುನಾವಣೆಯ ಕಾವೂ ಏರತೊಡಗಿದ್ದು, ದಾವಣಗೆರೆ ದಕ್ಷಿಣ ಮತ್ತು ಬಾಗಲಕೋಟೆ ವಿಧಾನಸಭಾ ಕ್ಷೇತ್ರಗಳ…

3 hours ago