ದೇಶ- ವಿದೇಶ

ವಿಜಯ್‌ ಮಲ್ಯ, ನೀರವ್‌ ಮೋದಿ ಶೀಘ್ರ ಗಡಿಪಾರು

ಹೊಸದಿಲ್ಲಿ : ಭಾರತದ ವಿವಿಧ ಬ್ಯಾಂಕ್‌ಗಳಿಗೆ ಸಾವಿರಾರು ಕೋಟಿ ರೂ.ಗಳನ್ನು ವಂಚಿಸಿ ವಿದೇಶಗಳಿಗೆ ಪರಾರಿಯಾಗಿರುವ ವಿಜಯ್ ಮಲ್ಯ, ನೀರವ್ ಮೋದಿ ಸೇರಿದಂತೆ ಬ್ರಿಟನ್‌ನಲ್ಲಿರುವ ಕೆಲವು ದೇಶಭ್ರಷ್ಟರು ಶೀಘ್ರದಲ್ಲೇ ಭಾರತಕ್ಕೆ ಗಡೀಪಾರಾಗುವ ಬೆಳವಣಿಗೆಗಳು ಕಂಡು ಬರುತ್ತಿವೆ.

ಯುನೈಟೆಡ್ ಕಿಂಗ್‌ಡಮ್‌ನಲ್ಲಿ (ಯು.ಕೆ.) ಅವಿತಿರುವ ವಿಜಯ್ ಮಲ್ಯ, ನೀರವ್ ಮೋದಿಯವರನ್ನು ಭಾರತಕ್ಕೆ ಹಸ್ತಾಂತರಿಸಲು ಅಲ್ಲಿನ ನ್ಯಾಯಾಂಗ ವ್ಯವಸ್ಥೆ ಈಗಾಗಲೇ ಒಪ್ಪಿಗೆ ನೀಡಿದ್ದು, ಈಗಾಗಲೇ ಅಲ್ಲಿನ ತಜ್ಞರ ತಂಡವೊಂದು ರಾಷ್ಟ್ರ ರಾಜಧಾನಿ ದೆಹಲಿಯಲ್ಲಿರುವ ತಿಹಾರ್ ಜೈಲಿನಲ್ಲಿ ಮಲ್ಯ ಅಥವಾ ನೀರವ್ ಮೋದಿಯವರಿಗಾಗಿ ನಿಗದಿಗೊಳಿಸಲಾಗಿರುವ ಹೈ ಸೆಕ್ಯುರಿಟಿ ಜೈಲು ಕೊಠಡಿಗಳ ಸಮುಚ್ಚಯಕ್ಕೆ ಭೇಟಿ ನೀಡಿ ಅಲ್ಲಿನ ಪರಿಸ್ಥಿತಿಗಳನ್ನು ಅವಲೋಕಿಸಿದೆ.

ಈಗಾಗಲೇ ಉದ್ಯಮಿ ವಿಜಯ್ ಮಲ್ಯ, ನೀರವ್ ಮೋದಿ ಮುಂತಾದವರನ್ನು ಭಾರತಕ್ಕೆ ಹಸ್ತಾಂತರಿಸುವಂತೆ ಭಾರತ ಸರ್ಕಾರ, ಯುಕೆ ಸರ್ಕಾರಕ್ಕೆ ಮನವಿ ಮಾಡಿದೆ. ಇವರಷ್ಟೇ ಅಲ್ಲದೆ, ಯುಕೆನಲ್ಲಿ ನೆಲೆಸಿರುವ ಭಾರತೀಯ ಮೂಲದ ಕಳ್ಳಸಾಗಣೆದಾರರು, ಅಕ್ರಮ ಶಸ್ತ್ರಾಸ್ತ್ರ ಸರಬರಾಜುದಾರರು ಸೇರಿ ಒಟ್ಟು ೨೦ ಮಂದಿಯನ್ನು ಭಾರತಕ್ಕೆ ಗಡೀಪಾರು ಮಾಡುವಂತೆ ಭಾರತ ಸರ್ಕಾರ, ಯುಕೆ ಸರ್ಕಾರವನ್ನು ಕೋರಿದೆ.

ಆಂದೋಲನ ಡೆಸ್ಕ್

Recent Posts

ಹಣ ದ್ವಿಗುಣಗೊಳಿಸುವುದಾಗಿ ೨೮ ಲಕ್ಷ ರೂ. ವಂಚನೆ; ದೂರು ದಾಖಲು

ಕೊಳ್ಳೇಗಾಲ: ಹಣ ದ್ವಿಗುಣಗೊಳಿಸಿಕೊಡುವುದಾಗಿ ಆಮಿಷ ಒಡ್ಡಿ, ಒಟ್ಟು ೨೮.೮೮ ಲಕ್ಷ ರೂ.ಗಳನ್ನು ವಂಚಿಸಿರುವ ಬಗ್ಗೆ ಪಟ್ಟಣ ಪೊಲೀಸ್ ಠಾಣೆಯಲ್ಲಿ ಮಮತಾ…

6 hours ago

ಅಂಬಳೆ: ಚಾಮುಂಡೇಶ್ವರಿ ದೇಗುಲದಲ್ಲಿ ಕಳ್ಳತನ

ಯಳಂದೂರು:ತಾಲ್ಲೂಕಿನ ಅಂಬಳೆ ಗ್ರಾಮದಲ್ಲಿರುವ ಸುವರ್ಣಾವತಿ ನದಿ ದಡಲ್ಲಿರುವ ಐತಿಹಾಸಿಕ ಚಾಮುಂಡೇಶ್ವರಿ ದೇಗುದಲ್ಲಿ ಗುರುವಾರ ರಾತ್ರಿ ಕಳ್ಳತನ ನಡೆದಿದ್ದು, ಲಕ್ಷಾಂತರ ರೂ.…

7 hours ago

ಇಂಡಿಗೋ ವಿಮಾನ ಹಾರಾಟದಲ್ಲಿ ವ್ಯತ್ಯಯ ಬೆನ್ನಲ್ಲೇ ಪೈಲಟ್‌ಗಳ ರಜಾ ನಿಯಮ ಸಡಿಲಿಸಿದ ಡಿಜಿಸಿಎ

ನವದೆಹಲಿ: ದೇಶಾದ್ಯಂತ ಇಂಡಿಗೋ ವಿಮಾನದ ಹಾರಾಟದಲ್ಲಿ ಭಾರೀ ವ್ಯತ್ಯಯ ಉಂಟಾದ ಬೆನ್ನಲ್ಲೇ ಕೇಂದ್ರ ನಾಗರಿಕ ವಿಮಾನಯಾನ ನಿರ್ದೇಶನಾಲಯ ಪೈಲಟ್‌ಗಳ ರಜಾ…

8 hours ago

ಕೆಪಿಸಿಸಿ ಅಧ್ಯಕ್ಷ ಸ್ಥಾನದ ಬಗ್ಗೆ ಚರ್ಚೆಯಾಗಿಲ್ಲ: ಸತೀಶ್‌ ಜಾರಕಿಹೊಳಿ

ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಸ್ಥಾನದ ಬಗ್ಗೆ ಚರ್ಚೆಯಾಗಿಲ್ಲ ಎಂದು ಲೋಕೋಪಯೋಗಿ ಸಚಿವ ಸತೀಶ್‌ ಜಾರಕಿಹೊಳಿ ಹೇಳಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿ…

9 hours ago

ಶಾಲಾ ಪಠ್ಯದಲ್ಲಿ ಭಗವದ್ಗೀತೆ ಬೋಧನೆ: ಕೇಂದ್ರದ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ಗೆ ಎಚ್‌ಡಿಕೆ ಪತ್ರ

ನವದೆಹಲಿ: ಕಾಲಾತೀತ, ಮೌಲ್ಯಾಧರಿತ ಆದರ್ಶಗಳನ್ನು ಒಳಗೊಂಡಿರುವ ಭಗವದ್ಗೀತೆಯನ್ನು ವಿದ್ಯಾರ್ಥಿಗಳಿಗೆ ಬೋಧಿಸಲು ಪಠ್ಯದಲ್ಲಿ ಸೇರಿಸಬೇಕು ಎಂದು ಕೇಂದ್ರದ ಬೃಹತ್ ಕೈಗಾರಿಕೆ ಮತ್ತು…

10 hours ago

ಸೋಲು, ಗೆಲುವಿಗಿಂತ ಕ್ರೀಡೆಯಲ್ಲಿ ಭಾಗವಹಿಸುವುದು ಮುಖ್ಯ: ತಹಶೀಲ್ದಾರ್‌ ಶಿವಕುಮಾರ್‌ ಕಾಸ್ನೂರು

ನಂಜನಗೂಡು: ಸೋಲು, ಗೆಲುವಿಗಿಂತ ಕ್ರೀಡೆಯಲ್ಲಿ ಭಾಗವಹಿಸುವುದು ಮುಖ್ಯ ಎಂದು ತಹಶೀಲ್ದಾರ್‌ ಶಿವಕುಮಾರ್‌ ಕಾಸ್ನೂರು ಹೇಳಿದರು. ನಂಜನಗೂಡು ನಗರದ ಕಾಲೇಜೊಂದರಲ್ಲಿ ಆಯೋಜಿಸಿದ್ದ…

10 hours ago