ದೇಶ- ವಿದೇಶ

ವಿಜಯ್‌ ಮಲ್ಯ, ನೀರವ್‌ ಮೋದಿ ಶೀಘ್ರ ಗಡಿಪಾರು

ಹೊಸದಿಲ್ಲಿ : ಭಾರತದ ವಿವಿಧ ಬ್ಯಾಂಕ್‌ಗಳಿಗೆ ಸಾವಿರಾರು ಕೋಟಿ ರೂ.ಗಳನ್ನು ವಂಚಿಸಿ ವಿದೇಶಗಳಿಗೆ ಪರಾರಿಯಾಗಿರುವ ವಿಜಯ್ ಮಲ್ಯ, ನೀರವ್ ಮೋದಿ ಸೇರಿದಂತೆ ಬ್ರಿಟನ್‌ನಲ್ಲಿರುವ ಕೆಲವು ದೇಶಭ್ರಷ್ಟರು ಶೀಘ್ರದಲ್ಲೇ ಭಾರತಕ್ಕೆ ಗಡೀಪಾರಾಗುವ ಬೆಳವಣಿಗೆಗಳು ಕಂಡು ಬರುತ್ತಿವೆ.

ಯುನೈಟೆಡ್ ಕಿಂಗ್‌ಡಮ್‌ನಲ್ಲಿ (ಯು.ಕೆ.) ಅವಿತಿರುವ ವಿಜಯ್ ಮಲ್ಯ, ನೀರವ್ ಮೋದಿಯವರನ್ನು ಭಾರತಕ್ಕೆ ಹಸ್ತಾಂತರಿಸಲು ಅಲ್ಲಿನ ನ್ಯಾಯಾಂಗ ವ್ಯವಸ್ಥೆ ಈಗಾಗಲೇ ಒಪ್ಪಿಗೆ ನೀಡಿದ್ದು, ಈಗಾಗಲೇ ಅಲ್ಲಿನ ತಜ್ಞರ ತಂಡವೊಂದು ರಾಷ್ಟ್ರ ರಾಜಧಾನಿ ದೆಹಲಿಯಲ್ಲಿರುವ ತಿಹಾರ್ ಜೈಲಿನಲ್ಲಿ ಮಲ್ಯ ಅಥವಾ ನೀರವ್ ಮೋದಿಯವರಿಗಾಗಿ ನಿಗದಿಗೊಳಿಸಲಾಗಿರುವ ಹೈ ಸೆಕ್ಯುರಿಟಿ ಜೈಲು ಕೊಠಡಿಗಳ ಸಮುಚ್ಚಯಕ್ಕೆ ಭೇಟಿ ನೀಡಿ ಅಲ್ಲಿನ ಪರಿಸ್ಥಿತಿಗಳನ್ನು ಅವಲೋಕಿಸಿದೆ.

ಈಗಾಗಲೇ ಉದ್ಯಮಿ ವಿಜಯ್ ಮಲ್ಯ, ನೀರವ್ ಮೋದಿ ಮುಂತಾದವರನ್ನು ಭಾರತಕ್ಕೆ ಹಸ್ತಾಂತರಿಸುವಂತೆ ಭಾರತ ಸರ್ಕಾರ, ಯುಕೆ ಸರ್ಕಾರಕ್ಕೆ ಮನವಿ ಮಾಡಿದೆ. ಇವರಷ್ಟೇ ಅಲ್ಲದೆ, ಯುಕೆನಲ್ಲಿ ನೆಲೆಸಿರುವ ಭಾರತೀಯ ಮೂಲದ ಕಳ್ಳಸಾಗಣೆದಾರರು, ಅಕ್ರಮ ಶಸ್ತ್ರಾಸ್ತ್ರ ಸರಬರಾಜುದಾರರು ಸೇರಿ ಒಟ್ಟು ೨೦ ಮಂದಿಯನ್ನು ಭಾರತಕ್ಕೆ ಗಡೀಪಾರು ಮಾಡುವಂತೆ ಭಾರತ ಸರ್ಕಾರ, ಯುಕೆ ಸರ್ಕಾರವನ್ನು ಕೋರಿದೆ.

ಆಂದೋಲನ ಡೆಸ್ಕ್

Recent Posts

ದಿಲ್ಲಿ ಗಣರಾಜ್ಯೋತ್ಸವಕ್ಕೆ ಬೆದರಿಕೆ : ಗುರುಪತ್ವಂತ್‌ ಸಿಂಗ್‌ ವಿರುದ್ಧ ಎಫ್‌ಐಆರ್‌

ಹೊಸದಿಲ್ಲಿ : ಗಣರಾಜ್ಯೋತ್ಸವಕ್ಕೂ ಮುನ್ನ ರಾಷ್ಟ್ರ ರಾಜಧಾನಿಯಲ್ಲಿ ಅಶಾಂತಿ ಸೃಷ್ಟಿಸುವುದಾಗಿ ಬೆದರಿಕೆ ಹಾಕಿದ್ದಕ್ಕಾಗಿ ಸಿಖ್ ಫಾರ್ ಜಸ್ಟೀಸ್ ನಿಯೋಜಿತ ಭಯೋತ್ಪಾದಕ…

3 hours ago

ಕಾಡಾನೆಗಳ ಲಗ್ಗೆ : ಕಬ್ಬಿನ ಫಸಲು ನಾಶ, ಪರಿಹಾರಕ್ಕಾಗಿ ಒತ್ತಾಯ

ಭಾರತೀನಗರ : ಇಲ್ಲಿಗೆ ಸಮೀಪದ ಕೆ.ಪಿ.ದೊಡ್ಡಿ ಗ್ರಾಮದಲ್ಲಿ 5 ಕಾಡಾನೆಗಳ ಹಿಂಡು ಬೀಡುಬಿಟ್ಟು ಕಬ್ಬಿನ ಬೆಳೆ ಫಸಲನ್ನು ನಾಶಗೊಳಿಸಿರುವ ಘಟನೆ…

4 hours ago

ಕೊಡಗಿನ ತಿತಿಮತಿಯಲ್ಲಿ ಹುಲಿ ಪ್ರತ್ಯಕ್ಷ ; ಸ್ಥಳೀಯರಲ್ಲಿ ಆತಂಕ

ಮಡಿಕೇರಿ : ಮೈಸೂರು-ಗೋಣಿಕೊಪ್ಪ ಹೆದ್ದಾರಿಯ ದಕ್ಷಿಣ ಕೊಡಗಿನ ತಿತಿಮತಿ ವ್ಯಾಪ್ತಿಯಲ್ಲಿ ಹುಲಿಯೊಂದು ಕಾಣಿಸಿಕೊಂಡು ಆತಂಕ ಸೃಷ್ಟಿಸಿದ್ದು, ಹುಲಿ ಸೆರೆಗೆ ಶಾಸಕ…

5 hours ago

ಖಾಸಗಿ ಶಾಲೆಗಳನ್ನು ನಾಚಿಸುವ ಹೈಟೆಕ್ ಸರ್ಕಾರಿ ಶಾಲೆ : ಆದರೆ ಮಕ್ಕಳ ದಾಖಲಾತಿ ಕೇವಲ 40!

ನಂಜನಗೂಡು : ತಾಲ್ಲೂಕಿನ ಕಲ್ಲಹಳ್ಳಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯು ಖಾಸಗಿ ಶಾಲೆಗಳನ್ನು ಸಹ ನಾಚಿಸುವಂತಹ ಆಧುನಿಕ ಸೌಲಭ್ಯಗಳನ್ನು…

5 hours ago

ಮಂಡ್ಯದಲ್ಲಿ ಕೈಗಾರಿಕೆ ಸ್ಥಾಪನೆಗೆ ಜಾಗ ನೀಡುವಂತೆ ಸಿಎಂಗೆ ಪತ್ರ ಬರೆದಿದ್ದೇನೆ : ಎಚ್‌ಡಿಕೆ

ಬೃಹತ್ ಕೈಗಾರಿಕೆ ಸಚಿವಾಲಯ ಅಧೀನದ ಎಆರ್‌ಎಐ ಘಟಕ ಸ್ಥಾಪನೆಗೆ ಪರಿಶೀಲನೆ ನಡೆಯುತ್ತಿದೆ : ಕುಮಾರಸ್ವಾಮಿ ಮಂಡ್ಯ : ಜಿಲ್ಲೆಯಲ್ಲಿ ಕೈಗಾರಿಕೆ…

5 hours ago

ರಾಜ್ಯವೇ ನನ್ನ ಪರಿಮಿತಿ, ಜನ ಬಯಸಿದ ಕಡೆ ಸ್ಪರ್ಧೆ : ಎಚ್‌.ಡಿ.ಕುಮಾರಸ್ವಾಮಿ

ಮಂಡ್ಯ : ಕರ್ನಾಟಕ ರಾಜ್ಯವೇ ನನ್ನ ಪರಿಮಿತಿ. ಜನರು ಎಲ್ಲಿ ಅಪೇಕ್ಷೆ ಮಾಡುತ್ತಾರೆ ಅಲ್ಲಿಂದ ನನ್ನ ಸ್ಪರ್ಧೆ ಮಾಡುತ್ತೇನೆ ಎನ್ನುವ…

5 hours ago