ದೇಶ- ವಿದೇಶ

ಪ್ರಮಾಣ ವಚನ ಸಮಾರಂಭಕ್ಕೆ ವಿಜಯ್‌ ಪತ್ನಿ, ಮಕ್ಕಳು ಗೈರು

ಚೆನ್ನೈ : ದಳಪತಿ ವಿಜಯ್ ತಮಿಳುನಾಡಿನ ನೂತನ ಮುಖ್ಯಮಂತ್ರಿ ಆಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಸಮಾರಂಭದಲ್ಲಿ ಅನೇಕ ಗಣ್ಯರು ಸೇರಿದ್ದರು. ಆದರೆ ವಿಜಯ್ ಅವರ ಪತ್ನಿ ಸಂಗೀತಾ ಮತ್ತು ಮಕ್ಕಳು ಸಮಾರಂಭಕ್ಕೆ ಗೈರಾಗಿದ್ದರು. ಈ ವಿಚಾರ ಈಗ ಸಾಮಾಜಿಕ ಜಾಲತಾಣದಲ್ಲಿ ಭಾರಿ ಚರ್ಚೆಗೆ ಕಾರಣವಾಗಿದೆ.

ವಿಜಯ್ ಪೋಷಕರು, ಆಪ್ತರು ಹಾಗೂ ನಟಿ ತ್ರಿಷಾ ಕೃಷ್ಣನ್ ಕೂಡ ಸಮಾರಂಭದಲ್ಲಿ ಕಾಣಿಸಿಕೊಂಡಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಚರ್ಚೆಗಳಿಗೆ ಕಾರಣವಾಗಿದೆ.

ವಿಜಯ್ ಮತ್ತು ತ್ರಿಷಾ ಇಬ್ಬರು ಡೇಟಿಂಗ್ ಮಾಡುತ್ತಿದ್ದಾರೆ ಎಂಬ ಗಾಸಿಪ್ ಆಗಾಗ ಕೇಳಿಬರುತ್ತಿತ್ತು. ಅಷ್ಟೇ ಅಲ್ಲ ಇಬ್ಬರೂ ಹಲವು ಬಾರಿ ಸಾರ್ವಜನಿಕ ಕಾರ್ಯಕ್ರಮಗಳಲ್ಲಿ ಒಟ್ಟಿಗೆ ಕಾಣಿಸಿಕೊಂಡಿದ್ದರಿಂದ ಈ ವದಂತಿ ನಿಜವಿರಬಹುದೆನೋ ಎಂದು ಕೆಲವರು ಮಾತಾಡುತ್ತಿದ್ದಾರೆ. ಈಗ ವಿಜಯ್ ಅವರ ಪತ್ನಿ ಮತ್ತು ಮಕ್ಕಳು ಪ್ರಮಾಣವಚನ ಸಮಾರಂಭಕ್ಕೆ ಗೈರಾಗಿರುವುದು ಈ ವದಂತಿಗಳಿಗೆ ಮತ್ತಷ್ಟು ಪುಷ್ಟಿ ನೀಡಿದಂತಾಗಿದೆ.

ಸಾಮಾಜಿಕ ಜಾಲತಾಣಗಳಲ್ಲಿ ಅನೇಕರು ಈ ಬಗ್ಗೆ ಕಾಮೆಂಟ್ ಮಾಡಿದ್ದಾರೆ. ಇಂತಹ ಮಹತ್ವದ ಕ್ಷಣದಲ್ಲಿ ಕುಟುಂಬಸ್ಥರು ಇಲ್ಲದಿರುವುದು ಬೇಸರ ತಂದಿದೆ ಎಂದು ಕೆಲವರು ಕಾಮೆಂಟ್ ಮಾಡಿದ್ದಾರೆ. ಇನ್ನೂ ಕೆಲವರು ಗೆಳತಿ ತ್ರಿಷಾ ಬಂದಿದ್ದಕ್ಕೆ ವಿಜಯ್ ಪತ್ನಿ ಸಮಾರಂಭದಲ್ಲಿ ಭಾಗಿಯಾಗಿಲ್ಲ ಎಂದಿದ್ದಾರೆ.

27 ವರ್ಷಗಳ ದಾಂಪತ್ಯದ ಬಳಿಕ ವಿಜಯ್‌ ಪತ್ನಿ ಸಂಗೀತಾ ಫೆಬ್ರವರಿಯಲ್ಲಿ ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿದ್ದಾರೆ ಎನ್ನಲಾಗಿದೆ. ಈ ಬಗ್ಗೆ ವಿಜಯ್ ಅಥವಾ ಅವರ ಕುಟುಂಬದಿಂದ ಯಾವುದೇ ಅಧಿಕೃತ ಪ್ರತಿಕ್ರಿಯೆ ಬಂದಿಲ್ಲ. 1999ರಲ್ಲಿ ವಿಜಯ್ ಮತ್ತು ಸಂಗೀತಾ ವಿವಾಹವಾಗಿದ್ದರು. ಅವರಿಗೆ ಜೇಸನ್ ಸಂಜಯ್ ಮತ್ತು ದಿವ್ಯಾ ಸಾಶಾ ಎಂಬ ಇಬ್ಬರು ಮಕ್ಕಳಿದ್ದಾರೆ.

ಆಂದೋಲನ ಡೆಸ್ಕ್

Recent Posts

ವೆನೆಜುವೆಲಾದಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ ತುರ್ತು ಪರಿಸ್ಥಿತಿ ಘೋಷಣೆ

ಕ್ಯಾರಕಾಸ್‌ : ವೆನೆಜುವೆಲಾ ಕರಾವಳಿಯ ಸಮೀಪ ಬುಧವಾರ ಸಂಜೆ ಸಂಭವಿಸಿದ ಎರಡು ಪ್ರಬಲ ಭೂಕಂಪಗಳು ದೇಶವನ್ನು ಬೆಚ್ಚಿಬೀಳಿಸಿವೆ. ರಿಕ್ಟರ್ ಮಾಪಕದಲ್ಲಿ…

2 hours ago

ಸಮ ಸಮಾಜದ ಕನಸು ಕಂಡಿದ್ದ ಹೋರಾಟಗಾರ ಜವರಪ್ಪಗೌಡ

ಪ್ರೊ.ಬಿ.ಜಯಪ್ರಕಾಶ್‌ಗೌಡ ಬದುಕಿದ್ದರೆ ೧೦೯ ವರ್ಷಗಳನ್ನು ಪೂರೈಸುತ್ತಿದ್ದ ಸ್ವಾತಂತ್ರ್ಯ ಹೋರಾಟಗಾರ ಪಿ. ಎನ್. ಜವರಪ್ಪಗೌಡರು ನಮಗೆಲ್ಲರಿಗೂ ಮಾರ್ಗದರ್ಶಕರಾಗಿದ್ದವರು. ಜವರಪ್ಪಗೌಡರು ಗಾಂಧೀಜಿಯಿಂದ ಪ್ರಭಾವಿತರಾಗಿದ್ದರು.…

2 hours ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಜೂನ್‌ 25  ಗುರುವಾರ  

4 hours ago

ಮುತ್ತತ್ತಿಯಲ್ಲಿ ಘೋರ ದುರಂತ: ಒಂದೇ ಕುಟುಂಬದ ನಾಲ್ವರು ಮಹಿಳೆಯರು ಸೇರಿ ಐವರು ನೀರುಪಾಲು

ಹಲಗೂರು: ಸಮೀಪದ ಪ್ರವಾಸಿ ತಾಣವಾದ ಮುತ್ತತ್ತಿಯ ಕಾವೇರಿ ನದಿಯಲ್ಲಿ ಸೆಲ್ಫಿ ತೆಗೆಯುವ ವೇಳೆ ಕಾಲು ಜಾರಿ ನೀರಿನ ಪ್ರಬಲ ಸೆಳೆತಕ್ಕೆ…

15 hours ago

ಚಾಮರಾಜನಗರ ನ್ಯಾಯಾಲಯಕ್ಕೆ ಹುಸಿ ಬಾಂಬ್ ಬೆದರಿಕೆ

ಚಾಮರಾಜನಗರ: ನಗರದ ಜಿಲ್ಲಾ ಪ್ರಧಾನ ಮತ್ತು ಸೆಷನ್ಸ್ ನ್ಯಾಯಾಲಯಕ್ಕೆ ಹುಸಿ ಬಾಂಬ್ ಬೆದರಿಕೆಯ ಇ-ಮೇಲ್ ಸಂದೇಶ ಬಂದ ಹಿನ್ನೆಲೆಯಲ್ಲಿ ಪೊಲೀಸರು,…

17 hours ago

ಬಿಆರ್‌ಟಿ ವ್ಯಾಪ್ತಿಯಲ್ಲಿ ಕಾಡಾನೆ ಕಳೇಬರ ಪತ್ತೆ

ಚಾಮರಾಜನಗರ: ಬಿಆರ್‌ಟಿ ಹುಲಿ ಸಂರಕ್ಷಿತ ಪ್ರದೇಶದ ಪುಣಜನೂರು ವನ್ಯಜೀವಿ ವಲಯ ವ್ಯಾಪ್ತಿಯ ಕಾರೆಪಾಳ್ಯ ಗಸ್ತಿನ ಸಮೀಪ ಅರಣ್ಯ ಪ್ರದೇಶದಿಂದ ಸುಮಾರು…

18 hours ago