ಹೊಸದಿಲ್ಲಿ: ಪ್ರಧಾನ ಮಂತ್ರಿ ಫಸಲ್ ಬಿಮಾ ಯೋಜನೆ ಮತ್ತು ಪುನರ್ರಚಿಸಲಾದ ಹವಮಾನ ಆಧಾರಿತ ಬೆಳೆ ವಿಮಾ ಯೋಜನೆಯನ್ನು ವಿಸ್ತರಣೆ ಮಾಡಲು ಕೇಂದ್ರ ಸಚಿವ ಸಂಪುಟ ಅನುಮೋದನೆ ನೀಡಿದೆ.
2025-26 ರವರೆಗೆ ಬೆಳೆ ವಿಮೆ ಯೋಜನೆ ಮುಂದುವರಿಸಲು ಬುಧವಾರ ಅನುಮೋದನೆ ಸಿಕ್ಕಿದು, ಈ ಪ್ರಮುಖ ಯೋಜನೆಗಳ ಅನುಷ್ಠಾನದ ವೇಳೆ ತಂತ್ರಜ್ಞಾನದ ಅಳವಡಿಕೆಗಾಗಿ ಪ್ರತ್ಯೇಕವಾಗಿ 824.77ಕೋಟಿ ನಿಧಿಯನ್ನು ರಚಿಸಲಾಗಿದೆ.
ಈ ಬಗ್ಗೆ ಸುದ್ದಿಗಾರರಿಗೆ ಪ್ರತಿಕ್ರಿಯಿಸಿರುವ ಕೇಂದ್ರ ಪ್ರಸಾರ ಸಚಿವ ಅಶ್ವಿನ್ ವೈಷ್ಣವ್, ವಿಮೆಗಳ ಕುರಿತ ಯೋಜನೆಗಳಿಗೆ ರೈತರು ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ. ಹೀಗಾಗಿ ಈ ಯೋಜನೆಗಳನ್ನು ಐದನೈದನೆ ಹಣಕಾಸು ಆಯೋಗದ ಅವಧಿ ಮುಗಿಯುವವರೆಗು ಮುಂದುವರಿಸಲಾಗುತ್ತದೆ ಎಂದು ತಿಳಿಸಿದ್ದಾರೆ.
ತಾಂತ್ರಿಕ ಉಪಕ್ರಮಗಳಿಗೆ, ಸಂಶೋಧನಾ ಚಟುವಟಿಕೆಗಳಿಗೆ ಈ ನಿಧಿಯನ್ನು ಬಳಸಲಾಗುತ್ತದೆ. ಬೆಳೆ ಹಾನಿ, ಕ್ಲೈಮ್ ಇತ್ಯರ್ಥ ಮತ್ತು ವಿವಾದಗಳನ್ನು ತ್ವರಿತವಾಗಿ ಬಗೆಹರಿಸಲು ತಂತ್ರಜ್ಞಾನ ಬಳಕೆ ಸಹಾಯವಾಗಲಿದೆ ಎಂದರು.
ತಂತ್ರಜ್ಞಾನ ಆಧಾರಿತ ಆದಾಯ ಮುನ್ಸೂಚನೆ ವ್ಯವಸ್ಥೆಯಡಿ ರಿಮೋಟ್ ಸೆನ್ಸಿಂಗ್ ತಂತ್ರಜ್ಞಾನ ಬಳಸಿಕೊಂಡು ಇಳುವರಿ ಅಂದಾಜು ಮಾಡಲಾಗುತ್ತದೆ. ಕರ್ನಾಟಕ ಸೇರಿದಂತೆ 9 ಪ್ರಮುಖ ರಾಜ್ಯಗಳು ಈ ತಂತ್ರಜ್ಞಾನ ಅಳವಡಿಸಿಕೊಂಡಿವೆ. ಇತರ ರಾಜ್ಯಗಳಲ್ಲಿ ತಂತ್ರಜ್ಞಾನ ಅಳವಡಿಕೆ ಆರಂಭವಾಗಿದೆ ಎಂದು ಸಚಿವರು ತಿಳಿಸಿದರು.
ಬೆಂಗಳೂರು : ಹನೂರು ಶೂಟೌಟ್ ಪ್ರಕರಣದ ಬಗ್ಗೆ ಕೂಲಂಕಷ ತನಿಖೆ ನಡೆಯುತ್ತಿದ್ದು, ತನಿಖೆ ಬಳಿಕ ಪ್ರತಿಕ್ರಿಯೆ ನೀಡುತ್ತೇವೆ ಎಂದು ಸಿಎಂ…
ಬೆಂಗಳೂರು : ಆರು ಬಾರಿ ಚಿನ್ನದಂಬಾರಿ ಹೊತ್ತ 60 ವರ್ಷದ ಕ್ಯಾಪ್ಟನ್ ಅರ್ಜುನ ಆನೆಗೆ ಈ ಬಾರಿ ದಸರಾ ಜಂಬೂಸವಾರಿಯಲ್ಲಿ…
ಬೆಂಗಳೂರು: ಹನೂರು ಶೂಟೌಟ್ ಪ್ರಕರಣದ ಬಗ್ಗೆ ಕೂಲಂಕಷ ತನಿಖೆ ನಡೆಯುತ್ತಿದ್ದು, ತನಿಖೆ ಬಳಿಕ ಪ್ರತಿಕ್ರಿಯೆ ನೀಡುತ್ತೇವೆ ಎಂದು ಸಿಎಂ ಡಿ…
ಕೊಡಗು: ಜಿಲ್ಲೆಯಲ್ಲಿ ಕಾಡಾನೆ ಸೆರೆ ಕಾರ್ಯಾಚರಣೆ ಎರಡನೇ ದಿನಕ್ಕೆ ಕಾಲಿಟ್ಟಿದೆ. ಮೂರು ಕಾಡಾನೆಗಳನ್ನು ಸೆರೆ ಹಿಡಿಯಲು ಸರ್ಕಾರ ಆದೇಶ ನೀಡಿರುವ…
ಅದು ೨೦೦೬ರ ಸಮಯ. ಮೈಸೂರು ಈಗಿನಂತಿರಲಿಲ್ಲ. ಆದರೂ ಮೈಸೂರು ಇಂದಿಗಿಂತ ಹಿಂದೆಯೇನೂ ಇರಲಿಲ್ಲ. ಈಗಿನಷ್ಟೇ ಪ್ರವಾಸಿಗರು, ಹೂಡಿಕೆದಾರರನ್ನು ಆಕರ್ಷಿಸುತ್ತಿತ್ತು. ಮೈಸೂರಿನಲ್ಲಿ…
ಮನೆಗಳ ಗೇಟಿನ ಮುಂದೆಯೇ ಅಪರಿಚಿತರ ಕಾರು ನಿಲ್ಲಿಸುವ ಕೆಟ್ಟ ಪರಂಪರೆಯನ್ನು ಅನೇಕ ಕಡೆ ಕಾಣಬಹುದು. ಸೂರ್ಯಬೇಕರಿ ಬಳಿಯ ಎರಡನೇ ಅಡ್ಡರಸ್ತೆಯಲ್ಲಿ…