ದೇಶ- ವಿದೇಶ

ಮತ ಕಳ್ಳತನ ಆರೋಪ: ಎಸ್‌ಐಟಿ ತನಿಖೆಗೆ ನೀಡಲು ಸುಪ್ರೀಂಕೋರ್ಟ್‌ ನಕಾರ

ನವದೆಹಲಿ: ಕಳೆದ ಸಾರ್ವತ್ರಿಕ ಚುನಾವಣೆ ಸಂದರ್ಭದಲ್ಲಿ ಕಾಂಗ್ರೆಸ್‌ ನಾಯಕ ರಾಹುಲ್ ಗಾಂಧಿ ಅವರು ಮಾಡಿದ್ದ ಮತ ಕಳ್ಳತನ ಆರೋಪಗಳ ಬಗ್ಗೆ ಎಸ್‌ಐಟಿ ತನಿಖೆಗೆ ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂಕೋರ್ಟ್‌ ವಜಾಗೊಳಿಸಿದೆ.

ನ್ಯಾಯಮೂರ್ತಿ ಸೂರ್ಯಕಾಂತ್‌ ನೇತೃತ್ವದ ಪೀಠವು ಅರ್ಜಿದಾರರು ಭಾರತೀಯ ಚುನಾವಣಾ ಆಯೋಗವನ್ನು ಸಂಪರ್ಕಿಸಬಹುದು ಎಂದು ಅಭಿಪ್ರಾಯಪಟ್ಟಿದೆ.

ಇನ್ನು ಮತದಾರರ ಪಟ್ಟಿಯಲ್ಲಿ ಅಕ್ರಮ ಎಸಗಲಾಗಿರುವುದರ ಸಂಬಂಧ ಚುನಾವಣಾ ಆಯೋಗದಲ್ಲಿ ದೂರು ಸಲ್ಲಿಸಿ ಎಂದು ಕೋರ್ಟ್‌ ಸೂಚನೆ ನೀಡಿತು. ಈ ವೇಳೆ ಅರ್ಜಿದಾರರ ಪರ ವಕೀಲರು ಉತ್ತರಿಸಿ, ಚುನಾವಣಾ ಆಯೋಗಕ್ಕೆ ದೂರು ಕೊಡಲಾಗಿದ್ದು, ಇನ್ನೂ ಯಾವುದೇ ಕ್ರಮ ತೆಗೆದುಕೊಂಡಿಲ್ಲ ಎಂದು ವಾದಿಸಿದರು.

ಚುನಾವಣಾ ಆಯೋಗ ಯಾವಾಗ ಕ್ರಮ ಕೈಗೊಳ್ಳಬೇಕು ಎಂದು ಗಡುವು ನಿಗದಿ ಮಾಡಬೇಕು ಎಂದು ಅರ್ಜಿದಾರರು ಸರ್ವೋಚ್ಛ ನ್ಯಾಯಪೀಠಕ್ಕೆ ಮನವಿಯನ್ನೂ ಮಾಡಿದರು. ಈ ಮನವಿಯನ್ನು ಕೋರ್ಟ್‌ ತಿರಸ್ಕರಿಸಿದೆ.

ಇದನ್ನು ಓದಿ: ರಾಹುಲ್‌ ಗಾಂಧಿಗೆ ನೋಟಿಸ್‌: ಚುನಾವಣಾ ಆಯೋಗದವನ್ನೇ ಪ್ರಶ್ನಿಸಿದ ಡಿಸಿಎಂ ಡಿಕೆಶಿ

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ನಡೆಸಿದ ಪತ್ರಿಕಾಗೋಷ್ಠಿಯನ್ನು ಈ ಅರ್ಜಿಯಲ್ಲಿ ಉಲ್ಲೇಖಿಸಲಾಗಿದೆ, ಇದರಲ್ಲಿ ಬಿಜೆಪಿ ಮತ್ತು ಚುನಾವಣಾ ಆಯೋಗದ ನಡುವಿನ ಒಪ್ಪಂದದಿಂದಾಗಿ ಚುನಾವಣೆಯಲ್ಲಿ ದೊಡ್ಡ ಕ್ರಿಮಿನಲ್ ವಂಚನೆ ನಡೆದಿದೆ ಎಂದು ಸ್ಫೋಟಕ ಹೇಳಿಕೆಗಳನ್ನು ನೀಡಲಾಗಿತ್ತು. ಅದನ್ನು ರಾಹುಲ್ ಗಾಂಧಿ ಮತ ಕಳ್ಳತನ ಎಂದು ಕರೆದರು.
ಕರ್ನಾಟಕದ ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರ ವ್ಯಾಪ್ತಿಯ ಮಹದೇವಪುರ ವಿಧಾನಸಭಾ ಕ್ಷೇತ್ರದಲ್ಲಿ ಅಕ್ರಮ ನಡೆದಿದೆ ಎಂದು ಮತದಾರರ ಪಟ್ಟಿಯ ಸಹಿತ ವಿವರಿಸಿದ್ದರು.

ನ್ಯಾಯಾಲಯದ ನಿರ್ದೇಶನಗಳನ್ನು ಪಾಲಿಸುವವರೆಗೆ ಮತ್ತು ಪಟ್ಟಿಗಳ ಸ್ವತಂತ್ರ ಲೆಕ್ಕಪರಿಶೋಧನೆ ಪೂರ್ಣಗೊಳ್ಳುವವರೆಗೆ ಮತದಾರರ ಪಟ್ಟಿಗಳ ಯಾವುದೇ ಪರಿಷ್ಕರಣೆ ಅಥವಾ ಅಂತಿಮಗೊಳಿಸುವಿಕೆಯನ್ನು ಕೈಗೊಳ್ಳಬಾರದು ಎಂದು ಸುಪ್ರೀಂ ಕೋರ್ಟ್ ನಿರ್ದೇಶನ ನೀಡಬೇಕೆಂದು ಮನವಿ ಮಾಡಲಾಗಿತ್ತು. ಆದರೆ ನ್ಯಾಯಾಲಯ ಯಾವುದನ್ನು ಪರಿಗಣನೆಗೆ ತೆಗೆದುಕೊಂಡಿಲ್ಲ.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಮೇಕೆದಾಟು ಯೋಜನೆ ಶೀಘ್ರ ಅನುಷ್ಠಾನವಾಗಲಿ

ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ೨೦೧೪ರ ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ ಕರ್ನಾಟಕವು ಮೇಕೆದಾಟು ಜಲಾಶಯ ನಿರ್ಮಿಸಲು ತಮಿಳುನಾಡು ಸೇರಿದಂತೆ ಯಾವುದೇ…

2 hours ago

ಓದುಗರ ಪತ್ರ: ಫುಟ್‌ಪಾತ್ ಒತ್ತುವರಿ ತೆರವು ಕಾರ್ಯಾಚರಣೆ ಚುರುಕುಗೊಳ್ಳಲಿ

ಮೈಸೂರು ನಗರದಲ್ಲಿ ಅನೇಕ ಕಡೆ ಪಾದಚಾರಿಗಳಿಗೆ ಅಡಚಣೆಯಾಗಿದ್ದ ಫುಟ್‌ಪಾತ್ ವ್ಯಾಪಾರಿಗಳ ಒತ್ತುವರಿ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಆದರೆ ಬಹುತೇಕ ಕಡೆ…

2 hours ago

ಓದುಗರ ಪತ್ರ: ಕೂಡ್ಲಾಪುರ ಗ್ರಾಮಕ್ಕೆ ಕಬಿನಿ ನೀರು ಕೊಡಿ

ನಂಜನಗೂಡು ತಾಲ್ಲೂಕಿನ ಕೂಡ್ಲಾಪುರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಬರ ಪರಿಸ್ಥಿತಿಯಿಂದಾಗಿ ಕೆರೆಗಳು ಬತ್ತಿಹೋಗಿದ್ದು, ಕುಡಿಯುವ ನೀರು ಸಿಗದೆ ತೊಂದರೆಯಾಗಿದೆ. ನಂಜನಗೂಡು…

2 hours ago

ಗಾಮೀಣ ಜನರ ಏಳಿಗೆಗೆ IHDUA ಪಣ

ಪ್ರಸನ್ನ ಎಂ.ಕೆ. ಖ್ಯಾತ ಕ್ಯಾನ್ಸರ್ ರೋಗ ತಜ್ಞರು, ಭಾರತ್ ಕ್ಯಾನ್ಸರ್ ಹಾಸ್ಪಿಟಲ್ ಹಾಗೂ ಎಚ್‌ಸಿಜಿ ಆಸ್ಪತ್ರೆ ಛೇರ್ಮನ್ ಮತ್ತು ಸಂಸ್ಥಾಪಕರು,…

2 hours ago

ಸತ್ಯಮಂಗಲ-ಮೀಣ್ಯಂ ರಸ್ತೆಯಲ್ಲಿ ಸಂಚಾರ ದುಸ್ತರ

ಮಾದೇಶ್ ಗೌಡ ಹದಗೆಟ್ಟ ರಸ್ತೆ ಅಭಿವೃದ್ಧಿಗೆ ಸವಾರರ ಆಗ್ರಹ; ಅಭಿವೃದ್ಧಿಯಾಗದಿದ್ದರೆ ಪ್ರತಿಭಟನೆ ಎಚ್ಚರಿಕೆ ಹನೂರು: ತಾಲ್ಲೂಕಿನ ಮೀಣ್ಯಂ ಗ್ರಾಪಂ ವ್ಯಾಪ್ತಿಯ…

3 hours ago

ಪಿರಿಯಾಪಟ್ಟಣ: ಗರಿಗೆದರಿದ ತಂಬಾಕು ಕೃಷಿ ಚಟುವಟಿಕೆ

ನವೀನ್‌ಕುಮಾರ್ ತಂಬಾಕು ಹದಗೊಳಿಸುವ ಕಾರ್ಯ ಚುರುಕು; ಉತ್ತಮ ಬೆಲೆ ನಿರೀಕ್ಷೆಯಲ್ಲಿ ರೈತರು ಪಿರಿಯಾಪಟ್ಟಣ: ತಾಲ್ಲೂಕಿನಾದ್ಯಂತ ತಂಬಾಕು ಕೃಷಿ ಚಟುವಟಿಕೆಗಳು ಗರಿಗೆದರಿವೆ.…

3 hours ago