ದೇಶ- ವಿದೇಶ

ನಿನ್ನೆ ನಡೆದ ಬಿಹಾರ ಚುನಾವಣೆಯಲ್ಲೂ ಮತಗಳ್ಳತನ ; ಚುನಾವಣಾ ಆಯೋಗವೇ ಪ್ರಜಾಪ್ರಭುತ್ವದ ಕಗ್ಗೊಲೆ : ರಾಗಾ

ಹೊಸದಿಲ್ಲಿ : ಚುನಾವಣಾ ಆಯೋಗದ ಮೇಲೆ ಗಂಭೀರ ಆರೋಪ ಹೊರಿಸುತ್ತಲೇ ಬಂದಿರುವ ವಿರೋಧ ಪಕ್ಷದ ನಾಯಕ ರಾಹುಲ್‌ ಗಾಂಧಿ ಇದೀಗ ಬಿಹಾರ ವಿಧಾನಸಭಾ ಚುನಾವಣೆ ಸಂದರ್ಭದಲ್ಲಿಯೂ ಮತಗಳ್ಳತನದ ವರದಿಯಾಗಿದೆ ಎಂಬ ಆರೋಪ ಮಾಡಿದ್ದಾರೆ.

ಹಲವು ರಾಜ್ಯಗಳಲ್ಲಿ ಹಿಂದಿನ ಚುನಾವಣೆಗಳಲ್ಲಿ ಮತ ಚಲಾಯಿಸಿದ್ದ ಬಿಜೆಪಿಯ ಕೆಲವು ನಾಯಕರು ಮತ್ತು ಕಾರ್ಯಕರ್ತರು ಬಿಹಾರದಲ್ಲಿಯೂ ಮತ ಹಾಕಿದ್ದಾರೆ ಎಂದು ಗಂಭೀರ ಆರೋಪ ಮಾಡಿದ್ದಾರೆ.

ಚುನಾವಣಾ ಆಯೋಗವೇ ಪ್ರಜಾಪ್ರಭುತ್ವದ ಕಗ್ಗೊಲೆ…!
ಮತದಾನದ ಹಕ್ಕನ್ನು ರಕ್ಷಿಸುವ ಹೊಣೆ ಹೊತ್ತವರೇ (ಚುನಾವಣಾ ಆಯೋಗ) ಜನರ ಭವಿಷ್ಯವನ್ನು ಕದಿಯಲು ಪಾಲುದಾರಿಕೆ ವಹಿಸಿದ್ದಾರೆ. ಸಂವಿಧಾನಕ್ಕೆ ದ್ರೋಹ ಮಾಡುತ್ತಿರುವ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್‌ ಕುಮಾರ್‌, ಚುನಾವಣಾ ಆಯುಕ್ತರಾದ ಸುಖ್‌ಬಿರ್‌ ಸಿಂಗ್‌ ಸಂಧು ಹಾಗೂ ವಿವೇಕ್‌ ಜೋಶಿ ಅವರೇ ‘ಪ್ರಜಾಪ್ರಭುತ್ವದ ಕಗ್ಗೊಲೆ’ಯ ಪ್ರಮುಖ ದೋಷಿಗಳು ಎಂದು ದೂಷಿಸಿದ್ದಾರೆ.

ಇದನ್ನೂ ಓದಿ:-ಸಿಎಂ ನೇತೃತ್ವದಲ್ಲಿ ಹೈವೋಲ್ಟೇಜ್‌ ಸಭೆ : ಸಕ್ಕರೆ ಕಾರ್ಖಾನೆ ಮಾಲೀಕರು, ಸಚಿವರು ಭಾಗಿ

ಸಮಗ್ರ ಪರಿಷ್ಕರಣೆಯ (ಎಸ್‌ಐಆರ್‌) ಮೂಲಕ ಮತದಾರರ ಪಟ್ಟಿಯನ್ನು ವ್ಯಾಪಕವಾಗಿ ತಿರುಚಲಾಗುತ್ತದೆ ಎಂಬ ಬಗ್ಗೆ ಜಾಗೃತಿ ಮೂಡಿಸುವುದಕ್ಕಾಗಿ ಕೆಲವು ದಿನಗಳ ಹಿಂದೆ ಬಿಹಾರದಲ್ಲಿ ವೋಟರ್‌ ಅಧಿಕಾರ ಯಾತ್ರೆ ನಡೆಸಿದ್ದೆ. ಇಂದು, ಬಿಹಾರದ ಮೂಲೆ ಮೂಲೆಗಳಿಂದ ವರದಿಯಾಗಿರುವ ಸುದ್ದಿಗಳು, ವಿಡಿಯೊಗಳು ಮತಗಳ್ಳತನದ ಸಾಕ್ಷ್ಯಗಳನ್ನು ಮತ್ತಷ್ಟು ಬಲಪಡಿಸಿವೆ ಎಂದಿದ್ದಾರೆ.

ಲಕ್ಷಾಂತರ ಮತದಾರರನ್ನು ಈಗಾಗಲೇ ಪಟ್ಟಿಯಿಂದ ತೆಗೆದುಹಾಕಲಾಗಿದೆ. ಇದೀಗ, ಜನರು ತಮ್ಮ ಹಕ್ಕು ಚಲಾಯಿಸದಂತೆ ಮತಗಟ್ಟೆಗಳ ಬಳಿ ತಡೆಯಲಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮತಗಳ್ಳತನದ ಮೂಲಕ ರಚನೆಯಾದ ಸರ್ಕಾರ ಯುವಕರು, ಜೆನ್‌ ಝಿ, ಸಾರ್ವಜನಿಕರ ಹಿತದೃಷ್ಟಿಯಿಂದ ಎಂದಿಗೂ ಕೆಲಸ ಮಾಡುವುದಿಲ್ಲ ಎಂಬುದು ನೆನಪಿರಲಿ ಎಂದು ಹೇಳಿದ್ದಾರೆ.

ಜ್ಞಾನೇಶ್‌ ಕುಮಾರ್‌, ಸುಖ್‌ಬಿರ್‌ ಸಿಂಗ್‌ ಸಂಧು ಹಾಗೂ ವಿವೇಕ್‌ ಜೋಶಿ ಅವರು ಪ್ರಜಾಪ್ರಭುತ್ವದ ಕಗ್ಗೊಲೆಯ ಪ್ರಮುಖ ಅಪರಾಧಿಗಳು. ಇವರು ಚುನಾವಣಾ ಆಯೋಗದ ಉನ್ನತ ಅಧಿಕಾರಿಗಳಾಗಿದ್ದರೂ, ಸಂವಿಧಾನ ಮತ್ತು ಪ್ರಜಾಪ್ರಭುತ್ವದ ವಿರುದ್ಧ ದೊಡ್ಡ ಪ್ರಮಾಣದ ದ್ರೋಹವೆಸಗುತ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದ್ದಾರೆ.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಮೈಸೂರು ಆಕಾಶವಾಣಿ ಪ್ರಸರಣ ಸಾಮರ್ಥ್ಯ ಹೆಚ್ಚಿಸಿ

ಭಾರತದಲ್ಲೇ ಮೊದಲ ಆಕಾಶವಾಣಿ ಕೇಂದ ಎಂಬ ಹೆಗ್ಗಳಿಕೆಗೆ ಪಾತ್ರವಾಗಿರುವ ಮೈಸೂರಿನ ಆಕಾಶವಾಣಿ ಕೇಂದ್ರ ೯೦ ವಸಂತಗಳನ್ನು ಪೂರೈಸಿದ್ದು, ಪ್ರಭಾವಿ ಸಾರ್ವಜನಿಕ…

12 seconds ago

ಓದುಗರ ಪತ್ರ: ಆಟ… ಕಿರೀಟ !

ಟಿ-೨೦ವಿಶ್ವಕಪ್‌ನಲ್ಲಿ ಕಿವೀಸ್ ಕಿವಿ ಹಿಂಡಿದ ಇಂಡಿಯಾ ಆಡಿದ್ದು ದಾಖಲೆಗಳ ಆಟ ! ಅದಕ್ಕೇ ಒಲಿಯಿತು ಭಾರತಕ್ಕೆ ವಿಶ್ವಕಪ್ ಕಿರೀಟ !…

3 mins ago

ಓದುಗರ ಪತ್ರ: ಕೊಲ್ಲಿ ಯುದ್ಧ: ವಿಶ್ವ ಸಂಸ್ಥೆಯ ಮೌನವೇಕೆ?

ಇರಾನ್ ಮೇಲೆ ಇಸ್ರೇಲ್-ಅಮೆರಿಕ ರಾಷ್ಟ್ರಗಳು ಯುದ್ಧ ನಡೆಸುತ್ತಿದ್ದು, ಇರಾನ್‌ನ ಸರ್ವೋಚ್ಚ ನಾಯಕ ಅಯತೊಲ್ಲ ಖಮೇನಿ ಅವರನ್ನು ಹತ್ಯೆ ಮಾಡಿವೆ. ಇದರಿಂದ…

5 mins ago

ಓದುಗರ ಪತ್ರ: ಕಾಲೇಜು ಮೈದಾನದಲ್ಲಿ ಖಾಸಗಿ ಕಾರ್ಯಕ್ರಮಗಳಿಗೆ ಅನುಮತಿ ಬೇಡ

ಮೈಸೂರಿನ ಮಹಾರಾಜ ಕಾಲೇಜಿಗೆ ೧೩೭ ವರ್ಷಗಳ ಇತಿಹಾಸವಿದೆ. ಕಾಲೇಜಿನಲ್ಲಿ ಉತ್ತಮ ಬೋಧನಾ ವ್ಯವಸ್ಥೆಯೂ ಇದ್ದು, ಪ್ರತಿವರ್ಷ ನೂರಾರು ವಿದ್ಯಾರ್ಥಿಗಳು ಇಲ್ಲಿ…

7 mins ago

ಗೂಗಲ್ ಮಹಾತ್ಮೆ: ಗೂಗಲ್ ಮಾತ್ರ ಸತ್ಯ, ಉಳಿದೆಲ್ಲವೂ ಮಿಥ್ಯ?

ರಮಾನಂದ ಶರ್ಮ ಯಾವುದೋ ಅನಾರೋಗ್ಯ ಸಮಸ್ಯೆಯಿಂದ ಬಳಲುತ್ತಿರುವ ಟೆಕ್ಕಿಯೊಬ್ಬರು ವೈದ್ಯರ ಬಳಿ ಹೋಗಿದ್ದರಂತೆ. ವೈದ್ಯರು ಅವರನ್ನು ಸ್ಥೂಲವಾಗಿ ಪರೀಕ್ಷಿಸಿ, ಮೂರು…

3 hours ago

ಕೆಎಸ್‌ಐಸಿ: ೧೫ ದಿನಗಳಿಂದ ನಡೆಯುತ್ತಿದ್ದ ಪ್ರತಿಭಟನೆ ಅಂತ್ಯ

ತಿ.ನರಸೀಪುರ: ಪಟ್ಟಣದ ಕೆಎಸ್‌ಐಸಿ ಕಾರ್ಖಾನೆ ಆವರಣದಲ್ಲಿ ಕ್ರೀಡಾಂಗಣ ನಿರ್ಮಾಣ ವಿರೋಽಸಿ ಕಳೆದ ೧೫ ದಿನಗಳಿಂದ ವಿವಿಧ ಸಂಘಟನೆಗಳವರು ನಡೆಸುತ್ತಿದ್ದ ಪ್ರತಿಭಟನೆ…

3 hours ago