ದೇಶ- ವಿದೇಶ

ಮುಂಬೈ ಮುನ್ಸಿಪಲ್‌ ಚುನಾವಣೆಯಲ್ಲೂ ವೋಟ್‌ ಚೋರಿ : ರಾಹುಲ್‌ಗಾಂಧಿ ಗಂಭೀರ ಆರೋಪ

ಮುಂಬೈ : ವೋಟಿ ಚೋರಿ ವಿರುದ್ಧ ಸಮರ ಸಾರಿರುವ ವಿಪಕ್ಷ ನಾಯಕ ರಾಹುಲ್‌ ಗಾಂಧಿ ಮಹಾರಾಷ್ಟ್ರದ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲೂ ವೋಟ್‌ ಚೋರಿಯಾಗಿದೆ ಎಂದು ಆರೋಪಿಸಿದ್ದಾರೆ.

ವೋಟ್‌ ಹಾಕಿದ ಗುರುತಿನ ಶಾಯಿ ಗುರುತು ಅಳಿಸಿ ಹೋಗುತ್ತಿದೆ ಎಂಬ ಶೀರ್ಷಿಕೆಯ ಮಾಧ್ಯಮ ವರದಿಯನ್ನು ಹಂಚಿಕೊಂಡಿರುವ ರಾಹುಲ್ ಗಾಂಧಿ, ಚುನಾವಣಾ ಆಯೋಗವು ಜನರನ್ನ ತಪ್ಪು ದಾರಿಗೆ ಎಳೆಯುತ್ತಿರುವುದು ನಮ್ಮ ಪ್ರಜಾಪ್ರಭುತ್ವದಲ್ಲಿ ವಿಶ್ವಾಸ ಕುಸಿಯಲು ಕಾರಣವಾಗಿದೆ ಎಂದು ಎಕ್ಸ್‌ ಮೂಲಕ ಆಕ್ರೋಶ ಹೊರಹಾಕಿದ್ದಾರೆ.

ಸದ್ಯ ವೈರಲ್ ಆಗಿರುವ ವಿಡಿಯೋಗಳಲ್ಲಿ ಅಸಿಟೋನ್‌ನಂತಹ ರಾಸಾಯನಿಕಗಳನ್ನ ಬಳಸಿ ಶಾಯಿಯನ್ನು ಹೇಗೆ ಅಳಿಸಬಹುದು ಎಂಬುದನ್ನು ತೋರಿಸಲಾಗಿದೆ. ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ಈ ಆರೋಪಗಳನ್ನ ತಳ್ಳಿಹಾಕಿದ್ದಾರೆ. ಆದರೆ, ಚುನಾವಣಾ ಆಯೋಗ ತನಿಖೆ ನಡೆಸುವುದಾಗಿ ತಿಳಿಸಿದೆ. ಮುಂದಿನ ಚುನಾವಣೆಗಳಲ್ಲಿ ಸಾಂಪ್ರದಾಯಿಕ ಶಾಯಿಯನ್ನ ಬಳಸಲು ನಿರ್ಧರಿಸಲಾಗಿದೆ.

ಈ ಮಧ್ಯೆ, ನಮ್ಮ ಸಾವಿರಾರು ಕಾರ್ಯಕರ್ತರ ಹೆಸರು ಮತಪಟ್ಟಿಯಿಂದ ಕಾಣೆಯಾಗಿದೆ ಅಂತ ಉದ್ಧವ್ ಶಿವಸೇನೆ ಬಣದ ನಾಯಕ ಸಂಜಯ್‌ರಾವತ್ ಗಂಭೀರ ಆರೋಪ ಮಾಡಿದ್ದಾರೆ.

ಬೃಹತ್ ಮುಂಬೈ ಮುನ್ಸಿಪಲ್ ಕಾರ್ಪೊರೇಷನ್ʼಗೆ ನಡೆದ ಚುನಾವಣೆಯಲ್ಲಿ ಬಿಜೆಪಿ ನೇತೃತ್ವದ ಮಹಾಯುತಿ ಮೈತ್ರಿಕೂಟಗಳು ಗೆದ್ದು ಬೀಗಿವೆ. 29 ಕಾರ್ಪೊರೇಷನ್‌ಗಳ ಪೈಕಿ 26ರಲ್ಲಿ ಬಿಜೆಪಿ ಕೂಟ ಜಯಭೇರಿ ಬಾರಿಸಿದೆ. ಒಟ್ಟು 2,869 ವಾರ್ಡ್‌ಗಳಿಗೆ ನಡೆದ ಚುನಾವಣೆಯಲ್ಲಿ ಬಿಜೆಪಿ-ಶಿಂಧೆ ಶಿವಸೇನೆ 1,500ಕ್ಕೂ ಹೆಚ್ಚು ವಾರ್ಡ್‌ಗಳಲ್ಲಿ ಜಯಗಳಿಸಿದೆ. ಬಿಎಂಸಿಯ 224 ವಾರ್ಡ್‌ಗಳಲ್ಲಿ ಬಿಜೆಪಿ ಮಿತ್ರಕೂಟ 131 ಗೆದ್ದಿವೆ. ಮುಂಬೈ, ನವಿಮುಂಬೈ, ಥಾಣೆ, ಪುಣೆ, ನಾಗಪುರ, ನಾಸಿಕ್ ಸೇರಿದಂತೆ ಪ್ರಮುಖ ನಗರಗಳು ಬಿಜೆಪಿ ಪಾಲಾಗಿವೆ. ಈ ಮೂಲಕ, ಇದೇ ಮೊದಲ ಬಾರಿಗೆ ದೇಶದ ಶ್ರೀಮಂತ ಕಾರ್ಪೊರೇಷನ್ ಬಿಎಂಸಿಗೆ ಬಿಜೆಪಿ ಮೇಯರ್ ಸಿಗಲಿದೆ.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಕನ್ನಡದ ವಾತಾವರಣ ನಿರ್ಮಾಣ ಮಾಡುವುದು ಕನ್ನಡಿಗರ ಜವಾಬ್ದಾರಿ : ಸಿಎಂ

ಬೆಂಗಳೂರು : ಬೆಂಗಳೂರಿನಲ್ಲಿ ಅನೇಕ ಭಾಷೆ, ಧರ್ಮಗಳಿದ್ದು, ವೈವಿಧ್ಯತೆಯಲ್ಲಿ ಏಕತೆಯನ್ನು ಕಾಣಬೇಕೆಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಕನ್ನಡ ಸಂಸ್ಕೃತಿ ಇಲಾಖೆ…

2 hours ago

ಗಾಂಜಾ ಮಾರಾಟ : ಓರ್ವ ಬಂಧನ

ಹನೂರು : ಹನೂರು ಪಟ್ಟಣ ವ್ಯಾಪ್ತಿಯಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದ ವ್ಯಕ್ತಿಯೋರ್ವನನ್ನು ಬಂಧಿಸುವಲ್ಲಿ ಹನೂರು ಪೊಲೀಸರು ಯಶಸ್ವಿಯಾಗಿದ್ದಾರೆ. ಹನೂರು ತಾಲೂಕಿನ…

2 hours ago

ಸ್ಟಾರ್ ನಟಿಯ ಜೊತೆ ಧನುಷ್ ಕಲ್ಯಾಣ? ; ವೈರಲ್ ಆಗ್ತಿದೆ ಮದುವೆಯ ಗುಸುಗುಸು!

ಚೆನ್ನೈ : ಕಾಲಿವುಡ್‌ ನಟ ಧನುಷ್ ಸ್ಟಾರ್ ನಟಿಯನ್ನು ಕೈ ಹಿಡಿಯಲು ಸಿದ್ದರಾಗಿದ್ದಾರೆ. ಹೌದು ಹೀಗೊಂದು ಸುದ್ದಿ ಸಿನಿಮಾ ಇಂಡಸ್ಟ್ರಿಯಲ್ಲಿ…

3 hours ago

ಸ್ಟಾರ್ಟ್‌ಅಪ್‌ನಿಂದ ಆರ್ಥಿಕ ಪರಿವರ್ತನೆಗೆ ನಾಂದಿ : ಎಚ್‌.ಡಿ.ಕೆ ಶ್ಲಾಘನೆ

ಬೆಂಗಳೂರು : ಕಳೆದ 10 ವರ್ಷಗಳಲ್ಲಿ ಸ್ಟಾರ್ಟ್‌ಅಪ್ ಇಂಡಿಯಾ ಭಾರತದಲ್ಲಿ ನವಯುಗದ ನಾವೀನ್ಯತೆ, ಉದ್ಯಮಶೀಲತೆ ಮತ್ತು ಆರ್ಥಿಕ ಪರಿವರ್ತನೆಗೆ ನಾಂದಿ…

4 hours ago

ದಿಲ್ಲಿ ಚಲೋ : ಕನ್ಯಾಕುಮಾರಿಯಿಂದ ಕಾಶ್ಮೀರದವರೆಗೆ ರೈತ ಧ್ವನಿ

ಫೆ.7ರಿಂದ ರೈತ ಜಾಗೃತಿ ಯಾತ್ರೆ ಆರಂಭ ಮಾ.19ರಂದು ದಿಲ್ಲಿಯ ರಾಮ್‌ಲೀಲಾ ಮೈದಾನದಲ್ಲಿ ಬೃಹತ್‌ ಸಮಾವೇಶ ಮೈಸೂರು : ಕೃಷಿ ಉತ್ಪನ್ನಗಳಿಗೆ…

5 hours ago

ವಿಜ್ಞಾನಕ್ಕೆ ಕಲೆ,ಸಂಸ್ಕೃತಿ ಸಮ್ಮಿಳಿತವಾಗಬೇಕು : ನಾದಾನಂದನಾಥ ಸ್ವಾಮೀಜಿ

ಮೈಸೂರು : ಎಲ್ಲವನ್ನೂ ಸಾಧ್ಯವಾಗಿಸಿದ ವಿಜ್ಞಾನಕ್ಕೆ ಕಲೆ, ಸಂಸ್ಕೃತಿ ಕೂಡದಿದ್ದರೆ ಮೃಗೀಯ ವರ್ತನೆ ಬರುತ್ತದೆ. ಅಧುನೀಕರಣ ನಮ್ಮ ಮೂಲ ಪರಂಪರೆಯನ್ನು…

5 hours ago