ಮುಂಬೈ : ವೋಟಿ ಚೋರಿ ವಿರುದ್ಧ ಸಮರ ಸಾರಿರುವ ವಿಪಕ್ಷ ನಾಯಕ ರಾಹುಲ್ ಗಾಂಧಿ ಮಹಾರಾಷ್ಟ್ರದ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲೂ ವೋಟ್ ಚೋರಿಯಾಗಿದೆ ಎಂದು ಆರೋಪಿಸಿದ್ದಾರೆ.
ವೋಟ್ ಹಾಕಿದ ಗುರುತಿನ ಶಾಯಿ ಗುರುತು ಅಳಿಸಿ ಹೋಗುತ್ತಿದೆ ಎಂಬ ಶೀರ್ಷಿಕೆಯ ಮಾಧ್ಯಮ ವರದಿಯನ್ನು ಹಂಚಿಕೊಂಡಿರುವ ರಾಹುಲ್ ಗಾಂಧಿ, ಚುನಾವಣಾ ಆಯೋಗವು ಜನರನ್ನ ತಪ್ಪು ದಾರಿಗೆ ಎಳೆಯುತ್ತಿರುವುದು ನಮ್ಮ ಪ್ರಜಾಪ್ರಭುತ್ವದಲ್ಲಿ ವಿಶ್ವಾಸ ಕುಸಿಯಲು ಕಾರಣವಾಗಿದೆ ಎಂದು ಎಕ್ಸ್ ಮೂಲಕ ಆಕ್ರೋಶ ಹೊರಹಾಕಿದ್ದಾರೆ.
ಸದ್ಯ ವೈರಲ್ ಆಗಿರುವ ವಿಡಿಯೋಗಳಲ್ಲಿ ಅಸಿಟೋನ್ನಂತಹ ರಾಸಾಯನಿಕಗಳನ್ನ ಬಳಸಿ ಶಾಯಿಯನ್ನು ಹೇಗೆ ಅಳಿಸಬಹುದು ಎಂಬುದನ್ನು ತೋರಿಸಲಾಗಿದೆ. ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ಈ ಆರೋಪಗಳನ್ನ ತಳ್ಳಿಹಾಕಿದ್ದಾರೆ. ಆದರೆ, ಚುನಾವಣಾ ಆಯೋಗ ತನಿಖೆ ನಡೆಸುವುದಾಗಿ ತಿಳಿಸಿದೆ. ಮುಂದಿನ ಚುನಾವಣೆಗಳಲ್ಲಿ ಸಾಂಪ್ರದಾಯಿಕ ಶಾಯಿಯನ್ನ ಬಳಸಲು ನಿರ್ಧರಿಸಲಾಗಿದೆ.
ಈ ಮಧ್ಯೆ, ನಮ್ಮ ಸಾವಿರಾರು ಕಾರ್ಯಕರ್ತರ ಹೆಸರು ಮತಪಟ್ಟಿಯಿಂದ ಕಾಣೆಯಾಗಿದೆ ಅಂತ ಉದ್ಧವ್ ಶಿವಸೇನೆ ಬಣದ ನಾಯಕ ಸಂಜಯ್ರಾವತ್ ಗಂಭೀರ ಆರೋಪ ಮಾಡಿದ್ದಾರೆ.
ಬೃಹತ್ ಮುಂಬೈ ಮುನ್ಸಿಪಲ್ ಕಾರ್ಪೊರೇಷನ್ʼಗೆ ನಡೆದ ಚುನಾವಣೆಯಲ್ಲಿ ಬಿಜೆಪಿ ನೇತೃತ್ವದ ಮಹಾಯುತಿ ಮೈತ್ರಿಕೂಟಗಳು ಗೆದ್ದು ಬೀಗಿವೆ. 29 ಕಾರ್ಪೊರೇಷನ್ಗಳ ಪೈಕಿ 26ರಲ್ಲಿ ಬಿಜೆಪಿ ಕೂಟ ಜಯಭೇರಿ ಬಾರಿಸಿದೆ. ಒಟ್ಟು 2,869 ವಾರ್ಡ್ಗಳಿಗೆ ನಡೆದ ಚುನಾವಣೆಯಲ್ಲಿ ಬಿಜೆಪಿ-ಶಿಂಧೆ ಶಿವಸೇನೆ 1,500ಕ್ಕೂ ಹೆಚ್ಚು ವಾರ್ಡ್ಗಳಲ್ಲಿ ಜಯಗಳಿಸಿದೆ. ಬಿಎಂಸಿಯ 224 ವಾರ್ಡ್ಗಳಲ್ಲಿ ಬಿಜೆಪಿ ಮಿತ್ರಕೂಟ 131 ಗೆದ್ದಿವೆ. ಮುಂಬೈ, ನವಿಮುಂಬೈ, ಥಾಣೆ, ಪುಣೆ, ನಾಗಪುರ, ನಾಸಿಕ್ ಸೇರಿದಂತೆ ಪ್ರಮುಖ ನಗರಗಳು ಬಿಜೆಪಿ ಪಾಲಾಗಿವೆ. ಈ ಮೂಲಕ, ಇದೇ ಮೊದಲ ಬಾರಿಗೆ ದೇಶದ ಶ್ರೀಮಂತ ಕಾರ್ಪೊರೇಷನ್ ಬಿಎಂಸಿಗೆ ಬಿಜೆಪಿ ಮೇಯರ್ ಸಿಗಲಿದೆ.
ಬೆಳ್ಳಿ ಖಡ್ಗ, ದೇವಿಗೆ ರೇಷ್ಮೆ ಸೀರೆ ಅರ್ಪಿಸಿ ವಿಶೇಷ ಪೂಜೆ, ಪ್ರಾರ್ಥನೆ ಉಡುಪಿ : ತಮಿಳುನಾಡು ಮುಖ್ಯಮಂತ್ರಿ ಸಿ.ಜೋಸೆಫ್ ವಿಜಯ್…
ಹಿಂದಿನ ವರ್ಷದ ಶುಲ್ಕವೇ ಈ ವರ್ಷಕ್ಕೂ ಅನ್ವಯ ಬೆಂಗಳೂರು : ಪ್ರಸಕ್ತ ಶೈಕ್ಷಣಿಕ ವರ್ಷದಿಂದ ವೈದ್ಯಕೀಯ, ದಂತ ವೈದ್ಯಕೀಯ,…
ಸಾಮಾಜಿಕ ತಾಣಗಳಲ್ಲಿ, ನವ ಮಾಧ್ಯಮಗಳಲ್ಲಿ ಅವರವರ ಭಾವಕ್ಕೆ ಅವರವರ ಅನುಭವಕ್ಕೆ ತಕ್ಕಂತೆ ಜಿಜ್ಞಾಸೆ ನಡೆದಿದೆ. ಚಿತ್ರಮಂದಿರಗಳಿಂದ ಪ್ರೇಕ್ಷಕ ದೂರವಾಗುತ್ತಿದ್ದಾನೆ; ಅವನನ್ನು…
ಮಳವಳ್ಳಿ: ತಾಲ್ಲೂಕಿನ ತಳಗವಾದಿ ಗ್ರಾಮಕ್ಕೆ ಹೊಂದುಕೊಂಡಂತೆ ಚಿರತೆಯೊಂದು ಕಾಣಿಸಿಕೊಂಡಿದ್ದು, ಜನರು ಆತಂಕಗೊಂಡಿದ್ದಾರೆ. ಗ್ರಾಮದ ಸರ್ಕಾರಿ ಪದವಿ ಪೂರ್ವ ಕಾಲೇಜು ಸಮೀಪವೇ…
ಬೆಂಗಳೂರು : ಕರ್ನಾಟಕದ ಪ್ರಭಾವಿ ದಲಿತ ಸಮುದಾಯದ ನಾಯಕ ಹಾಗೂ ಮಾಜಿ ಸಚಿವ ಡಾ. ಹೆಚ್.ಸಿ.ಮಹಾದೇವಪ್ಪ ಅವರಿಗೆ ಮುಖ್ಯಮಂತ್ರಿ ಡಿ.ಕೆ…