ಮುಂಬೈ : ವೋಟಿ ಚೋರಿ ವಿರುದ್ಧ ಸಮರ ಸಾರಿರುವ ವಿಪಕ್ಷ ನಾಯಕ ರಾಹುಲ್ ಗಾಂಧಿ ಮಹಾರಾಷ್ಟ್ರದ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲೂ ವೋಟ್ ಚೋರಿಯಾಗಿದೆ ಎಂದು ಆರೋಪಿಸಿದ್ದಾರೆ.
ವೋಟ್ ಹಾಕಿದ ಗುರುತಿನ ಶಾಯಿ ಗುರುತು ಅಳಿಸಿ ಹೋಗುತ್ತಿದೆ ಎಂಬ ಶೀರ್ಷಿಕೆಯ ಮಾಧ್ಯಮ ವರದಿಯನ್ನು ಹಂಚಿಕೊಂಡಿರುವ ರಾಹುಲ್ ಗಾಂಧಿ, ಚುನಾವಣಾ ಆಯೋಗವು ಜನರನ್ನ ತಪ್ಪು ದಾರಿಗೆ ಎಳೆಯುತ್ತಿರುವುದು ನಮ್ಮ ಪ್ರಜಾಪ್ರಭುತ್ವದಲ್ಲಿ ವಿಶ್ವಾಸ ಕುಸಿಯಲು ಕಾರಣವಾಗಿದೆ ಎಂದು ಎಕ್ಸ್ ಮೂಲಕ ಆಕ್ರೋಶ ಹೊರಹಾಕಿದ್ದಾರೆ.
ಸದ್ಯ ವೈರಲ್ ಆಗಿರುವ ವಿಡಿಯೋಗಳಲ್ಲಿ ಅಸಿಟೋನ್ನಂತಹ ರಾಸಾಯನಿಕಗಳನ್ನ ಬಳಸಿ ಶಾಯಿಯನ್ನು ಹೇಗೆ ಅಳಿಸಬಹುದು ಎಂಬುದನ್ನು ತೋರಿಸಲಾಗಿದೆ. ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ಈ ಆರೋಪಗಳನ್ನ ತಳ್ಳಿಹಾಕಿದ್ದಾರೆ. ಆದರೆ, ಚುನಾವಣಾ ಆಯೋಗ ತನಿಖೆ ನಡೆಸುವುದಾಗಿ ತಿಳಿಸಿದೆ. ಮುಂದಿನ ಚುನಾವಣೆಗಳಲ್ಲಿ ಸಾಂಪ್ರದಾಯಿಕ ಶಾಯಿಯನ್ನ ಬಳಸಲು ನಿರ್ಧರಿಸಲಾಗಿದೆ.
ಈ ಮಧ್ಯೆ, ನಮ್ಮ ಸಾವಿರಾರು ಕಾರ್ಯಕರ್ತರ ಹೆಸರು ಮತಪಟ್ಟಿಯಿಂದ ಕಾಣೆಯಾಗಿದೆ ಅಂತ ಉದ್ಧವ್ ಶಿವಸೇನೆ ಬಣದ ನಾಯಕ ಸಂಜಯ್ರಾವತ್ ಗಂಭೀರ ಆರೋಪ ಮಾಡಿದ್ದಾರೆ.
ಬೃಹತ್ ಮುಂಬೈ ಮುನ್ಸಿಪಲ್ ಕಾರ್ಪೊರೇಷನ್ʼಗೆ ನಡೆದ ಚುನಾವಣೆಯಲ್ಲಿ ಬಿಜೆಪಿ ನೇತೃತ್ವದ ಮಹಾಯುತಿ ಮೈತ್ರಿಕೂಟಗಳು ಗೆದ್ದು ಬೀಗಿವೆ. 29 ಕಾರ್ಪೊರೇಷನ್ಗಳ ಪೈಕಿ 26ರಲ್ಲಿ ಬಿಜೆಪಿ ಕೂಟ ಜಯಭೇರಿ ಬಾರಿಸಿದೆ. ಒಟ್ಟು 2,869 ವಾರ್ಡ್ಗಳಿಗೆ ನಡೆದ ಚುನಾವಣೆಯಲ್ಲಿ ಬಿಜೆಪಿ-ಶಿಂಧೆ ಶಿವಸೇನೆ 1,500ಕ್ಕೂ ಹೆಚ್ಚು ವಾರ್ಡ್ಗಳಲ್ಲಿ ಜಯಗಳಿಸಿದೆ. ಬಿಎಂಸಿಯ 224 ವಾರ್ಡ್ಗಳಲ್ಲಿ ಬಿಜೆಪಿ ಮಿತ್ರಕೂಟ 131 ಗೆದ್ದಿವೆ. ಮುಂಬೈ, ನವಿಮುಂಬೈ, ಥಾಣೆ, ಪುಣೆ, ನಾಗಪುರ, ನಾಸಿಕ್ ಸೇರಿದಂತೆ ಪ್ರಮುಖ ನಗರಗಳು ಬಿಜೆಪಿ ಪಾಲಾಗಿವೆ. ಈ ಮೂಲಕ, ಇದೇ ಮೊದಲ ಬಾರಿಗೆ ದೇಶದ ಶ್ರೀಮಂತ ಕಾರ್ಪೊರೇಷನ್ ಬಿಎಂಸಿಗೆ ಬಿಜೆಪಿ ಮೇಯರ್ ಸಿಗಲಿದೆ.
ನವದೆಹಲಿ: ಮೇಕೆದಾಟು ಯೋಜನೆಗೆ ಇರುವ ಅಡೆತಡೆಗಳು ನಿವಾರಣೆಯಾಗುತ್ತಿದ್ದು, ಶೀಘ್ರದಲ್ಲೇ ಕಾಮಗಾರಿಗೆ ಚಾಲನೆ ನೀಡುವ ಸಾಧ್ಯತೆ ಇದೆ ಎಂದು ಕರ್ನಾಟಕದ ಜಲಸಂಪನ್ಮೂಲ…
ಬೆಂಗಳೂರು: ಮುಂದಿನ 24 ಗಂಟೆ ಅವಧಿಯಲ್ಲಿ ಕರಾವಳಿ ಭಾಗದಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.…
ನವದೆಹಲಿ: ಜಂತರ್ ಮಂತರ್ ಹಾಗೂ ದೇಶದ ವಿವಿಧ ಭಾಗಗಳಲ್ಲಿ ವಿದ್ಯಾರ್ಥಿಗಳು ನಡೆಸಿದ ಪ್ರತಿಭಟನೆಗಳ ಮೇಲೆ ನಡೆದ ಪೊಲೀಸರ ದೌರ್ಜನ್ಯ ಮತ್ತು…
ಮಂಡ್ಯ: ಕಾವೇರಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ ಕಾವೇರಿ ನೀರು ನಿಯಂತ್ರಣ ಸಮಿತಿಯು ತಮಿಳುನಾಡಿಗೆ ನಿತ್ಯ 3500 ಕ್ಯೂಸೆಕ್ನಂತೆ 15…
ರಾಜ್ಯದಲ್ಲಿ ಭ್ರಷ್ಟಾಚಾರ ನಿಯಂತ್ರಣಕ್ಕಾಗಿ ಲೋಕಾಯುಕ್ತರು ಆಗಾಗ್ಗೆ ದಾಳಿ ನಡೆಸುವುದು ಮಾಧ್ಯಮಗಳಲ್ಲಿ ವರದಿಯಾಗುತ್ತವೆ. ಈಗಿನ ಪತ್ರಿಕಾ ವರದಿಗಳ ಪ್ರಕಾರ, ಮೂರೂವರೆ ವರ್ಷಗಳಲ್ಲಿ…
ನಂದಿನಿ ಉತ್ಪನ್ನಗಳಾದ, ತುಪ್ಪ ಕೆ.ಜಿಗೆ ರೂ.೧೫ ಮತ್ತು ಬೆಣ್ಣೆ ಕೆ.ಜಿಗೆ ರೂ.೫೦ ಅನ್ನು ಇದೇ ತಿಂಗಳ ೨೪ ರಿಂದಲೇ ಗ್ರಾಹಕರಿಗೆ…