ದೇಶ- ವಿದೇಶ

ವೋಟ್‌ ಚೋರಿ | ಸತ್ಯದ ಬೆನ್ನಿಗೆ ನಿಂತು ಮೋದಿ, ಶಾ, ಆರ್‌ಎಸ್‌ಎಸ್‌ ಅನ್ನು ಖಾಲಿ ಮಾಡಿಸುತ್ತೇವೆ : ಕಾಂಗ್ರೆಸ್‌ ಶಪಥ

ಹೊಸದಿಲ್ಲಿ : ವೋಟ್ ಚೋರಿ ವಿರುದ್ಧ ಮತ್ತೆ ರಾಷ್ಟ್ರ ಮಟ್ಟದಲ್ಲಿ ಅಬ್ಬರಿಸಿರುವ ಕಾಂಗ್ರೆಸ್, ಪ್ರಧಾನಿ ನರೇಂದ್ರ ಮೋದಿ, ಬಿಜೆಪಿ ಮತ್ತು ಆರ್.ಎಸ್.ಎಸ್ ಅನ್ನು ದೇಶದಿಂದ ಓಡಿಸುವವರೆಗೂ ಬಿಡುವುದಿಲ್ಲ ಎಂದು ಶಪಥ ಮಾಡಿದೆ.

ಭಾನುವಾರ ದೆಹಲಿಯ ಐತಿಹಾಸಿಕ ರಾಮ್ ಲೀಲಾ ಮೈದಾನದಲ್ಲಿ ನಡೆದ ವೋಟ್ ಚೋರಿ ವಿರುದ್ಧದ ಪ್ರತಿಭಟನೆಯಲ್ಲಿ ಮಾತನಾಡಿದ ಕಾಂಗ್ರೆಸ್ ನಾಯಕರು, ತಮ್ಮ ಭಾಷಣದುದ್ದಕ್ಕೂ ಕೇಂದ್ರ ಸರ್ಕಾರ ಪ್ರಧಾನಿ ನರೇಂದ್ರ ಮೋದಿ ಗೃಹ ಸಚಿವ ಅಮಿತ್ ಶಾ ಕೇಂದ್ರ ಚುನಾವಣಾ ಆಯೋಗ ಮತ್ತು ಆರ್ ಎಸ್ ಎಸ್ ವಿರುದ್ಧ ಬೆಂಕಿಯುಗಿಳಿದರು.

ಲೋಕಸಭಾ ಪ್ರತಿಪಕ್ಷದ ನಾಯಕ ರಾಹುಲ್ ಗಾಂಧಿಯವರು, ತಮ್ಮ ಭಾಷಣದಲ್ಲಿ ಕರ್ನಾಟಕದ ಕಲ್ಬುರ್ಗಿ ಜಿಲ್ಲೆಯ ಅಳಂದ ವಿಧಾನಸಭಾ ಕ್ಷೇತ್ರದಲ್ಲಿ ನಡೆದಿರುವ ಮತಗಳ್ಳತನ ಪ್ರಕರಣವನ್ನು ಸಹ ಪ್ರಸ್ತಾಪಿಸಿ ಪ್ರಧಾನಿ ನರೇಂದ್ರ ಮೋದಿ ಮತಗಳ್ಳತನದಿಂದಲೇ ಕೇಂದ್ರದಲ್ಲಿ ಅಧಿಕಾರ ಹಿಡಿದಿದ್ದಾರೆ ಎಂದು ಗಂಭೀರ ಆರೋಪ ಮಾಡಿದರು.

ನಾವು ಸತ್ಯದ ಬೆನ್ನಿಗೆ ನಿಂತು ಮೋದಿ, ಅಮಿತ್‌ ಶಾ, ಆರ್‌ಎಸ್‌ಎಸ್ (RSS) ಸರ್ಕಾರವನ್ನ ದೇಶದಿಂದ ಖಾಲಿ ಮಾಡಿಸುತ್ತೇವೆ, ಇದು ನನ್ನ ಗ್ಯಾರಂಟಿ ಅಬ್ಬರಿಸಿದರು. ಸತ್ಯ ಅತ್ಯಂತ ಅವಶ್ಯಕ ಎಂದು ಗಾಂಧಿ ಹೇಳುತ್ತಿದ್ದರು. ನಮ್ಮ ಧರ್ಮದಲ್ಲಿ ಸತ್ಯವನ್ನ ಅತ್ಯಂತ ಮುಖ್ಯ ಎಂದು ಭಾವಿಸಲಾಗಿದೆ. ಅದಕ್ಕಾಗಿ ಧರ್ಮದಲ್ಲಿ ʻಸತ್ಯಂ, ಶಿವಂ ಸುಂದರಂʼ ಎಂದು ಉಲ್ಲೇಖಿಸಿದೆ. ಆದರೆ ವಿಶ್ವ ಸತ್ಯ ಅಲ್ಲ ಶಕ್ತಿಯನ್ನು ನೋಡುತ್ತದೆ. ಯಾರ ಬಳಿಕ ಶಕ್ತಿ ಇದೆ ಅವರನ್ನು ಒಪ್ಪಿಕೊಳ್ಳುತ್ತೆ. ಈ ವಿಚಾರಧಾರೆ ಆರ್‌ಎಸ್‌ಎಸ್ ಸಿದ್ಧಾಂತ. ಅವರಿಗೆ ಸತ್ಯ ಅಲ್ಲ ಅಧಿಕಾರ ಮುಖ್ಯ. ಈಗ ಅಸತ್ಯ – ಸತ್ಯದ ನಡುವೆ ಹೋರಾಟ ನಡೆಯತ್ತಿದೆ. ನಾವು ಸತ್ಯದ ಹಿಂದೆ ನಿಂತು ಮೋದಿ, ಅಮಿತ್ ಶಾ, ಆರ್‌ಎಸ್‌ಎಸ್ ಸರ್ಕಾರವನ್ನ ದೇಶದಿಂದ ಖಾಲಿ ಮಾಡಿಸುತ್ತೇವೆ. ಇದು ನನ್ನ ಗ್ಯಾರಂಟಿ ಎಂದು ಗುಡಿಗಿದರು.

ಚುನಾವಣಾ ಆಯುಕ್ತರಿಗೆ ವಾರ್ನಿಂಗ್‌
ಚುನಾವಣೆ ವೇಳೆ ಹತ್ತು ಸಾವಿರ ನೀಡುತ್ತಾರೆ. ಆದರೆ ಆಯೋಗ ಯಾವುದೇ ಆಕ್ಷೇಪಣೆ ಮಾಡುವುದಿಲ್ಲ. ಚುನಾವಣಾ ಆಯೋಗ ಬಿಜೆಪಿ ಸರ್ಕಾರದ ಜೊತೆಗೆ ನಿಂತು ಕೆಲಸ ಮಾಡುತ್ತಿದೆ. ಆಯೋಗಕ್ಕಾಗಿ ಈ ಸರ್ಕಾರ ಹೊಸ ಕಾನೂನು ಜಾರಿ ಮಾಡಿತು. ಹಾಗಾಗಿ ಆಯುಕ್ತರು ಏನೇ ಮಾಡಿದರು ಅವರ ವಿರುದ್ಧ ಕ್ರಮ ಇಲ್ಲ. ಆಯೋಗದ ಆಯುಕ್ತರಿಗೆ ಹೇಳುತ್ತೇನೆ ಮೋದಿ ಚುನಾವಣಾ ಆಯುಕ್ತರಲ್ಲ, ಮುಂದೆ ಅಸತ್ಯದ ಜೊತೆಗೆ ನಿಂತಿರುವ ಅಧಿಕಾರಿಗಳನ್ನ ಬಿಡುವುದಿಲ್ಲ ಎಂದು ಎಚ್ಚರಿಕೆ ನೀಡಿದರು.

ಬ್ರೆಜಿಲ್‌ ಮಹಿಳೆ 22 ಬಾರಿ ಮತದಾರರ ಪಟ್ಟಿಯಲ್ಲಿ ಕಾಣಿಸಿಕೊಳ್ತಾತಾರೆ. ಎರಡೆರಡು ಕಡೆ ಮತದ ಹಕ್ಕು ಹೊಂದಿದ್ದಾರೆ. ನಮ್ಮ ಪ್ರಶ್ನೆಗಳಿಗೆ ಆಯೋಗ ಈವರೆಗೂ ಉತ್ತರ ಕೊಟ್ಟಿಲ್ಲ. ನನ್ನ ಆರೋಪಗಳ ಮೇಲೆ ಸಂಸತ್‌ನಲ್ಲಿ ಚರ್ಚೆ ಮಾಡಲು ಬಿಜೆಪಿ ತಯಾರಿಲ್ಲ. ಇಂದು ಅವರ ಬಳಿಕ ಅಧಿಕಾರ ಇರಬಹುದು. ಇವರ ಕೈಯಿಂದ ಅಧಿಕಾರ ಹೊಗ್ತಿದ್ದಂತೆ ಅವರ ಧೈರ್ಯ ಏನಾಗುತ್ತೆ ನೋಡಿ ಎಂದು ಹೇಳಿದರು.

ಮೋದಿ ಸರ್ಕಾರ ಇಬ್ಬರು ಶ್ರೀಮಂತರಿಗಾಗಿ ಕೆಲಸ ಮಾಡುತ್ತಿದೆ. ಭಾರತದಲ್ಲಿ ಸತ್ಯದ ಗೆಲುವುವಾಗಲಿದೆ. ಮೋದಿ, ಅಮಿತ್ ಶಾ ಏನ್ ಭಾಷಣ ಮಾಡಬೇಕು ಮಾಡಲಿ. ಆದ್ರೆ ನಾವು ದ್ವೇಷ, ಹಿಂಸೆಯಿಂದಲ್ಲ, ಸತ್ಯ ಮತ್ತು ಅಹಿಂಸೆಯಿಂದ ಅವರನ್ನ ಸೋಲಿಸುತ್ತೇವೆ. ಮೋದಿ ಅವರ ಮುಖ ನೋಡಿ ಜವರ ವಿಶ್ವಾಸ ಕುಗ್ಗಿ ಹೋಗಿದೆ ಎಂದು ಕುಟುಕಿದರು.

ಕರ್ನಾಟಕದಲ್ಲಿ ಮತಗಳ್ಳತನ ಆಗಿದ್ದು ಸಾಬೀತಾಗಿದೆ.
ನರೇಂದ್ರ ಮೋದಿ ಮತ ಕಳ್ಳತನ ಮಾಡಿ ಅಧಿಕಾರಕ್ಕೆ ಬಂದಿದ್ದಾರೆ. ಅಷ್ಟೇ ಅಲ್ಲದೆ ಬಿಜೆಪಿಯ ಜೊತೆ ಕೇಂದ್ರ ಚುನಾವಣಾ ಆಯೋಗ ಶಾಮೀಲಾಗಿದ್ದು, ಚುನಾವಣಾ ಆಯೋಗಕ್ಕಾಗಿ ಕಾನೂನನ್ನೇ ಬದಲಾವಣೆ ಮಾಡಿದ್ದಾರೆ ಎಂದು ಆರೋಪ ಮಾಡಿದರು.

ಹರಿಯಾಣದಲ್ಲಿ ಮತಗಳ್ಳತನ ಹೇಗೆ ಆಗಿದೆ ಅಂತಾ ತಿಳಿಯಬೇಕಿದೆ. ಒಂದೇ ಬೂತ್​​ನಲ್ಲಿ 200 ಸಲ ಹೇಗೆ ಮತ ಹಾಕಲು ಸಾಧ್ಯ? ಸಂಸತ್​ನಲ್ಲಿ ಪ್ರಸ್ತಾಪ ಮಾಡಲು ಮುಂದಾದರೆ ಅವಕಾಶ ಕೊಡಲಿಲ್ಲ. ಹಿಂಸೆಯಿಲ್ಲದೆ ನಾವು ಈ ಯುದ್ಧ ಗೆಲ್ಲುತ್ತೇವೆ ಎಂದಿದ್ದಾರೆ.

ಸತ್ಯವು ಅತ್ಯಂತ ಮುಖ್ಯ ಎಂದು ಮಹಾತ್ಮ ಗಾಂಧೀಜಿ ಹೇಳಿದ್ದರು. ಆದರೆ ಸತ್ಯವಲ್ಲ, ಶಕ್ತಿಯೇ ಮುಖ್ಯ ಎಂದು ಭಾಗವತ್ ಹೇಳಿದರು. ಸತ್ಯ ಎತ್ತಿಹಿಡಿಯುವ ಮೂಲಕ ಮೋದಿ ಮತ್ತು ಆರ್‌ಎಸ್‌ಎಸ್ ಸರ್ಕಾರವನ್ನು ನಾವು ತೆಗೆದುಹಾಕುತ್ತೇವೆ. ಮೋಹನ್ ಭಾಗವತ್ ಸತ್ಯಕ್ಕೆ ಯಾವುದೇ ಬೆಲೆಯಿಲ್ಲ ಎನ್ನುತ್ತಾರೆ., ನಾವು ಸತ್ಯದ ಹಿಂದೆ ಇರುವವರು ಎಂದು ರಾಹುಲ್ ಗಾಂಧಿ ಹೇಳಿದ್ದಾರೆ.

ಎಸ್‌ಐಆರ್ ವಿರುದ್ಧ ಕಾಂಗ್ರೆಸ್ ರ್ಯಾಲಿ ನಡೆಸಿತು. ಚುನಾವಣಾ ಸುಧಾರಣೆಗಳು ಮತ್ತು ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಕುರಿತು ಲೋಕಸಭೆಯಲ್ಲಿ ಸರ್ಕಾರ ಮತ್ತು ಪ್ರತಿಪಕ್ಷಗಳ ನಡುವೆ ಬಿಸಿ ಚರ್ಚೆ ನಡೆದ ಕೆಲವು ದಿನಗಳ ನಂತರ ಈ ದೆಹಲಿಯಲ್ಲಿ ಕಾಂಗ್ರೆಸ್ ಬೃಹತ್ ರ್ಯಾಲಿ ನಡೆಸಿದೆ. ಈ ವೇಳೆ ಚುನಾವಣಾ ಆಯೋಗ ಹಾಗೂ ಕೇಂದ್ರ ಸರ್ಕಾರದ ವಿರುದ್ಧ ಘೋಷಣೆ ಮೊಳಗಿಸಿದರು.

ಪ್ರತಿಭಟನೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಡಿಸಿಎಂ .ಡಿ.ಕೆ ಶಿವಕುಮಾರ್ ಕೆ.ಸಿ. ವೇಣುಗೋಪಾಲ್, ಜೈರಾಮ್ ರಮೇಶ್ ಮತ್ತು ಸಚಿನ್ ಪೈಲಟ್, ರಣದೀಪ್ ಸಿಂಗ್‌ ಸುರ್ಜೇವಾಲ ಸೇರಿದಂತೆ ಹಿರಿಯ ನಾಯಕರು ಭಾಗವಹಿಸಿದ ಕೇಂದ್ರದ ವಿರುದ್ಧ ಘೋಷಣೆ ಕೂಗಿದರು.

ಆಂದೋಲನ ಡೆಸ್ಕ್

Recent Posts

ಖಾಸಗಿ ಶಾಲೆಗಳಲ್ಲಿ ಕಡ್ಡಾಯವಾಗಿ ಕನ್ನಡ ಕಲಿಸದೇ ಹೋದರೆ ಕ್ರಮ: ಸಚಿವ ಮಧು ಬಂಗಾರಪ್ಪ

ಬೆಂಗಳೂರು: ರಾಜ್ಯದ ಎಲ್ಲಾ ಮಾದರಿ ಬೋರ್ಡ್‌ಗಳು ಕಡ್ಡಾಯವಾಗಿ ಕನ್ನಡ ಭಾಷೆ ಕಲಿಸಬೇಕು. ಇಲ್ಲದೇ ಹೋದರೆ ಅಂತಹ ಶಾಲೆಗಳ ಮೇಲೆ ಕ್ರಮ…

6 hours ago

ಹನೂರು| ರಸ್ತೆಯಲ್ಲಿ ಹುಲಿ ದರ್ಶನ: ವಿಡಿಯೋ ವೈರಲ್‌

ಹನೂರು: ತಾಲೂಕಿನ ಮಿಣ್ಯಂ ಗ್ರಾಮದಿಂದ ಹನೂರಿಗೆ ಆಗಮಿಸುತ್ತಿದ್ದ ಪ್ರಯಾಣಿಕರಿಗೆ ಅರಣ್ಯ ವ್ಯಾಪ್ತಿಯಲ್ಲಿ ಹುಲಿರಾಯ ದರ್ಶನ ನೀಡಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ…

7 hours ago

ಶೀಘ್ರದಲ್ಲೇ ನಗರ ಸ್ಥಳೀಯ ಸಂಸ್ಥೆಗಳಿಗೆ ಚುನಾವಣೆ: ರಹೀಂ ಖಾನ್‌

ಬೆಳಗಾವಿ: ಆದಷ್ಟು ಬೇಗ ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆ ನಡೆಸಲಾಗುತ್ತದೆ ಎಂದು ಸಚಿವ ರಹೀಂ ಖಾನ್‌ ತಿಳಿಸಿದರು. ವಿಧಾನಪರಿಷತ್‌ ಕಲಾಪದಲ್ಲಿ…

7 hours ago

ಎಚ್‌ಡಿಕೆ ಹುಟ್ಟುಹಬ್ಬ: ಮಂಡ್ಯದಲ್ಲಿ ಕಾರ್ಯಕರ್ತರಿಂದ ಅದ್ಧೂರಿ ಆಚರಣೆ

ಮಂಡ್ಯ: ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರ ಹುಟ್ಟುಹಬ್ಬವನ್ನು ಮಂಡ್ಯ ಜಿಲ್ಲೆಯ ಜೆಡಿಎಸ್‌ ಕಾರ್ಯಕರ್ತರು ಅದ್ಧೂರಿಯಾಗಿ ಆಚರಣೆ ಮಾಡಿದರು. ಮದ್ದೂರಿನಲ್ಲಿ ಮಾಜಿ…

7 hours ago

ಕೋಳಿ ಮೊಟ್ಟೆ ಸೇವಿಸಿದರೆ ಕ್ಯಾನ್ಸರ್‌ ಬರುವ ವದಂತಿ: ಸಚಿವ ದಿನೇಶ್‌ ಗುಂಡೂರಾವ್‌ ಹೇಳಿದ್ದಿಷ್ಟು.!

ಬೆಳಗಾವಿ: ಕೋಳಿ ಮೊಟ್ಟೆ ಸೇವಿಸಿದರೆ ಕ್ಯಾನ್ಸರ್‌ ಬರುವ ವದಂತಿ ಎಲ್ಲೆಡೆ ಹಬ್ಬಿರುವ ಹಿನ್ನೆಲೆಯಲ್ಲಿ ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌ ಪ್ರತಿಕ್ರಿಯೆ…

7 hours ago

ಮಳವಳ್ಳಿಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಆಗಮನ

ಮಳವಳ್ಳಿ: ರಾಷ್ಟ್ರಪತಿ ದ್ರೌಪದಿ ಮುರ್ಮು ಮಳವಳ್ಳಿಯಲ್ಲಿ ನಡೆಯಲಿರುವ ಸುತ್ತೂರಿನ ಆದಿ ಜಗದ್ಗುರು ಶ್ರೀ ಶಿವರಾತ್ರಿ ಶಿವ ಯೋಗಿಗಳರವರ 1066ನೇ ಜಯಂತಿ…

8 hours ago