ದೇಶ- ವಿದೇಶ

Voting | ಮಧ್ಯಾಹ್ನ 1 ಗಂಟೆ ವೇಳೆಗೆ ತಮಿಳುನಾಡು ಶೇ.56.81, ಪ.ಬಂಗಾಳದಲ್ಲಿ ಶೇ.62.18ರಷ್ಟು ಮತದಾನ

ಚೆನ್ನೈ : ತಮಿಳುನಾಡು ಮತ್ತು ಪಶ್ಚಿಮ ಬಂಗಾಳದ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ರಾಜಕೀಯ ನಾಯಕರು, ಸೆಲೆಬ್ರಿಟಿಗಳು ಮತ್ತು ನಾಗರಿಕರು ತಮ್ಮ ಮತ ಹಕ್ಕು ಚಲಾಯಿಸಿದರು.

ತಮಿಳುನಾಡಿನ ಎಲ್ಲಾ 234 ವಿಧಾನಸಭಾ ಕ್ಷೇತ್ರಗಳಿಗೆ ಹಾಗೂ ಪಶ್ಚಿಮ ಬಂಗಾಳದ 294 ಕ್ಷೇತ್ರಗಳಲ್ಲಿ 152 ಕ್ಷೇತ್ರಗಳಿಗೆ ಇಂದು ಗುರುವಾರ 7 ಗಂಟೆಗೆ ಮತದಾನ ಆರಂಭವಾಗಿವೆ. ಮಧ್ಯಾಹ್ನ 1 ಗಂಟೆ ವೇಳೆಗೆ ತಮಿಳುನಾಡುವಿನಲ್ಲಿ ಶೇ.56.81ರಷ್ಟು ಮತದಾನವಾದರೆ, ಪಶ್ಚಿಮ ಬಂಗಾಳದಲ್ಲಿ ಶೇ.62.18ರಷ್ಟು ಮತದಾನ ಆಗಿದೆ.

ತಮಿಳುನಾಡಿನಲ್ಲಿ 5.73 ಕೋಟಿಗೂ ಹೆಚ್ಚು ಮತದಾರರು 4,023 ಅಭ್ಯರ್ಥಿಗಳ ರಾಜಕೀಯ ಭವಿಷ್ಯವನ್ನು ನಿರ್ಧರಿಸಲಿದ್ದಾರೆ. ಮುಖ್ಯವಾಗಿ ಡಿಎಂಕೆ ನೇತೃತ್ವದ ಮೈತ್ರಿ ಹಾಗೂ ಎಐಎಡಿಎಂಕೆ ನೇತೃತ್ವದ ಎನ್‌ಡಿಎ ನಡುವಿನ ತ್ರಿಕೋನ ಸ್ಪರ್ಧೆ ನಡೆಯುತ್ತಿದೆ. ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅಧಿಕಾರವನ್ನು ಉಳಿಸಿಕೊಳ್ಳಲು ಪ್ರಯತ್ನಿಸುತ್ತಿದ್ದರೆ, ಎಐಎಡಿಎಂಕೆ ನಾಯಕ ಎಡಪ್ಪಾಡಿ ಕೆ. ಪಳನಿಸ್ವಾಮಿ ಐದು ವರ್ಷಗಳ ಬಳಿಕ ಮತ್ತೆ ಅಧಿಕಾರಕ್ಕೆ ಮರಳಲು ಪ್ರಯತ್ನಿಸುತ್ತಿದ್ದಾರೆ. ಇದಲ್ಲದೆ, ನಟ ವಿಜಯ ಅವರ ಟಿವಿಕೆ ಪಕ್ಷದ ಚುನಾವಣಾ ಪ್ರವೇಶವು ಸ್ಪರ್ಧೆಗೆ ಹೊಸ ಆಯಾಮವನ್ನು ನೀಡಿದ್ದು, ದ್ರಾವಿಡ ಪಕ್ಷಗಳಿಗೆ ಕಠಿಣ ಸವಾಲು ಎದುರಾಗಿದೆ.

ಪಶ್ಚಿಮ ಬಂಗಾಳದಲ್ಲಿ, ಸುಮಾರು 1.75 ಕೋಟಿ ಮಹಿಳೆಯರನ್ನು ಒಳಗೊಂಡಂತೆ 3.60 ಕೋಟಿಗೂ ಹೆಚ್ಚು ಮತದಾರರು ರಾಜ್ಯದ 294 ಕ್ಷೇತ್ರಗಳಲ್ಲಿ 152 ಕ್ಷೇತ್ರಗಳನ್ನು ಒಳಗೊಂಡ ಎರಡು ಹಂತಗಳ ಮೊದಲ ಹಂತದಲ್ಲಿ ಮತದಾನಕ್ಕೆ ಅರ್ಹರಾಗಿದ್ದಾರೆ. ಮೂರು ಅವಧಿಗೆ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನೇತೃತ್ವದ ಟಿಎಂಸಿ ಹಾಗೂ ಮೊದಲ ಬಾರಿಗೆ ರಾಜ್ಯದಲ್ಲಿ ಸರ್ಕಾರ ರಚಿಸಲು ಪ್ರಯತ್ನಿಸುತ್ತಿರುವ ಬಿಜೆಪಿ ನಡುವೆ ನೇರ ಸ್ಪರ್ಧೆ ಏರ್ಪಟಿದ್ದೆ.

ತಮಿಳುನಾಡು ಮತ್ತು ಪಶ್ಚಿಮ ಬಂಗಾಳದ ಮತ ಎಣಿಕೆ ಮೇ 4ರಂದು ನಡೆಯಲಿದೆ. ಇದೇ ದಿನ ಕೇರಳ, ಅಸ್ಸಾಂ ಮತ್ತು ಕೇಂದ್ರಾಡಳಿತ ಪ್ರದೇಶವಾದ ಪುದುಚೆರಿಯಲ್ಲಿ ಮತ ಎಣಿಕೆ ನಡೆಯಲಿದೆ.

 

ಆಂದೋಲನ ಡೆಸ್ಕ್

Recent Posts

ಶಿಕ್ಷಣ ವ್ಯವಸ್ಥೆ ಸುಧಾರಣೆಗೆ ಸರ್ಕಾರ ಮಣಿಸಿದ ಜೆನ್ ಝೀ ಚಳವಳಿ

ದೇಶ ಆಳುವ ವರ್ಗದ ಏಕಚಕ್ರಾಧಿಪತ್ಯವನ್ನು ವಿರೋಧಿಸಿ ನಡೆದ ಚಳವಳಿ ಸರ್ಕಾರವನ್ನು ಮಂಡಿಯೂರುವಂತೆ ಮಾಡಿದೆ. ದೇಶಾದ್ಯಂತ ಕಾಕ್ರೋಚ್ ಜನತಾ ಪಾರ್ಟಿ ನೇತೃತ್ವದಲ್ಲಿ…

14 mins ago

ಸಂಪುಟ ವಿಸ್ತರಣೆ ವಿಳಂಬ; ಡಿಕೆಶಿ ಅಸಮಾಧಾನ

ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ಸರ್ಕಾರ ಟೇಕಾಫ್ ಆಗಲು ಪೂರ್ಣ ಪ್ರಮಾಣದ ಸಚಿವ ಸಂಪುಟ ರಚನೆ ಅನಿವಾರ್ಯ ಕಳೆದ ವಾರ…

17 mins ago

ಕೃಷಿಗೆ ನೀರಿಲ್ಲ ಎಂಬ ಆದೇಶದಿಂದ ರೈತರು ಕಂಗಾಲು

ಆನಂದ್ ಹೊಸೂರು ಚುಂಚನಕಟ್ಟೆ ಹೋಬಳಿಯಲ್ಲಿ ಭತ್ತ ಬೆಳೆಯುತ್ತಿದ್ದ ರೈತರಿಗೆ ಈಗ ಸಂಕಷ್ಟದ ಸ್ಥಿತಿ ಹೊಸೂರು: ಕಾವೇರಿ ನೀರು ಕುಡಿಯಲು ಮಾತ್ರ,…

23 mins ago

ರಸ್ತೆ ಬದಿ ಅಗೆದು ಹಾಗೆಯೇ ಬಿಟ್ಟ ಗುತ್ತಿಗೆದಾರರು

ಮಹೇಂದ್ರ ಹಸಗೂಲಿ ಸಂಚಾರಕ್ಕೆ ಅಡಚಣೆ; ಬಿಎಸ್‌ಎನ್‌ಎಲ್ ಗುತ್ತಿಗೆದಾರರ ವಿರುದ್ಧ ಕ್ರಮಕ್ಕೆ ಸಾರ್ವಜನಿಕರ ಒತ್ತಾಯ ಗುಂಡ್ಲುಪೇಟೆ: ಬಿಎಸ್‌ಎನ್‌ಎಲ್‌ನಿಂದ ನೇಮಿಸಲ್ಪಟ್ಟಿರುವ ಗುತ್ತಿಗೆದಾರರು ಕೇಬಲ್…

29 mins ago

ಎಕ್ಸ್ ಬಿಟ್ಟು ಇನ್‌ಸ್ಟಾ ಹಿಡಿದ ರಾಜಕಾರಣ : ಮೋದಿಗೆ ಜೆನ್-ಝೀ ಕಾಟ

ನವದೆಹಲಿ : ದೇಶದ ರಾಜಕೀಯದ ಭಾಷೆ ಬದಲಾಗುತ್ತಿದೆ. ಒಮ್ಮೆ ಟ್ವಿಟರ್, ಈಗಿನ ಎಕ್ಸ್‌ನಲ್ಲಿ ನಡೆಯುತ್ತಿದ್ದ ವಾಗ್ವಾದ, ಟ್ರೆಂಡ್‌ಗಳು ಈಗ ಇನ್‌ಸ್ಟಾಗ್ರಾಂ…

13 hours ago