ದೇಶ- ವಿದೇಶ

ವಕ್ಫ್‌ ತಿದ್ದುಪಡಿ ಮಸೂದೆ: ಲೋಕಸಭೆಯಲ್ಲಿ ಬಿಲ್‌ ಮಂಡಿಸಿದ ಕೇಂದ್ರ ಸರ್ಕಾರ

ನವದೆಹಲಿ: ಎನ್‌ಡಿಎ ನೇತೃತ್ವದ ಬಿಜೆಪಿ ಸರ್ಕಾರ ವಿರೋಧ ಪಕ್ಷಗಳ ವಿರೋಧದ ನಡುವೆಯೂ ಲೋಕಸಭೆಯಲ್ಲಿ ಇಂದು ವಕ್ಫ್‌ ತಿದ್ದುಪಡಿ ಮಸೂದೆಯನ್ನು ಕೇಂದ್ರ ಸರ್ಕಾರ ಮಂಡನೆ ಮಾಡಿದೆ.

ಲೋಕಸಭೆಯಲ್ಲಿ ಇಂದು(ಏಪ್ರಿಲ್‌.2) ಕೇಂದ್ರ ಸಂಸದೀಯ ವ್ಯವಹಾ ಮತ್ತು ಅಲ್ಪ ಸಂಖ್ಯಾತ ವ್ಯವಹಾರಗಳ ಸಚಿವ ಕಿರಣ್‌ ರಿಜಿಜು ಅವರು ವಕ್ಫ್‌ ತಿದ್ದುಪಡಿ ಬಿಲ್‌ ಅನ್ನು ಮಂಡಿಸಿದ್ದಾರೆ.

ಕಿರಣ್‌ ರಿಜಿಜು ಬಿಲ್‌ ಮಂಡಿಸುವಾಗ ಹೇಳಿದ್ದೇನು?

ಲೋಕಸಭೆ ಮತ್ತು ರಾಜ್ಯಸಭೆಗಳ ಜಂಟಿ ಸಮಿತಿಯಲ್ಲಿ ವಕ್ಫ್‌ ತಿದ್ದುಪಡಿ ಮಸೂದೆ ಬಗ್ಗೆ ನಡೆದ ಚರ್ಚೆಯನ್ನು ಈ ದೇಶದ ಸಂಸತ್ತಿನ ಇತಿಹಾಸದಲ್ಲಿ ಇಲ್ಲಿಯವರೆಗೆ ಮಾಡಲಾಗಿಲ್ಲ ಎಂದು ನಾನು ತಿಳಿಸಲು ಬಯಸುತ್ತೇನೆ. ಜಂಟಿ ಸಮಿತಿಯ ಎಲ್ಲ ಸದಸ್ಯರಿಗೆ ನಾನು ಧನ್ಯವಾದ ಮತ್ತು ಅಭಿನಂದಿಸುತ್ತೇನೆ. ಇಲ್ಲಿಯವರೆಗೆ, ವಿವಿಧ ಸಮುದಾಯಗಳ ರಾಜ್ಯ ಹೊಂದಿರುವ ಒಟ್ಟು 284 ನಿಯೋಗಗಳು ತಮ್ಮ ಅಭಿಪ್ರಾಯಗಳನ್ನು ಮತ್ತು ಸಲಹೆಗಳನ್ನು ಸಮಿತಿಯ ಮುಂದೆ ಮಂಡಿಸಿವೆ. 25 ರಾಜ್ಯ ಸರ್ಕಾರಗಳು ಹಾಗೂ ಕೇಂದ್ರ ಪ್ರಾಂತ್ಯಗಳು ವಕ್ಫ್‌ ಮಂಡಳಿಗಳು ಕೂಡ ತಮ್ಮ ಸಲ್ಲಿಕೆಗಳನ್ನು ಪ್ರಸ್ತುತಪಡಿಸಿವೆ ಎಂದು ಹೇಳಿದರು.

ಈ ಮಸೂದೆಯ ಬಗ್ಗೆ ಭರವಸೆ ಮಾತ್ರವಲ್ಲ, ಇದನ್ನು ವಿರೋಧಿಸುತ್ತಿರುವವರು ಕೂಡ ತಮ್ಮ ಹೃದಯದಲ್ಲಿ ಬದಲಾವಣೆಯನ್ನು ಹೊಂದುತ್ತಾರೆ ಎಂಬ ಖಾತ್ರಿ ನನಗೆ ಇದೆ. ಅಲ್ಲದೇ ಪ್ರತಿಯೊಬ್ಬರೂ ಈ ಮಸೂದೆಯನ್ನು ಸಕರಾತ್ಮಕ ಮನೋಭಾವದಿಂದ ಬೆಂಬಲಿಸುತ್ತಾರೆ ಎಂಬ ಆಶಯವಿದೆ ಎಂದರು.

ಅರ್ಚನ ಎಸ್‌ ಎಸ್

Recent Posts

ಹನೂರು: ಅಲಗುಮೂಲೆ ಗ್ರಾಮದಲ್ಲಿ ವಿಜೃಂಭಣೆಯಿಂದ ನಡೆದ ಕೊಂಡೋತ್ಸವ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಅಲಗುಮೂಲೆ ಗ್ರಾಮದಲ್ಲಿ 3 ವರ್ಷಕ್ಕೊಮ್ಮೆ ನಡೆಯುವ ಶ್ರೀ ಬಸವೇಶ್ವರ…

5 hours ago

ನಂಜನಗೂಡು: 6.2 ಕೋಟಿ ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ

ನಂಜನಗೂಡು: ಗ್ಯಾರಂಟಿ ಯೋಜನೆಗಳ ಜೊತೆ ಅಭಿವೃದ್ಧಿ ಕೆಲಸಗಳಿಗೂ ಆದ್ಯತೆ ನೀಡಲಾಗುತ್ತಿದ್ದು, ಕ್ಷೇತ್ರದ ಸರ್ವಾಂಗೀಣ ಅಭಿವೃದ್ಧಿಗೆ ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ ಎಂದು…

5 hours ago

ಎಸ್‌ಎಸ್‌ಎಲ್‌ಸಿ 2ನೇ ಪರೀಕ್ಷೆಗೆ ಸರ್ಕಾರದಿಂದಲೇ ಶುಲ್ಕ ಪಾವತಿ: ಸಚಿವ ಮಧು ಬಂಗಾರಪ್ಪ

ಬೆಂಗಳೂರು: ಪ್ರಸಕ್ತ ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರಲ್ಲಿ ಅನುತ್ತೀರ್ಣರಾಗಿರುವ ಎಲ್ಲಾ ವಿದ್ಯಾರ್ಥಿಗಳನ್ನು ಮುಂಬರುವ ಪರೀಕ್ಷೆ-2ಕ್ಕೆ ಕಡ್ಡಾಯವಾಗಿ ನೋಂದಾಯಿಸಿ, ಅವರನ್ನು ಶೈಕ್ಷಣಿಕವಾಗಿ ಸಜ್ಜುಗೊಳಿಸಲು ಅಗತ್ಯ…

7 hours ago

ಮೇ.15ಕ್ಕೆ ಡಿ.ಕೆ.ಶಿವಕುಮಾರ್‌ ಸಿಎಂ ಆಗೋದು ಫಿಕ್ಸ್‌: ಇಕ್ಬಾಲ್‌ ಹುಸೇನ್‌

ರಾಮನಗರ: ಮೇ.15ಕ್ಕೆ ಡಿ.ಕೆ.ಶಿವಕುಮಾರ್‌ ಮುಖ್ಯಮಂತ್ರಿ ಆಗುವುದು ಫಿಕ್ಸ್‌ ಎಂದು ಶಾಸಕ ಇಕ್ಬಾಲ್‌ ಹುಸೇನ್‌ ಹೇಳಿದ್ದಾರೆ. ಈ ಕುರಿತು ಮಾತನಾಡಿದ ಅವರು,…

7 hours ago

ಮಳವಳ್ಳಿ ಶಾಸಕ ಪಿ.ಎಂ.ನರೇಂದ್ರಸ್ವಾಮಿ ಅವರ ಸಹೋದರ ನಿಧನ: ಸಚಿವ ಚಲುವರಾಯಸ್ವಾಮಿ ಸಂತಾಪ

ಮಂಡ್ಯ: ಮಳವಳ್ಳಿ ಕ್ಷೇತ್ರದ ಶಾಸಕರಾದ ಪಿ.ಎಂ. ನರೇಂದ್ರಸ್ವಾಮಿ ಅವರ ಸಹೋದರ ಪಿ.ಎಂ. ಪರಶಿವಮೂರ್ತಿ ಅವರು ಹೃದಯಾಘಾತದಿಂದ ನಿಧನರಾಗಿದ್ದಾರೆ. ಪರಶಿವಮೂರ್ತಿ ಅವರ…

7 hours ago

ದಾವೂದ್‌ ಆಪ್ತ, ಡ್ರಗ್ಸ್‌ ಕಿಂಗ್‌ಪಿನ್‌ ಸಲೀಂ ಡೋಲಾ ಟರ್ಕಿಯಿಂದ ಭಾರತಕ್ಕೆ ಗಡಿಪಾರು

ನವದೆಹಲಿ: ಭಾರತದ ಮೋಸ್ಟ್ ವಾಂಟೆಡ್ ಭೂಗತಪಾತಕಿ ಹಾಗೂ ಮುಂಬೈ ಸರಣಿ ಬಾಂಬ್ ಸ್ಫೋಟದ ಪ್ರಮುಖ ರೂವಾರಿ ದಾವುದ್ ಇಬ್ರಾಹಿಂನ ಆಪ್ತ…

7 hours ago