ದೇಶ- ವಿದೇಶ

ವಕ್ಫ್‌ ತಿದ್ದುಪಡಿ ಮಸೂದೆ: ಲೋಕಸಭೆಯಲ್ಲಿ ಬಿಲ್‌ ಮಂಡಿಸಿದ ಕೇಂದ್ರ ಸರ್ಕಾರ

ನವದೆಹಲಿ: ಎನ್‌ಡಿಎ ನೇತೃತ್ವದ ಬಿಜೆಪಿ ಸರ್ಕಾರ ವಿರೋಧ ಪಕ್ಷಗಳ ವಿರೋಧದ ನಡುವೆಯೂ ಲೋಕಸಭೆಯಲ್ಲಿ ಇಂದು ವಕ್ಫ್‌ ತಿದ್ದುಪಡಿ ಮಸೂದೆಯನ್ನು ಕೇಂದ್ರ ಸರ್ಕಾರ ಮಂಡನೆ ಮಾಡಿದೆ.

ಲೋಕಸಭೆಯಲ್ಲಿ ಇಂದು(ಏಪ್ರಿಲ್‌.2) ಕೇಂದ್ರ ಸಂಸದೀಯ ವ್ಯವಹಾ ಮತ್ತು ಅಲ್ಪ ಸಂಖ್ಯಾತ ವ್ಯವಹಾರಗಳ ಸಚಿವ ಕಿರಣ್‌ ರಿಜಿಜು ಅವರು ವಕ್ಫ್‌ ತಿದ್ದುಪಡಿ ಬಿಲ್‌ ಅನ್ನು ಮಂಡಿಸಿದ್ದಾರೆ.

ಕಿರಣ್‌ ರಿಜಿಜು ಬಿಲ್‌ ಮಂಡಿಸುವಾಗ ಹೇಳಿದ್ದೇನು?

ಲೋಕಸಭೆ ಮತ್ತು ರಾಜ್ಯಸಭೆಗಳ ಜಂಟಿ ಸಮಿತಿಯಲ್ಲಿ ವಕ್ಫ್‌ ತಿದ್ದುಪಡಿ ಮಸೂದೆ ಬಗ್ಗೆ ನಡೆದ ಚರ್ಚೆಯನ್ನು ಈ ದೇಶದ ಸಂಸತ್ತಿನ ಇತಿಹಾಸದಲ್ಲಿ ಇಲ್ಲಿಯವರೆಗೆ ಮಾಡಲಾಗಿಲ್ಲ ಎಂದು ನಾನು ತಿಳಿಸಲು ಬಯಸುತ್ತೇನೆ. ಜಂಟಿ ಸಮಿತಿಯ ಎಲ್ಲ ಸದಸ್ಯರಿಗೆ ನಾನು ಧನ್ಯವಾದ ಮತ್ತು ಅಭಿನಂದಿಸುತ್ತೇನೆ. ಇಲ್ಲಿಯವರೆಗೆ, ವಿವಿಧ ಸಮುದಾಯಗಳ ರಾಜ್ಯ ಹೊಂದಿರುವ ಒಟ್ಟು 284 ನಿಯೋಗಗಳು ತಮ್ಮ ಅಭಿಪ್ರಾಯಗಳನ್ನು ಮತ್ತು ಸಲಹೆಗಳನ್ನು ಸಮಿತಿಯ ಮುಂದೆ ಮಂಡಿಸಿವೆ. 25 ರಾಜ್ಯ ಸರ್ಕಾರಗಳು ಹಾಗೂ ಕೇಂದ್ರ ಪ್ರಾಂತ್ಯಗಳು ವಕ್ಫ್‌ ಮಂಡಳಿಗಳು ಕೂಡ ತಮ್ಮ ಸಲ್ಲಿಕೆಗಳನ್ನು ಪ್ರಸ್ತುತಪಡಿಸಿವೆ ಎಂದು ಹೇಳಿದರು.

ಈ ಮಸೂದೆಯ ಬಗ್ಗೆ ಭರವಸೆ ಮಾತ್ರವಲ್ಲ, ಇದನ್ನು ವಿರೋಧಿಸುತ್ತಿರುವವರು ಕೂಡ ತಮ್ಮ ಹೃದಯದಲ್ಲಿ ಬದಲಾವಣೆಯನ್ನು ಹೊಂದುತ್ತಾರೆ ಎಂಬ ಖಾತ್ರಿ ನನಗೆ ಇದೆ. ಅಲ್ಲದೇ ಪ್ರತಿಯೊಬ್ಬರೂ ಈ ಮಸೂದೆಯನ್ನು ಸಕರಾತ್ಮಕ ಮನೋಭಾವದಿಂದ ಬೆಂಬಲಿಸುತ್ತಾರೆ ಎಂಬ ಆಶಯವಿದೆ ಎಂದರು.

ಅರ್ಚನ ಎಸ್‌ ಎಸ್

Recent Posts

ಇನ್ಸ್‌ಸ್ಟಾಗ್ರಾಂನಲ್ಲಿ ಬ್ಯಾಡ್‌ ಕಾಮೆಂಟ್‌ : ಸಾನ್ವಿ ಸುದೀಪ್‌ ಖಡಕ್‌ ತಿರುಗೇಟು

ಬೆಂಗಳೂರು : ನಟ ಕಿಚ್ಚ ಸುದೀಪ್‌ ಮಗಳು, ಗಾಯಕಿ ಸಾನ್ವಿ ಸುದೀಪ್‌ ಬಗ್ಗೆ ಕೆಲ ಕಿಡಿಗೇಡಿಗಳು ಸಾಮಾಜಿಕ ಜಾಲತಾಣಗಳಲ್ಲಿ ಕೆಟ್ಟ…

14 mins ago

ಬೆಂಗಳೂರಿನಲ್ಲಿ 55 ಕೋಟಿ ಮೌಲ್ಯದ ಡ್ರಗ್ಸ್ ವಶ: ಗೃಹ ಸಚಿವ ಪರಮೇಶ್ವರ್‌ ಹೇಳಿದ್ದಿಷ್ಟು.!

ಬೆಂಗಳೂರು: ಮಹಾರಾಷ್ಟ್ರದ ಎಎನ್‌ಟಿಎಫ್‌ ಅಧಿಕಾರಿಗಳು ಬೆಂಗಳೂರಿನಲ್ಲಿ ಮೂರು ಡ್ರಗ್ಸ್‌ ಫ್ಯಾಕ್ಟರಿಗಳ ಮೇಲೆ ದಾಳಿ ನಡೆಸಿ ಬರೋಬ್ಬರಿ 55 ಕೋಟಿ ಮೌಲ್ಯದ…

28 mins ago

ಹುಣಸೂರು | ಹಾಡಹಗಲೇ 5 ಕೋಟಿ ಚಿನ್ನಾಭರಣ ದರೋಡೆ! ಬೈಕ್‌ನಲ್ಲಿ ಪರಾರಿ

ಹುಣಸೂರು : ಹುಣಸೂರು ನಗರದಲ್ಲಿ ಹಾಡಹಗಲೇ ದೊಡ್ಡ ದರೋಡೆ ನಡೆದಿದ್ದು, ಸುಮಾರು 4 ರಿಂದ 5 ಕೋಟಿ ರೂಪಾಯಿ ಮೌಲ್ಯದ…

1 hour ago

ವರ್ಷದ ಕೊನೆಯ ಮನ್‌ ಕಿ ಬಾತ್‌ನಲ್ಲಿ 2025ರ ಭಾರತದ ಸಾಧನೆ ಸ್ಮರಿಸಿದ ಪ್ರಧಾನಿ ನರೇಂದ್ರ ಮೋದಿ

ನವದೆಹಲಿ: ಪ್ರಧಾನಿ ಮೋದಿ ಅವರು ಇಂದು ತಮ್ಮ 129ನೇ ಮನ್‌ ಕಿ ಬಾತ್‌ ಆವೃತ್ತಿಯನ್ನು ಉದ್ದೇಶಿಸಿ ಮಾತನಾಡಿದರು. 2025ರಲ್ಲಿ ಭಾರತದ…

2 hours ago

ಜಲಾಂತರಗಾಮಿ ನೌಕೆಯಲ್ಲಿ ಪ್ರಯಾಣಿಸಿ ಹೊಸ ದಾಖಲೆ ಬರೆದ ರಾಷ್ಟ್ರಪತಿ ದ್ರೌಪದಿ ಮುರ್ಮು

ಕಾರವಾರ: ದೇಶದ ಪ್ರಥಮ ಪ್ರಜೆಯಾಗಿರುವ ಸೇನಾ ಪಡೆಗಳ ಮಹಾದಂಡ ನಾಯಕಿ ರಾಷ್ಟ್ರಪತಿ ದ್ರೌಪದ ಮುರ್ಮು ಅವರು ಇಂದು ಜಲಾಂತರಗಾಮಿ ನೌಕೆಯಲ್ಲಿ…

2 hours ago

800 ಕಿ.ಮೀ ಪಾದಯಾತ್ರೆ ಮೂಲಕ ಅಯ್ಯಪ್ಪನ ದರ್ಶನ ಪಡೆಯುವುದಕ್ಕೆ ಹೊರಟ ಭಕ್ತರು

ಮೈಸೂರು: ಅಯ್ಯಪ್ಪ ಸ್ವಾಮಿ ದೇವಸ್ಥಾನ ಪಕ್ಕದ ಕೇರಳ ರಾಜ್ಯದಲ್ಲಿ ಇದ್ದರೂ ಅಯ್ಯಪ್ಪನಿಗೆ ಹೆಚ್ಚಿನ ಭಕ್ತರು ಇರುವುದು ನಮ್ಮ ಕರ್ನಾಟಕದಲ್ಲಿಯೇ ಪ್ರತಿ…

2 hours ago