ದೇಶ- ವಿದೇಶ

ವಕ್ಫ್‌ ತಿದ್ದುಪಡಿ ಮಸೂದೆ: ಲೋಕಸಭೆಯಲ್ಲಿ ಬಿಲ್‌ ಮಂಡಿಸಿದ ಕೇಂದ್ರ ಸರ್ಕಾರ

ನವದೆಹಲಿ: ಎನ್‌ಡಿಎ ನೇತೃತ್ವದ ಬಿಜೆಪಿ ಸರ್ಕಾರ ವಿರೋಧ ಪಕ್ಷಗಳ ವಿರೋಧದ ನಡುವೆಯೂ ಲೋಕಸಭೆಯಲ್ಲಿ ಇಂದು ವಕ್ಫ್‌ ತಿದ್ದುಪಡಿ ಮಸೂದೆಯನ್ನು ಕೇಂದ್ರ ಸರ್ಕಾರ ಮಂಡನೆ ಮಾಡಿದೆ.

ಲೋಕಸಭೆಯಲ್ಲಿ ಇಂದು(ಏಪ್ರಿಲ್‌.2) ಕೇಂದ್ರ ಸಂಸದೀಯ ವ್ಯವಹಾ ಮತ್ತು ಅಲ್ಪ ಸಂಖ್ಯಾತ ವ್ಯವಹಾರಗಳ ಸಚಿವ ಕಿರಣ್‌ ರಿಜಿಜು ಅವರು ವಕ್ಫ್‌ ತಿದ್ದುಪಡಿ ಬಿಲ್‌ ಅನ್ನು ಮಂಡಿಸಿದ್ದಾರೆ.

ಕಿರಣ್‌ ರಿಜಿಜು ಬಿಲ್‌ ಮಂಡಿಸುವಾಗ ಹೇಳಿದ್ದೇನು?

ಲೋಕಸಭೆ ಮತ್ತು ರಾಜ್ಯಸಭೆಗಳ ಜಂಟಿ ಸಮಿತಿಯಲ್ಲಿ ವಕ್ಫ್‌ ತಿದ್ದುಪಡಿ ಮಸೂದೆ ಬಗ್ಗೆ ನಡೆದ ಚರ್ಚೆಯನ್ನು ಈ ದೇಶದ ಸಂಸತ್ತಿನ ಇತಿಹಾಸದಲ್ಲಿ ಇಲ್ಲಿಯವರೆಗೆ ಮಾಡಲಾಗಿಲ್ಲ ಎಂದು ನಾನು ತಿಳಿಸಲು ಬಯಸುತ್ತೇನೆ. ಜಂಟಿ ಸಮಿತಿಯ ಎಲ್ಲ ಸದಸ್ಯರಿಗೆ ನಾನು ಧನ್ಯವಾದ ಮತ್ತು ಅಭಿನಂದಿಸುತ್ತೇನೆ. ಇಲ್ಲಿಯವರೆಗೆ, ವಿವಿಧ ಸಮುದಾಯಗಳ ರಾಜ್ಯ ಹೊಂದಿರುವ ಒಟ್ಟು 284 ನಿಯೋಗಗಳು ತಮ್ಮ ಅಭಿಪ್ರಾಯಗಳನ್ನು ಮತ್ತು ಸಲಹೆಗಳನ್ನು ಸಮಿತಿಯ ಮುಂದೆ ಮಂಡಿಸಿವೆ. 25 ರಾಜ್ಯ ಸರ್ಕಾರಗಳು ಹಾಗೂ ಕೇಂದ್ರ ಪ್ರಾಂತ್ಯಗಳು ವಕ್ಫ್‌ ಮಂಡಳಿಗಳು ಕೂಡ ತಮ್ಮ ಸಲ್ಲಿಕೆಗಳನ್ನು ಪ್ರಸ್ತುತಪಡಿಸಿವೆ ಎಂದು ಹೇಳಿದರು.

ಈ ಮಸೂದೆಯ ಬಗ್ಗೆ ಭರವಸೆ ಮಾತ್ರವಲ್ಲ, ಇದನ್ನು ವಿರೋಧಿಸುತ್ತಿರುವವರು ಕೂಡ ತಮ್ಮ ಹೃದಯದಲ್ಲಿ ಬದಲಾವಣೆಯನ್ನು ಹೊಂದುತ್ತಾರೆ ಎಂಬ ಖಾತ್ರಿ ನನಗೆ ಇದೆ. ಅಲ್ಲದೇ ಪ್ರತಿಯೊಬ್ಬರೂ ಈ ಮಸೂದೆಯನ್ನು ಸಕರಾತ್ಮಕ ಮನೋಭಾವದಿಂದ ಬೆಂಬಲಿಸುತ್ತಾರೆ ಎಂಬ ಆಶಯವಿದೆ ಎಂದರು.

ಅರ್ಚನ ಎಸ್‌ ಎಸ್

Recent Posts

ಎಸ್‌ಸಿ, ಎಸ್‌ಟಿಗಳ ಹಕ್ಕು ರಕ್ಷಣೆಗೆ ಕ್ರಮ : ಡಾ.ಮೂರ್ತಿ

ಮೈಸೂರು : ಆದಿವಾಸಿ ಸಮುದಾಯಗಳ ಮೇಲಿನ ದೌರ್ಜನ್ಯ, ಸಾಮಾಜಿಕ ಬಹಿಷ್ಕಾರ ಹಾಗೂ ಮೈಸೂರು ಭಾಗದಲ್ಲಿ ದಾಖಲಾಗಿರುವ 134 ಪೋಕ್ಸೊ ಪ್ರಕರಣಗಳು…

6 hours ago

ಬೆಂಕಿ ಅವಘಡ | ಅಬಕಾರಿ ಡಿಸಿ ಅಮಾನತಿಗೆ ಶಿಫಾರಸ್ಸು ಮಾಡಲು ಸೂಚನೆ ಕೊಟ್ಟ ಯತೀಂದ್ರ ಸಿದ್ದರಾಮಯ್ಯ!

ಮೈಸೂರು : ಸೋಮವಾರ ಪಬ್‌ನಲ್ಲಿ ಸಂಭವಿಸಿದ್ದ ಬೆಂಕಿ ಅವಘಡದಲ್ಲಿ ಇಬ್ಬರು ಮೃತಪಟ್ಟಿದ್ದಾರೆ. ಈ ಹಿನ್ನೆಲೆಯಲ್ಲಿ ಕರ್ತವ್ಯ ಲೋಪದ ಕಾರಣಕ್ಕಾಗಿ ಅಬಕಾರಿ…

7 hours ago

ರೈತರಿಗೆ ಬಿಗ್‌ ಗಿಫ್ಟ್‌ ಕೊಟ್ಟ ತಮಿಳುನಾಡು ಸಿಎಂ ವಿಜಯ್‌

ಚೆನ್ನೈ: ತಮಿಳುನಾಡಿನ ರೈತರಿಗೆ ಸಿಎಂ ವಿಜಯ್‌ ಬಂಪರ್‌ ಕೊಡುಗೆ ನೀಡಿದ್ದಾರೆ. ವಿವಿಧ ಸಹಕಾರಿ ಬ್ಯಾಂಕುಗಳಲ್ಲಿ ರೈತರು ಪಡೆದಿರುವ 75,000 ರೂ…

11 hours ago

ಮುಂಗಾರು ಕೊರತೆ: ಹಾರಂಗಿ ಜಲಾಶಯದ ಒಳಹರಿವು ತೀವ್ರ ಕುಸಿತ

ಮಡಿಕೇರಿ: ಮುಂಗಾರು ಮಳೆ ಕೊರತೆಯಿಂದ ಹಾರಂಗಿ ಜಲಾಶಯಕ್ಕೆ ಒಳಹರಿವು ತೀವ್ರವಾಗಿ ಕುಸಿದಿದ್ದು, ರೈತರಲ್ಲಿ ಆತಂಕ ಹೆಚ್ಚಾಗಿದೆ. ಮಳೆಗಾಲವಾದರೂ ಜಿಲ್ಲೆಯಲ್ಲಿ ಮಳೆ…

13 hours ago

ಮೆಡಿಕಲ್‌ನಲ್ಲಿ ಇನ್ಮುಂದೆ ಸಾರ್ವಜನಿಕರು ನೇರವಾಗಿ ಸಿರಪ್‌ ಖರೀದಿ ಮಾಡುವಂತಿಲ್ಲ: ಕೇಂದ್ರ ಸರ್ಕಾರ ಆದೇಶ

ನವದೆಹಲಿ: ಮೆಡಿಕಲ್‌ ಶಾಪ್‌ಗಳಲ್ಲಿ ಇನ್ಮು ಮುಂದೆ ಸಾರ್ವಜನಿಕರು ನೇರವಾಗಿ ಸಿರಪ್‌ ಖರೀದಿ ಮಾಡುವಂತಿಲ್ಲ ಎಂದು ಕೇಂದ್ರ ಆರೋಗ್ಯ ಇಲಾಖೆ ಆದೇಶ…

14 hours ago

ನಟ ವಿಜಯ್‌ ರಾಘವೇಂದ್ರ, ಶ್ರೀಮುರಳಿಗೆ ಮಾತೃ ವಿಯೋಗ

ಬೆಂಗಳೂರು: ಕನ್ನಡ ಚಿತ್ರರಂಗದ ಪ್ರಸಿದ್ಧ ನಿರ್ಮಾಪಕರಾದ ಎಸ್.ಎ.ಚಿನ್ನೇಗೌಡ ಅವರ ಪತ್ನಿ ಹಾಗೂ ನಟರಾದ ವಿಜಯ್‌ ರಾಘವೇಂದ್ರ, ಶ್ರೀಮುರಳಿ ಅವರ ತಾಯಿ…

15 hours ago