ನವದೆಹಲಿ: ಎನ್ಡಿಎ ನೇತೃತ್ವದ ಬಿಜೆಪಿ ಸರ್ಕಾರ ವಿರೋಧ ಪಕ್ಷಗಳ ವಿರೋಧದ ನಡುವೆಯೂ ಲೋಕಸಭೆಯಲ್ಲಿ ಇಂದು ವಕ್ಫ್ ತಿದ್ದುಪಡಿ ಮಸೂದೆಯನ್ನು ಕೇಂದ್ರ ಸರ್ಕಾರ ಮಂಡನೆ ಮಾಡಿದೆ.
ಲೋಕಸಭೆಯಲ್ಲಿ ಇಂದು(ಏಪ್ರಿಲ್.2) ಕೇಂದ್ರ ಸಂಸದೀಯ ವ್ಯವಹಾ ಮತ್ತು ಅಲ್ಪ ಸಂಖ್ಯಾತ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಅವರು ವಕ್ಫ್ ತಿದ್ದುಪಡಿ ಬಿಲ್ ಅನ್ನು ಮಂಡಿಸಿದ್ದಾರೆ.
ಕಿರಣ್ ರಿಜಿಜು ಬಿಲ್ ಮಂಡಿಸುವಾಗ ಹೇಳಿದ್ದೇನು?
ಲೋಕಸಭೆ ಮತ್ತು ರಾಜ್ಯಸಭೆಗಳ ಜಂಟಿ ಸಮಿತಿಯಲ್ಲಿ ವಕ್ಫ್ ತಿದ್ದುಪಡಿ ಮಸೂದೆ ಬಗ್ಗೆ ನಡೆದ ಚರ್ಚೆಯನ್ನು ಈ ದೇಶದ ಸಂಸತ್ತಿನ ಇತಿಹಾಸದಲ್ಲಿ ಇಲ್ಲಿಯವರೆಗೆ ಮಾಡಲಾಗಿಲ್ಲ ಎಂದು ನಾನು ತಿಳಿಸಲು ಬಯಸುತ್ತೇನೆ. ಜಂಟಿ ಸಮಿತಿಯ ಎಲ್ಲ ಸದಸ್ಯರಿಗೆ ನಾನು ಧನ್ಯವಾದ ಮತ್ತು ಅಭಿನಂದಿಸುತ್ತೇನೆ. ಇಲ್ಲಿಯವರೆಗೆ, ವಿವಿಧ ಸಮುದಾಯಗಳ ರಾಜ್ಯ ಹೊಂದಿರುವ ಒಟ್ಟು 284 ನಿಯೋಗಗಳು ತಮ್ಮ ಅಭಿಪ್ರಾಯಗಳನ್ನು ಮತ್ತು ಸಲಹೆಗಳನ್ನು ಸಮಿತಿಯ ಮುಂದೆ ಮಂಡಿಸಿವೆ. 25 ರಾಜ್ಯ ಸರ್ಕಾರಗಳು ಹಾಗೂ ಕೇಂದ್ರ ಪ್ರಾಂತ್ಯಗಳು ವಕ್ಫ್ ಮಂಡಳಿಗಳು ಕೂಡ ತಮ್ಮ ಸಲ್ಲಿಕೆಗಳನ್ನು ಪ್ರಸ್ತುತಪಡಿಸಿವೆ ಎಂದು ಹೇಳಿದರು.
ಈ ಮಸೂದೆಯ ಬಗ್ಗೆ ಭರವಸೆ ಮಾತ್ರವಲ್ಲ, ಇದನ್ನು ವಿರೋಧಿಸುತ್ತಿರುವವರು ಕೂಡ ತಮ್ಮ ಹೃದಯದಲ್ಲಿ ಬದಲಾವಣೆಯನ್ನು ಹೊಂದುತ್ತಾರೆ ಎಂಬ ಖಾತ್ರಿ ನನಗೆ ಇದೆ. ಅಲ್ಲದೇ ಪ್ರತಿಯೊಬ್ಬರೂ ಈ ಮಸೂದೆಯನ್ನು ಸಕರಾತ್ಮಕ ಮನೋಭಾವದಿಂದ ಬೆಂಬಲಿಸುತ್ತಾರೆ ಎಂಬ ಆಶಯವಿದೆ ಎಂದರು.
ಇಂದಿನ ಧಾವಂತದ ಬದುಕಿನಲ್ಲಿ ನಾವೆಲ್ಲರೂ ಆಸೆಗಳ ಬೆನ್ನೇರಿ ಓಡುತ್ತಿದ್ದು, ನಮ್ಮ ಉಸಿರಿಗೆ ಆಧಾರವಾಗಿರುವ ಪ್ರಕೃತಿಯನ್ನು ಮರೆಯುತ್ತಿದ್ದೇವೆ. ಗಾಳಿ, ನೀರು, ಬೆಳಕಿಲ್ಲದೆ…
ಆರ್ಬಿಐ ಮುಂದಿನ ಹಣಕಾಸು ವರ್ಷದಿಂದ (೨೦೨೭-೨೮) ಪ್ಲಾಸ್ಟಿಕ್ (ಪಾಲಿಮರ್) ನೋಟುಗಳನ್ನು ಚಲಾವಣೆಗೆ ತರಲು ನಿರ್ಧರಿಸಿರುವುದು ಸ್ವಾಗತಾರ್ಹ ಮತ್ತು ದೂರದೃಷ್ಟಿಯ ಹೆಜ್ಜೆಯಾಗಿದೆ.…
ರಾಜ್ಯ ಸಚಿವ ಸಂಪುಟದಲ್ಲಿ ಮಹಿಳೆಯರಿಗೆ ಪ್ರಾತಿನಿಧ್ಯ ನೀಡದಿರುವುದು ಮಹಿಳೆಯರಿಗೆ ಮಾಡಿದ ಘೋರ ಅನ್ಯಾಯ. ಅಧಿಕಾರಕ್ಕೆ ಬರುವ ಮುನ್ನ ಮಹಿಳೆಯರ ಹೆಸರಿನಲ್ಲಿ…
ವೈಡ್ ಆಂಗಲ್: ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ ಇಂದು ಬಿಡುಗಡೆಯಾಗುತ್ತಿರುವ ‘ ಬಾಸ್’ಎಂದೋ ತೆರೆಗೆ ಬರಬೇಕಾಗಿತ್ತು. ಆದರೆ ಚಿತ್ರದ ಹೆಸರು,…
ನವೀನ್ ಡಿಸೋಜ ಕಳೆದ ಕೆಲ ದಿನಗಳಲ್ಲಿ ಉತ್ತಮ ಮಳೆ; ವಾಡಿಕೆ ಮಳೆ ಕೊರತೆ ವಿರಾಜಪೇಟೆ ತಾಲ್ಲೂಕಿನಲ್ಲಿ ಅತಿ ಹೆಚ್ಚು ಶೇ.೪೩…
ಮಂಜು ಕೋಟೆ ಎಚ್.ಡಿ.ಕೋಟೆ: ತಾಲ್ಲೂಕಿನ ಕಬಿನಿ ಜಲಾಶಯಕ್ಕೆ ಬರುತ್ತಿದ್ದ ಒಳಹರಿವ ಇಳಿಮುಖವಾಗಿರುವ ಹಿನ್ನೆಲೆಯಲ್ಲಿ ಹೊರಹರಿವು ಸ್ಥಗಿತಗೊಳಿಸಿ ಜಲಾಶಯದ ಕ್ರಸ್ಟ್ಗೇಟ್ಗಳನ್ನು ಬಂದ್…