ಚೆನ್ನೈ: ನೆರೆಯ ರಾಜ್ಯ ತಮಿಳುನಾಡಿನಲ್ಲಿ ಕನ್ನಡ ಬಾವುಟ ಹಾಕಿದ್ದ ವಾಹನಗಳನ್ನು ತಡೆದು ತಮಿಳು ಪುಂಡರು ಕನ್ನಡಿಗರ ಮೇಲೆ ದರ್ಪ ಮೆರೆದಿರುವ ಘಟನೆ ನಡೆದಿದೆ.
ಕರ್ನಾಟಕದಿಂದ ತೆರಳಿರುವ ಹಲವಾರು ವಾಹನಗಳನ್ನು ತಮಿಳುನಾಡಿನ ತೂತುಕುಡಿ ಬಳಿ ತಡೆದಿದ್ದು, ಕನ್ನಡ ಬಾವುಟವನ್ನು ತೆಗೆದು ಹಾಕುವಂತೆ ತಾಕೀತು ಮಾಡಿದ್ದಾರೆ.
ಇದು ತಮಿಳುನಾಡು. ತಮಿಳುನಾಡಿನಲ್ಲಿ ಕನ್ನಡ ಬಾವುಟ ಹಾಕುವಂತಿಲ್ಲ ಎಂದು ಗಲಾಟೆ ಮಾಡಿದ್ದಾರೆ. ಕನ್ನಡಿಗರ ವಾಹನವನ್ನು ತಡೆದು ತಮಿಳು ಯುವಕರು ಗಲಾಟೆ ಮಾಡುತ್ತಿರುವ ಬಗ್ಗೆ ಕನ್ನಡಿಗರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ತಕ್ಷಣ ತಮಿಳು ಪುಂಡರ ವಿರುದ್ಧ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದ್ದಾರೆ.
ಚಾಮರಾಜನಗರದ ಹರದನಹಳ್ಳಿಯ ಮಣಿ ನಾಯ್ಕ ಹಾಗೂ ಸ್ನೇಹಿತರು ಟಿಟಿ ವಾಹನದಲ್ಲಿ ಕನ್ನಡ ಧ್ವಜ ಅಳವಡಿಸಿಕೊಂಡು ಯಾತ್ರೆಗೆ ತೆರಳುತ್ತಿದ್ದಾಗ, ತಮಿಳುನಾಡಿನ ತೂತುಕುಡಿ ಸಮೀಪ ವಾಹನವನ್ನು ಅಡ್ಡಹಾಕಿ ಕೆಲ ತಮಿಳು ಯುವಕರು ಗಲಾಟೆ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ.





