ಚೆನ್ನೈ: ನೆರೆಯ ರಾಜ್ಯ ತಮಿಳುನಾಡಿನಲ್ಲಿ ಕನ್ನಡ ಬಾವುಟ ಹಾಕಿದ್ದ ವಾಹನಗಳನ್ನು ತಡೆದು ತಮಿಳು ಪುಂಡರು ಕನ್ನಡಿಗರ ಮೇಲೆ ದರ್ಪ ಮೆರೆದಿರುವ ಘಟನೆ ನಡೆದಿದೆ.
ಕರ್ನಾಟಕದಿಂದ ತೆರಳಿರುವ ಹಲವಾರು ವಾಹನಗಳನ್ನು ತಮಿಳುನಾಡಿನ ತೂತುಕುಡಿ ಬಳಿ ತಡೆದಿದ್ದು, ಕನ್ನಡ ಬಾವುಟವನ್ನು ತೆಗೆದು ಹಾಕುವಂತೆ ತಾಕೀತು ಮಾಡಿದ್ದಾರೆ.
ಇದು ತಮಿಳುನಾಡು. ತಮಿಳುನಾಡಿನಲ್ಲಿ ಕನ್ನಡ ಬಾವುಟ ಹಾಕುವಂತಿಲ್ಲ ಎಂದು ಗಲಾಟೆ ಮಾಡಿದ್ದಾರೆ. ಕನ್ನಡಿಗರ ವಾಹನವನ್ನು ತಡೆದು ತಮಿಳು ಯುವಕರು ಗಲಾಟೆ ಮಾಡುತ್ತಿರುವ ಬಗ್ಗೆ ಕನ್ನಡಿಗರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ತಕ್ಷಣ ತಮಿಳು ಪುಂಡರ ವಿರುದ್ಧ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದ್ದಾರೆ.
ಚಾಮರಾಜನಗರದ ಹರದನಹಳ್ಳಿಯ ಮಣಿ ನಾಯ್ಕ ಹಾಗೂ ಸ್ನೇಹಿತರು ಟಿಟಿ ವಾಹನದಲ್ಲಿ ಕನ್ನಡ ಧ್ವಜ ಅಳವಡಿಸಿಕೊಂಡು ಯಾತ್ರೆಗೆ ತೆರಳುತ್ತಿದ್ದಾಗ, ತಮಿಳುನಾಡಿನ ತೂತುಕುಡಿ ಸಮೀಪ ವಾಹನವನ್ನು ಅಡ್ಡಹಾಕಿ ಕೆಲ ತಮಿಳು ಯುವಕರು ಗಲಾಟೆ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ.
ಬೆಂಗಳೂರು : ರಾಜ್ಯದ ಬರ ಪರಿಸ್ಥಿತಿಯ ಸಮಗ್ರ ಅವಲೋಕನ ನಡೆಯುತ್ತಿದೆ. 102 ತಾಲ್ಲೂಕುಗಳ ಗ್ರೌಂಡ್ ಟ್ರೂಥಿಂಗ್ ವರದಿ ಬಂದಿದ್ದು, ಮುಂದಿನ…
ಮೈಸೂರು : 80ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ಮಹಾನಗರ ಪಾಲಿಕೆಯ ವತಿಯಿಂದ 80 ಜಿವಿಪಿ ನಿರ್ಮೂಲನೆ ಅಭಿಯಾನದಲ್ಲಿ ಮಂಗಳವಾರ ವಲಯ-3ರ ವ್ಯಾಪ್ತಿಗೆ…
ಕಠ್ಮಂಡು : ಟಿಬೆಟ್ ಗಡಿಗೆ ಹೊಂದಿಕೊಂಡಿರುವ ನೇಪಾಳದ ಉತ್ತರದ ರಸುವಾ ಜಿಲ್ಲೆಯಲ್ಲಿ ಬುಧವಾರ ಸಂಭವಿಸಿದ ಭೀಕರ ಹಠಾತ್ ಪ್ರವಾಹಕ್ಕೆ ಕನಿಷ್ಠ…
ಕಠ್ಮಂಡು : ನೆರೆಯ ರಾಷ್ಟ್ರ ನೇಪಾಳದಲ್ಲಿ ಹಿಮಕುಸಿತದ ಪರಿಣಾಮ ಉಂಟಾದ ಭೀಕರ ಆಕಸ್ಮಿಕ ಪ್ರವಾಹ ಜಲಪ್ರಳಯವನ್ನೇ ಸೃಷ್ಟಿಸಿದೆ. ಕೋಶಿ ನದಿಯ…
ಬೆಂಗಳೂರು: ರಾಜೀನಾಮೆಗೆ ಸಂಬಂಧಿಸಿದ ಯಾವುದೇ ಚರ್ಚೆ ನಡೆದಿಲ್ಲ. ನನ್ನ ರಾಜೀನಾಮೆ ಬಗ್ಗೆ ಕೇಳಿಬರುತ್ತಿರುವ ವರದಿಗಳು ಸಂಪೂರ್ಣವಾಗಿ ಸತ್ಯಕ್ಕೆ ದೂರವಾಗಿವೆ ಎಂದು ಸಚಿವ…
ಹುಣಸೂರು: ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವ 2026ರ ದಸರಾ ಗಜಪಯಣಕ್ಕೆ ಇಂದು ಅದ್ಧೂರಿ ಚಾಲನೆ ದೊರೆತಿದೆ. ಮೈಸೂರು ಜಿಲ್ಲಾ…