ಮೈಸೂರು: ಕೇರಳದ ವಯನಾಡು ಜಿಲ್ಲೆಯ ಮೆಪ್ಪಾಡಿ ಪ್ರದೇಶದಲ್ಲಿ ಸಂಭವಿಸಿರುವ ಘನಘೋರ ಭೂ ಕುಸಿತದಲ್ಲಿ ಅನೇಕರು ನಾಪತ್ತೆಯಾಗಿದ್ದು, ಮೃತಪಟ್ಟವರ ಸಂಖ್ಯೆ ಹೆಚ್ಚುತ್ತಲೇ ಇದೆ.
ಎನ್ಡಿಆರ್ಎಫ್, ಸ್ವಯಂ ಸೇವಕರು, ಪೊಲೀಸರು ಹಾಗೂ ಸೈನ್ಯದಿಂದ ರಕ್ಷಣಾ ಕಾರ್ಯಚರಣೆ ನಿರಂತರವಾಗಿ ಸಾಗುತ್ತಿದೆ. ಇತ್ತ ಸಿಎಂ ಸಿದ್ದರಾಮಯ್ಯ ಅವರು ಕೇರಳದ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರಿಗೆ ಕರೆ ಮಾಡಿ, ಅಗತ್ಯ ನೆರವು ಘೋಷಿಸಿ, ನಿಮ್ಮೊಂದಿಗೆ ನಾವೇದ್ದೇವೆ ಎಂದು ಭರವಸೆ ನೀಡಿದ್ದಾರೆ.
ಈ ಘನಘೋರ ದುರಂತದ ಬಗ್ಗೆ ಆಘಾತ ವ್ಯಕ್ತಪಡಿಸಿದ ಸಿಎಂ ಸಿದ್ದರಾಮಯ್ಯ, ರಕ್ಷಣಾ ಕಾರ್ಯಚರಣೆಯಲ್ಲಿ ನಮ್ಮ ಸರ್ಕಾರ ನಿಮ್ಮೊಂದಿಗೆ ಇರಲಿದೆ. ಅಗತ್ಯ ಸಾಮಾಗ್ರಿ ಹಾಗೂ ರಕ್ಷಣಾ ತಂಡಗಳನ್ನು ಕಳುಹಿಸಲಾಗುತ್ತಿದೆ ಎಂದು ಕೇರಳ ಸಿಎಂಗೆ ದೂರವಾಣಿ ಕರೆ ಮಾಡಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ನೆರವಿಗೆ ಹಿರಿಯ ಐಎಎಸ್ ಅಧಿಕಾರಿಗಳ ನಿಯೋಜನೆ
ಕೇರಳದ ವಯನಾಡಿನಲ್ಲಿ ಸಂಭವಿಸಿದ ಭೂಕುಸಿತದಿಂದ ಸಂಕಷ್ಟದಲ್ಲಿರುವ ಜನರ ನೆರವಿಗಾಗಿ ಇಬ್ಬರು ಹಿರಿಯ ಐಎಎಸ್ ಅಧಿಕಾರಿಗಳನ್ನು ನಿಯೋಜಿಸಲಾಗಿದೆ. ಹಾಗೆಯೇ ಗಡಿಜಿಲ್ಲೆ ಚಾಮರಾಜ ನಗರದ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಸಹಾಯವಾಣಿ ತೆರೆಯಲಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಟ್ವಿಟ್ ನಲ್ಲಿ ತಿಳಿಸಿದ್ದಾರೆ.
ಐಎಎಸ್ ಅಧಿಕಾರಿಗಳ ಮೊಬೈಲ್ ಸಂಖ್ಯೆ:
ಸಿ.ಜಾಫರ್-9448355577
ದಿಲೀಶ್ ಶಶಿ-9556000514
ಚಾಮರಾಜನಗರ ಜಿಲ್ಲಾಧಿಕಾರಿ ಕಚೇರಿ ಸಹಾಯವಾಣಿ ಸಂಖ್ಯೆ
08226-223163
08226-223161
08226-223160
ನ್ಯೂಯಾರ್ಕ್: ಅಮೆರಿಕದ ಕ್ಯಾಲಿಫೋರ್ನಿಯಾದ ಬರ್ಕ್ಲಿಯಲ್ಲಿ ಕಾಣೆಯಾಗಿದ್ದ ಕರ್ನಾಟಕದ ವಿದ್ಯಾರ್ಥಿ ಸಾಕೇತ್ ಶ್ರೀನಿವಾಸಯ್ಯ (22) ಅವರ ಮೃತದೇಹ ಪತ್ತೆಯಾಗಿದೆ ಎಂದು ಸ್ಯಾನ್…
ಹೊಸದಿಲ್ಲಿ : ವಿವಾಹಪೂರ್ವ ದೈಹಿಕ ಸಂಬಂಧಗಳಲ್ಲಿ ಅತ್ಯಂತ ಜಾಗರೂಕತೆ ವಹಿಸಬೇಕು ಎಂದು ಸುಪ್ರೀಂ ಕೋರ್ಟ್ ಎಚ್ಚರಿಕೆ ನೀಡಿದೆ. ಮದುವೆಯ ಸುಳ್ಳು…
ಮೈಸೂರು : ಎಲಾನ್ ಮಸ್ಕ್ ಒಡೆತನದ ಸಾಮಾಜಿಕ ಜಾಲತಾಣ ಎಕ್ಸ್ (X, ಹಿಂದಿನ ಟ್ವಿಟರ್) ಇಂದು ಸಂಜೆ (ಫೆಬ್ರವರಿ 16)…
ಬೆಂಗಳೂರು : ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ರೈತರ ಮೇಲೆ ಪರಿಣಾಮ ಬೀರುವ ಭಾರತ-ಅಮೆರಿಕ ವ್ಯಾಪಾರ…
ಮಲ್ಕುಂಡಿ : ಕಾಡಾನೆಗಳ ದಾಳಿಯಿಂದ ಗುಡಿಸಲು ಹಾಗೂ ಸೋಲಾರ್ ತಂತಿ ಬೇಲಿ ನಾಶವಾಗಿರುವ ಘಟನೆ ನಂಜನಗೂಡು ತಾಲ್ಲೂಕಿನ ದೇವರಾಯಶೆಟ್ಟಿಪುರ ಗ್ರಾಮದಲ್ಲಿ…
ಮೈಸೂರು : ನಗರದಲ್ಲಿ ಅಪರಾಧ ನಿಯಂತ್ರಣ ಮತ್ತು ಪತ್ತೆ ಸಂಬಂಧ ರಾಜ್ಯ ಪೊಲೀಸ್ ಇಲಾಖೆಯ ಅಪರಾಧ ಮತ್ತು ತಾಂತ್ರಿಕ ಸೇವೆ…