ದೇಶ- ವಿದೇಶ

ವಯನಾಡು ಭೂ ಕುಸಿತ: ಕೇರಳ ನೆರವಿಗೆ ಸಿಎಂ ಸಿದ್ದರಾಮಯ್ಯ ಅಭಯ ಅಸ್ತ

ಮೈಸೂರು: ಕೇರಳದ ವಯನಾಡು ಜಿಲ್ಲೆಯ ಮೆಪ್ಪಾಡಿ ಪ್ರದೇಶದಲ್ಲಿ ಸಂಭವಿಸಿರುವ ಘನಘೋರ ಭೂ ಕುಸಿತದಲ್ಲಿ ಅನೇಕರು ನಾಪತ್ತೆಯಾಗಿದ್ದು, ಮೃತಪಟ್ಟವರ ಸಂಖ್ಯೆ ಹೆಚ್ಚುತ್ತಲೇ ಇದೆ.

ಎನ್‌ಡಿಆರ್‌ಎಫ್, ಸ್ವಯಂ ಸೇವಕರು, ಪೊಲೀಸರು ಹಾಗೂ ಸೈನ್ಯದಿಂದ ರಕ್ಷಣಾ ಕಾರ್ಯಚರಣೆ ನಿರಂತರವಾಗಿ ಸಾಗುತ್ತಿದೆ. ಇತ್ತ ಸಿಎಂ ಸಿದ್ದರಾಮಯ್ಯ ಅವರು ಕೇರಳದ ಮುಖ್ಯಮಂತ್ರಿ ಪಿಣರಾಯಿ ವಿಜಯನ್‌ ಅವರಿಗೆ ಕರೆ ಮಾಡಿ, ಅಗತ್ಯ ನೆರವು ಘೋಷಿಸಿ, ನಿಮ್ಮೊಂದಿಗೆ ನಾವೇದ್ದೇವೆ ಎಂದು ಭರವಸೆ ನೀಡಿದ್ದಾರೆ.

ಈ ಘನಘೋರ ದುರಂತದ ಬಗ್ಗೆ ಆಘಾತ ವ್ಯಕ್ತಪಡಿಸಿದ ಸಿಎಂ ಸಿದ್ದರಾಮಯ್ಯ, ರಕ್ಷಣಾ ಕಾರ್ಯಚರಣೆಯಲ್ಲಿ ನಮ್ಮ ಸರ್ಕಾರ ನಿಮ್ಮೊಂದಿಗೆ ಇರಲಿದೆ. ಅಗತ್ಯ ಸಾಮಾಗ್ರಿ ಹಾಗೂ ರಕ್ಷಣಾ ತಂಡಗಳನ್ನು ಕಳುಹಿಸಲಾಗುತ್ತಿದೆ ಎಂದು ಕೇರಳ ಸಿಎಂಗೆ ದೂರವಾಣಿ ಕರೆ ಮಾಡಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ನೆರವಿಗೆ ಹಿರಿಯ ಐಎಎಸ್‌ ಅಧಿಕಾರಿಗಳ ನಿಯೋಜನೆ
ಕೇರಳದ ವಯನಾಡಿನಲ್ಲಿ ಸಂಭವಿಸಿದ ಭೂಕುಸಿತದಿಂದ ಸಂಕಷ್ಟದಲ್ಲಿರುವ ಜನರ ನೆರವಿಗಾಗಿ ಇಬ್ಬರು ಹಿರಿಯ ಐಎಎಸ್ ಅಧಿಕಾರಿಗಳನ್ನು ನಿಯೋಜಿಸಲಾಗಿದೆ. ಹಾಗೆಯೇ ಗಡಿಜಿಲ್ಲೆ ಚಾಮರಾಜ ನಗರದ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಸಹಾಯವಾಣಿ ತೆರೆಯಲಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಟ್ವಿಟ್‌ ನಲ್ಲಿ ತಿಳಿಸಿದ್ದಾರೆ.

ಐಎಎಸ್‌ ಅಧಿಕಾರಿಗಳ ಮೊಬೈಲ್‌ ಸಂಖ್ಯೆ:
ಸಿ.ಜಾಫರ್-‌9448355577
ದಿಲೀಶ್‌ ಶಶಿ-9556000514

ಚಾಮರಾಜನಗರ ಜಿಲ್ಲಾಧಿಕಾರಿ ಕಚೇರಿ ಸಹಾಯವಾಣಿ ಸಂಖ್ಯೆ
08226-223163
08226-223161
08226-223160

 

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಓದುಗರ ಪತ್ರ: ಅನುಮಾನ ಬಗೆಹರಿಸಿ

ರಾಜ್ಯದ ಬಹಳಷ್ಟು ಜನರು ಆನ್‌ಲೈನ್ -ಆಫ್ಲೈನ್ ಮೂಲಕ ನೋಂದಣಿ ಮಾಡಿಸುವ ಮೂಲಕ ಎಸ್‌ಐಆರ್ ಪ್ರಕ್ರಿಯೆಯಲ್ಲಿ ಪಾಲ್ಗೊಂಡಿದ್ದಾರೆ. ಆದರೆ ಅನೇಕರಲ್ಲಿ ಗೊಂದಲ…

7 hours ago

ಓದುಗರ ಪತ್ರ: ಕನ್ನಡ ಒಗ್ಗಟ್ಟು

ಕನ್ನಡ ಒಗ್ಗಟ್ಟು ಕಾವೇರಿಯ ಹೆಸರಲ್ಲಿ ಕಂಡಿದೆ ಕನ್ನಡ ನಾಯಕರ ಒಗ್ಗಟ್ಟು ಆಳುವವರ ಜೊತೆ ಕೈ ಜೋಡಿಸಿದರೆ ಬಿಡಿಸಲಿವೆ ಹಲವು ಬಿಕ್ಕಟ್ಟು…

7 hours ago

ಓದುಗರ ಪತ್ರ: ರಾಜಕಾರಣದ ಸರಕು!

ರಾಜಕಾರಣದ ಸರಕು! ‘ನೀರಿಗಾಗಿ ತಮಿಳುನಾಡು ಸುಪ್ರೀಂಗೆ ಮೊರೆ!’ ನೀರಿzಗ ಹರಿಸಿದೆ ಕರ್ನಾಟಕ ಯಥೇಚ್ಛ ನೀರನು ಸಮುದ್ರ ತುಳುಕುವಷ್ಟು ಇಲ್ಲದಾಗ ಹರಿಸುವುದೆಂತು…

7 hours ago

ಓದುಗರ ಪತ್ರ: ಅಕ್ಕಿ ದರ ಏರಿಕೆಗೆ ಕಡಿವಾಣ ಅಗತ್ಯ

ರಾಜ್ಯದಲ್ಲಿ ದಿನೇ ದಿನೇ ಏರುತ್ತಿರುವ ಅಕ್ಕಿ ಬೆಲೆ ಸಾಮಾನ್ಯ ಜನರ ನಿದ್ದೆಗೆಡಿಸಿದೆ. ತುಂಗಭದ್ರಾ ಜಲಾಶಯದ ಗೇಟ್ ರಿಪೇರಿಯಿಂದಾಗಿ ಸುಮಾರು ೭…

7 hours ago

ಸತ್ಯದ ಪ್ರತಿಪಾದಕರು ಮಾತ್ರ ಆದರ್ಶ ಆಗಬಲ್ಲರು

ಸಿ.ಹರಕುಮಾರ್, ಲೇಖಕ ಜನರ ನೆಮ್ಮದಿ ಕಸಿದುಕೊಂಡವರು, ನೆಮ್ಮದಿಯಿಂದಿರಲು ಸಾಧ್ಯವೆ? ಸತ್ಯದ ಪ್ರತಿಪಾದನೆ ಆ ಕ್ಷಣಕ್ಕೆ ಇಷ್ಟವಾಗದಿರಬಹುದು, ಶತ್ರುಗಳನ್ನು ಹುಟ್ಟುಹಾಕಬಹುದು, ಜೀರ್ಣಿಸಿಕೊಳ್ಳಲು…

7 hours ago

300 ಮಕ್ಕಳ ಶಿಕ್ಷಣಕ್ಕೆ ಶೇ.96ರಷ್ಟು ಸಂಪತ್ತನ್ನು ದಾನ ಮಾಡಿದ ಟೆಕ್ಕಿ

ಪಂಜುಗಂಗೊಳ್ಳಿ ಅವರ ವಾರದ ಅಂಕಣ  ಬಾಲಕಾರ್ಮಿಕರಿಗಾಗಿ ಏಕಲವ್ಯ ಟ್ರಸ್ಟ್ ಸ್ಥಾಪನೆ  ಛತ್ತೀಸ್‌ಘಡದ ಭಿಲಾಯ್‌ಯ ವಿವೇಕ್ ಶಂಗಾರಿಯ ತಾಯಿ ತೀರಿಕೊಂಡಾಗ ಅವನಿಗೆ…

7 hours ago