ಕೇರಳ: ವಯನಾಡುವಿನಲ್ಲಿ ಸಂಭವಿಸಿರುವ ಭೀಕರ ಭೂಕುಸಿತ ಹಾಗೂ ಜಲಪ್ರಳಯ ದುರಂತವನ್ನು ರಾಷ್ಟ್ರೀಯ ವಿಪತ್ತು ಎಂದು ಘೋಷಿಸಲು ಕೇಂದ್ರ ಸರ್ಕಾರ ನಿರಾಕರಿಸಿದೆ ಎಂದು ವರದಿಯಾಗಿದೆ.
ಈ ಮಧ್ಯೆ ವಯನಾಡಿನ ಮೇಪ್ಪಾಡಿ ಗ್ರಾಮ ಪಂಚಾಯಿತಿ ವ್ಯಾಪ್ತಿಯನ್ನು ವಿಪತ್ತು ಪೀಡಿತ ಪ್ರದೇಶ ಎಂದು ಘೋಷಿಸಿ ಕೇರಳ ರಾಜ್ಯ ಸರ್ಕಾರ ಶುಕ್ರವಾರ ಆದೇಶಿಸಿದೆ.
ನಾವು ಈ ದುರಂತವನ್ನು ರಾಷ್ಟ್ರೀಯ ವಿಪತ್ತು ಎಂದು ಘೋಷಿಸುವಂತೆ ಒತ್ತಾಯಿಸಿ ಕೇಂದ್ರ ಸರ್ಕಾರಕ್ಕೆ ಪತ್ರ ಬರೆದಿದ್ದೇವೆ, ಆದರೆ, ಅವರು ಕಾನೂನಾತ್ಮಕ ಸಮಸ್ಯೆಗಳಿವೆ ಎಂದು ಹೇಳಿ ನಮ್ಮ ಮನವಿಯನ್ನು ನಿರಾಕರಿಸಿದ್ದಾರೆ. ಆದ್ದರಿಂದ ಈ ಭೀಕರ ದುರಂತವನ್ನು ರಾಜ್ಯ ವಿಪತ್ತು ಎಂದು ಘೋಷಿಸಲಿದ್ದೇವೆ ಎಂದು ಕೇರಳ ರಾಜ್ಯ ಸರ್ಕಾರದ ಕಂದಾಯ ಸಚಿವ ಕೆ.ರಾಜನ್ ಹೇಳಿದ್ದಾರೆ.
ಕೇರಳ ಆಡಳಿತ ಮತ್ತು ವಿರೋಧ ಪಕ್ಷಗಳು, ವಯನಾಡು ಭೂಕುಸಿತ ದುರಂತದ ಪರಿಹಾರಕ್ಕೆ ಹೆಚ್ಚುವರಿ ಅನುದಾನ ಬಿಡುಗಡೆ ಮಾಡಬೇಕು ಮತ್ತು ಇದನ್ನು ರಾಷ್ಟ್ರೀಯ ವಿಪತ್ತು ಎಂದ ಘೋಷಿಸಲು ಕೇಂದ್ರ ಸರ್ಕಾರವನ್ನು ಒತ್ತಾಯಿಸಿವೆ. ಆದರೆ, ಇದಕ್ಕೆ ಕೇಂದ್ರ ಸರ್ಕಾರ ಕ್ಯಾತೆ ತೆಗೆದಿದ್ದು, ವರದಿಯನ್ನು ನಿರಾಕರಿಸಿದೆ. ಈ ನಡುವೆ ಕೇರಳ ಸರ್ಕಾರ ಈ ದುರಂತವನ್ನು ರಾಜ್ಯ ವಿಪತ್ತು ಎಂದು ಘೋಷಿಸಿದೆ. ಈ ಬೆಳವಣಿಗೆ ಮತ್ತೊಂದು ರಾಜಕೀಯ ಕಿತ್ತಾಟಕ್ಕೆ ಕಾರಣವಾಗುವ ಎಲ್ಲಾ ಲಕ್ಷಣಗಳು ಗೋಚರಿಸುತ್ತಿದೆ.
2018ರಲ್ಲಿ 500 ಕ್ಕೂ ಹೆಚ್ಚು ಮಂದಿಯನ್ನು ಬಲಿಪಡೆದ ದುರಂತ ಹೊರತುಪಡಿಸಿದರೆ, ಕೇರಳದ ಇತಿಹಾಸದಲ್ಲೇ ಇದು ಅತ್ಯಂತ ಭೀಕರ ಪ್ರಕೃತಿ ವಿಕೋಪವಾಗಿದೆ. ಅರಬ್ಬೀಸಮುದ್ರದಲ್ಲಿ ಉಷ್ಣತೆ ಹೆಚ್ಚಿರುವುದರಿಂದ ಮತ್ತು ಗಣಿಗಾರಿಕೆಯಂಥ ಪರಿಸರಕ್ಕೆ ಹಾನಿ ತರುವ ಚಟುವಟಿಕೆಗಳ ಏರಿಕೆಯಿಂದಾಗಿ, ಹಸಿರು ಮರೆಯಾಗಿರುವುದರಿಂದ ಇಂಥ ಭೂಕುಸಿತಗಳ ಹೆಚ್ಚುತ್ತಿವೆ ಎಂದು ಹವಮಾನ ವಿಜ್ಞಾನಿಗಳು ವಿಶ್ಲೇಷಿಸಿದ್ದಾರೆ.
ಜುಲೈ 30 ರ ಮಧ್ಯರಾತ್ರಿ ವಯನಾಡಿನಲ್ಲಿ ಸಂಭವಿಸಿದ ಭೀಕರ ಭೂಕುಸಿತ, ಜಲಪ್ರಳಯದಲ್ಲಿ ಮೃತರ ಸಂಖ್ಯೆ ಶುಕ್ರವಾರ 300 ದಾಟಿದೆ. ಇನ್ನೂ 200ರಷ್ಟು ಜನರು ನಾಪತ್ತೆಯಾಗಿದ್ದಾರೆ ಎಂದು ವರದಿಗಳು ಹೇಳಿವೆ.
ಬೆಂಗಳೂರು : ರಾಜ್ಯ ರಸ್ತೆ ಸಾರಿಗೆ ನಿಗಮದ ಬಸ್ಸುಗಳ ಮೇಲಿನ ಜಾಹೀರಾತುಗಳಲ್ಲಿ ತಂಬಾಕು ಉತ್ಪನ್ನಗಳ ಸೇವನೆಗೆ ಪ್ರಚೋದಿಸುವ ನೇರವಾದ ಅಥವಾ…
ಬೆಂಗಳೂರು : ಮೆಟ್ರೋ ದರ ಏರಿಕೆಗೆ ಬಿಎಂಆರ್ಸಿಎಲ್ ಬ್ರೇಕ್ ಹಾಕಿದೆ. ಸೋಮವಾರದಿಂದ ಶೇ.5ರಷ್ಟು ದರ ಏರಿಕೆಗೆ ಬಿಎಂಆರ್ಸಿಎಲ್ ಮುಂದಾಗಿತ್ತು. ಆದರೆ…
ಮೈಸೂರು : ಸಜಾ ಬಂಧಿಗಳು ಕಾರಾಗೃಹದಿಂದ ಬಿಡುಗಡೆಯಾಗುವುದರೊಳಗೆ ಉತ್ತಮ ನಡತೆಯನ್ನು ಹೊಂದಿ ಹೊರಗೆ ಹೋದ ಬಳಿಕ ಸಮಾಜಮುಖಿ ಜೀವನ ಆರಂಭಿಸಬೇಕು…
ಹುಣಸೂರು : 2028ರ ವಿಧಾನಸಭೆ ಚುನಾವಣೆಯಲ್ಲಿ ಮೈತ್ರಿ ಸರ್ಕಾರದಲ್ಲಿ ಎಚ್.ಡಿ.ಕುಮಾರಸ್ವಾಮಿ ಅವರು ಮತ್ತೆ ಮುಖ್ಯಮಂತ್ರಿ ಆಗಲಿದ್ದಾರೆ ಎಂದು ಶಾಸಕ ಜಿ.ಡಿ.ಹರೀಶ್ಗೌಡ…
ಮಳವಳ್ಳಿ : ತಾಯಿ ಮತ್ತು ಮಗಳು ಇಬ್ಬರು ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಸಮೀಪದ ದಳವಾಯಿ ಕೋಡಿಹಳ್ಳಿ…
ಬಳ್ಳಾರಿ : ಜಿಲ್ಲೆಯಲ್ಲಿ ಐದು ಸಾವಿರ ವರ್ಷಗಳಷ್ಟು ಹಳೆಯದಾದ ಪ್ರಾಗೈತಿಹಾಸಿಕ ಕಾಲದ ಎರಡು ಅಸ್ಥಿ ಪಂಜರಗಳು ಪತ್ತೆಯಾಗಿದ್ದು, ಇತಿಹಾಸ ಸಂಶೋಧನಾ…