ಕೇರಳ: ವಯನಾಡುವಿನಲ್ಲಿ ಸಂಭವಿಸಿರುವ ಭೀಕರ ಭೂಕುಸಿತ ಹಾಗೂ ಜಲಪ್ರಳಯ ದುರಂತವನ್ನು ರಾಷ್ಟ್ರೀಯ ವಿಪತ್ತು ಎಂದು ಘೋಷಿಸಲು ಕೇಂದ್ರ ಸರ್ಕಾರ ನಿರಾಕರಿಸಿದೆ ಎಂದು ವರದಿಯಾಗಿದೆ.
ಈ ಮಧ್ಯೆ ವಯನಾಡಿನ ಮೇಪ್ಪಾಡಿ ಗ್ರಾಮ ಪಂಚಾಯಿತಿ ವ್ಯಾಪ್ತಿಯನ್ನು ವಿಪತ್ತು ಪೀಡಿತ ಪ್ರದೇಶ ಎಂದು ಘೋಷಿಸಿ ಕೇರಳ ರಾಜ್ಯ ಸರ್ಕಾರ ಶುಕ್ರವಾರ ಆದೇಶಿಸಿದೆ.
ನಾವು ಈ ದುರಂತವನ್ನು ರಾಷ್ಟ್ರೀಯ ವಿಪತ್ತು ಎಂದು ಘೋಷಿಸುವಂತೆ ಒತ್ತಾಯಿಸಿ ಕೇಂದ್ರ ಸರ್ಕಾರಕ್ಕೆ ಪತ್ರ ಬರೆದಿದ್ದೇವೆ, ಆದರೆ, ಅವರು ಕಾನೂನಾತ್ಮಕ ಸಮಸ್ಯೆಗಳಿವೆ ಎಂದು ಹೇಳಿ ನಮ್ಮ ಮನವಿಯನ್ನು ನಿರಾಕರಿಸಿದ್ದಾರೆ. ಆದ್ದರಿಂದ ಈ ಭೀಕರ ದುರಂತವನ್ನು ರಾಜ್ಯ ವಿಪತ್ತು ಎಂದು ಘೋಷಿಸಲಿದ್ದೇವೆ ಎಂದು ಕೇರಳ ರಾಜ್ಯ ಸರ್ಕಾರದ ಕಂದಾಯ ಸಚಿವ ಕೆ.ರಾಜನ್ ಹೇಳಿದ್ದಾರೆ.
ಕೇರಳ ಆಡಳಿತ ಮತ್ತು ವಿರೋಧ ಪಕ್ಷಗಳು, ವಯನಾಡು ಭೂಕುಸಿತ ದುರಂತದ ಪರಿಹಾರಕ್ಕೆ ಹೆಚ್ಚುವರಿ ಅನುದಾನ ಬಿಡುಗಡೆ ಮಾಡಬೇಕು ಮತ್ತು ಇದನ್ನು ರಾಷ್ಟ್ರೀಯ ವಿಪತ್ತು ಎಂದ ಘೋಷಿಸಲು ಕೇಂದ್ರ ಸರ್ಕಾರವನ್ನು ಒತ್ತಾಯಿಸಿವೆ. ಆದರೆ, ಇದಕ್ಕೆ ಕೇಂದ್ರ ಸರ್ಕಾರ ಕ್ಯಾತೆ ತೆಗೆದಿದ್ದು, ವರದಿಯನ್ನು ನಿರಾಕರಿಸಿದೆ. ಈ ನಡುವೆ ಕೇರಳ ಸರ್ಕಾರ ಈ ದುರಂತವನ್ನು ರಾಜ್ಯ ವಿಪತ್ತು ಎಂದು ಘೋಷಿಸಿದೆ. ಈ ಬೆಳವಣಿಗೆ ಮತ್ತೊಂದು ರಾಜಕೀಯ ಕಿತ್ತಾಟಕ್ಕೆ ಕಾರಣವಾಗುವ ಎಲ್ಲಾ ಲಕ್ಷಣಗಳು ಗೋಚರಿಸುತ್ತಿದೆ.
2018ರಲ್ಲಿ 500 ಕ್ಕೂ ಹೆಚ್ಚು ಮಂದಿಯನ್ನು ಬಲಿಪಡೆದ ದುರಂತ ಹೊರತುಪಡಿಸಿದರೆ, ಕೇರಳದ ಇತಿಹಾಸದಲ್ಲೇ ಇದು ಅತ್ಯಂತ ಭೀಕರ ಪ್ರಕೃತಿ ವಿಕೋಪವಾಗಿದೆ. ಅರಬ್ಬೀಸಮುದ್ರದಲ್ಲಿ ಉಷ್ಣತೆ ಹೆಚ್ಚಿರುವುದರಿಂದ ಮತ್ತು ಗಣಿಗಾರಿಕೆಯಂಥ ಪರಿಸರಕ್ಕೆ ಹಾನಿ ತರುವ ಚಟುವಟಿಕೆಗಳ ಏರಿಕೆಯಿಂದಾಗಿ, ಹಸಿರು ಮರೆಯಾಗಿರುವುದರಿಂದ ಇಂಥ ಭೂಕುಸಿತಗಳ ಹೆಚ್ಚುತ್ತಿವೆ ಎಂದು ಹವಮಾನ ವಿಜ್ಞಾನಿಗಳು ವಿಶ್ಲೇಷಿಸಿದ್ದಾರೆ.
ಜುಲೈ 30 ರ ಮಧ್ಯರಾತ್ರಿ ವಯನಾಡಿನಲ್ಲಿ ಸಂಭವಿಸಿದ ಭೀಕರ ಭೂಕುಸಿತ, ಜಲಪ್ರಳಯದಲ್ಲಿ ಮೃತರ ಸಂಖ್ಯೆ ಶುಕ್ರವಾರ 300 ದಾಟಿದೆ. ಇನ್ನೂ 200ರಷ್ಟು ಜನರು ನಾಪತ್ತೆಯಾಗಿದ್ದಾರೆ ಎಂದು ವರದಿಗಳು ಹೇಳಿವೆ.
ಪುಷ್ಪ ವೃಷ್ಟಿ..! ಅತಿವೃಷ್ಟಿ, ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ‘ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ ಕಾರಣ, ಅಲ್ಲಿಗಿಲ್ಲ ಮಂತ್ರಿ…
ರಿಯಾಯಿತಿಗೆ ಸರ್ಕಾರ ಕ್ರಮ ಕೈಗೊಳ್ಳಲಿ ರಾಜ್ಯದ ಹಲವು ಭಾಗಗಳಲ್ಲಿ ಕಳೆದ ವರ್ಷಕ್ಕಿಂತ ಈ ಬಾರಿ ನಿರೀಕ್ಷಿಸಿದಷ್ಟು ಮಳೆಯಿಲ್ಲದ ಕಾರಣ ಕೃಷಿ ಕ್ಷೇತ್ರ…
ರಾಜ್ಯದಲ್ಲಿ ನಗರೀಕರಣದ ವೇಗದಿಂದಾಗಿ ಕೃಷಿ ಭೂಮಿಯ ವಿಸ್ತೀರ್ಣ ಸುಮಾರು ಶೇ. ೧೩ರಷ್ಟು ಕುಸಿದಿದೆ ಎಂದು ವರದಿಗಳು ಹೇಳಿವೆ. ಮೂಲಸೌಕರ್ಯಗಳ ಹೆಸರಿನಲ್ಲಿ…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಕರ್ನಾಟಕದ ರಾಜಕಾರಣ ಧ್ರುವೀಕರಣದ ನೆಲೆಗಟ್ಟಿಗೆ ಬಂದು ತಲುಪಿದೆ. ಅಂದ ಹಾಗೆ ಧ್ರುವೀಕರಣಕ್ಕೆ ಅಸಮಾ ಧಾನ,ಅತೃಪ್ತಿ,ಭಿನ್ನಾಭಿಪ್ರಾಯಗಳೇ…
ಮಹೇಶ್ ಕರೋಟಿ ಹೇಮಾವತಿ ನದಿ ದಡದಲ್ಲೇ ನೀರಿಗಾಗಿ ಹಾಹಾಕಾರ ಕಿಕ್ಕೇರಿ: ಮಂದಗೆರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಚಿಕ್ಕಮಂದಗೆರೆ ಗ್ರಾಮವು ಹೇಮಾವತಿ…
ನವೀನ್ ಡಿಸೋಜ ಇಂದು ರಾಷ್ಟ್ರೀಯ ಜಂತುಹುಳು ನಿವಾರಣಾ ದಿನ ಜಂತುಹುಳು ಬಾಧೆ ತಡೆಗೆ ಆರೋಗ್ಯ ಇಲಾಖೆಯ ಮಹತ್ವದ ಹೆಜ್ಜೆ ಮಡಿಕೇರಿ:…