ವಯನಾಡು ಲೋಕಸಭಾ ಕ್ಷೇತ್ರದ ಉಪಚುನಾವಣೆ ಫಲಿತಾಂಶ: ಪ್ರಿಯಾಂಕಾ ಗಾಂಧಿಗೆ ದಾಖಲೆಯ ಗೆಲುವು

ತಿರುವನಂತಪುರಂ: ಕೇರಳದ ವಯನಾಡು ಲೋಕಸಭಾ ಕ್ಷೇತ್ರದ ಉಪಚುನಾವಣೆಗೆ ಸ್ಪರ್ಧಿಸಿದ್ದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ಅವರು 4 ಲಕ್ಷಕ್ಕೂ ಅಧಿಕ ಮತಗಳ ಅಂತರದಿಂದ ಗೆಲ್ಲುವ ಮೂಲಕ ಅಣ್ಣ ರಾಹುಲ್‌ ಗಾಂಧಿ ದಾಖಲೆ ಮುರಿದಿದ್ದಾರೆ.

ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ರಾಜೀನಾಮೆಯಿಂದ ತೆರವಾದ ವಯನಾಡು ಲೋಕಸಭಾ ಕ್ಷೇತ್ರಕ್ಕೆ ಪ್ರಿಯಾಂಕಾ ಗಾಂಧಿ ಸ್ಪರ್ಧೆ ಮಾಡಿದ್ದು, 4,10,931 ಮತಗಳ ಅಂತರದಿಂದ ಭರ್ಜರಿ ಗೆಲುವು ಸಾಧಿಸಿದ್ದಾರೆ.

ಪ್ರಿಯಾಂಕಾ ಗಾಂಧಿ ಒಟ್ಟು 6,22,338 ಲಕ್ಷ ಮತಗಳನ್ನು ಪಡೆದು ಗೆದ್ದರೆ, ಸಿಪಿಐನ ಹಿರಿಯ ನಾಯಕ ಸತ್ಯನ್‌ ಮೊಕೇರಿ 2,11,407 ಲಕ್ಷ ಮತಗಳನ್ನು ಪಡೆದಿದ್ದಾರೆ. ಬಿಜೆಪಿಯ ನವ್ಯಾ ಹರಿದಾಸ್ 1‌,09,939 ಮತಗಳನ್ನು ಪಡೆದು ಮೂರನೇ ಸ್ಥಾನಕ್ಕೆ ತೃಪ್ತಿಪಟ್ಟುಕೊಂಡಿದ್ದಾರೆ.

ಕಳೆದ ಲೋಕಸಭೆ ಚುನಾವಣೆಯಲ್ಲಿ ಒಟ್ಟು 6.47 ಲಕ್ಷ ಮತಗಳನ್ನು ಪಡೆದು ಗೆದ್ದಿದ್ದ ರಾಹುಲ್‌ ಗಾಂಧಿ 3.64 ಲಕ್ಷ ಮತಗಳ ಅಂತರವನ್ನು ಕಾಯ್ದುಕೊಂಡಿದ್ದರು. ಈಗ ಪ್ರಿಯಾಂಕಾ ಗಾಂಧಿ 4.10 ಲಕ್ಷ ಮತಗಳ ಅಂತರದಿಂದ ಗೆಲ್ಲುವ ಮೂಲಕ ರಾಹುಲ್‌ ದಾಖಲೆಯನ್ನು ಸರಿಗಟ್ಟಿದ್ದಾರೆ.

ರಾಹುಲ್‌ 2024ರ ಲೋಕಸಭಾ ಚುನಾವಣೆಯಲ್ಲಿ ವಯನಾಡು ಮತ್ತು ರಾಯ್‌ಬರೇಲಿ ಎರಡು ಕ್ಷೇತ್ರಗಳಲ್ಲಿ ಸ್ಪರ್ಧಿಸಿ ಗೆದ್ದಿದ್ದರು. ಸೋನಿಯಾ ಗಾಂಧಿ ರಾಜ್ಯಸಭೆಗೆ ಪ್ರವೇಶಿಸಿದ್ದರಿಂದ ವಯನಾಡು ಕ್ಷೇತ್ರವನ್ನು ಸೋದರಿ ಪ್ರಿಯಾಂಕಾಗೆ ಬಿಟ್ಟುಕೊಟ್ಟಿದ್ದರು.

ಕಳೆದ ಒಂದು ತಿಂಗಳಿನಿಂದ ಕಾಂಗ್ರೆಸ್‌ನ ಹಿರಿಯ ನಾಯಕಿ ಹಾಗೂ ರಾಜ್ಯಸಭಾ ಸದಸ್ಯೆ ಸೋನಿಯಾ ಗಾಂಧಿ, ಪ್ರಿಯಾಂಕಾ ಪರ ವಯನಾಡು ಕ್ಷೇತ್ರದಲ್ಲಿ ಪ್ರಚಾರ ಮಾಡುವ ಮೂಲಕ 5 ಲಕ್ಷ ಮತಗಳ ಅಂತರದಿಂದ ಗೆಲ್ಲುತ್ತಾರೆ ಎಂದು ಭವಿಷ್ಯ ನುಡಿದಿದ್ದರು.

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಓದುಗರ ಪತ್ರ: ಪ್ರಕೃತಿ ಪ್ರೀತಿ ಅತಿಮುಖ್ಯ

ಇಂದಿನ ಧಾವಂತದ ಬದುಕಿನಲ್ಲಿ ನಾವೆಲ್ಲರೂ ಆಸೆಗಳ ಬೆನ್ನೇರಿ ಓಡುತ್ತಿದ್ದು, ನಮ್ಮ ಉಸಿರಿಗೆ ಆಧಾರವಾಗಿರುವ ಪ್ರಕೃತಿಯನ್ನು ಮರೆಯುತ್ತಿದ್ದೇವೆ. ಗಾಳಿ, ನೀರು, ಬೆಳಕಿಲ್ಲದೆ…

18 hours ago

ಓದುಗರ ಪತ್ರ: ಪ್ಲಾಸ್ಟಿಕ್ ನೋಟುಗಳ ಬಿಡುಗಡೆ ನಿರ್ಧಾರ ದೂರದೃಷ್ಟಿಯ ಹೆಜ್ಜೆ

ಆರ್‌ಬಿಐ ಮುಂದಿನ ಹಣಕಾಸು ವರ್ಷದಿಂದ (೨೦೨೭-೨೮) ಪ್ಲಾಸ್ಟಿಕ್ (ಪಾಲಿಮರ್) ನೋಟುಗಳನ್ನು ಚಲಾವಣೆಗೆ ತರಲು ನಿರ್ಧರಿಸಿರುವುದು ಸ್ವಾಗತಾರ್ಹ ಮತ್ತು ದೂರದೃಷ್ಟಿಯ ಹೆಜ್ಜೆಯಾಗಿದೆ.…

18 hours ago

ಓದುಗರ ಪತ್ರ: ಸಮಾನತೆ ಮಾತನಾಡುವವರ ನಡವಳಿಕೆ ಇದೇನಾ?

ರಾಜ್ಯ ಸಚಿವ ಸಂಪುಟದಲ್ಲಿ ಮಹಿಳೆಯರಿಗೆ ಪ್ರಾತಿನಿಧ್ಯ ನೀಡದಿರುವುದು ಮಹಿಳೆಯರಿಗೆ ಮಾಡಿದ ಘೋರ ಅನ್ಯಾಯ. ಅಧಿಕಾರಕ್ಕೆ ಬರುವ ಮುನ್ನ ಮಹಿಳೆಯರ ಹೆಸರಿನಲ್ಲಿ…

18 hours ago

ಚಲನಚಿತ್ರ: ಪ್ರಮಾಣೀಕರಣ ಮಂಡಳಿಯದೇ ಅಂತಿಮ ತೀರ್ಪು

ವೈಡ್‌ ಆಂಗಲ್:‌ ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ  ಇಂದು ಬಿಡುಗಡೆಯಾಗುತ್ತಿರುವ ‘ ಬಾಸ್’ಎಂದೋ ತೆರೆಗೆ ಬರಬೇಕಾಗಿತ್ತು. ಆದರೆ ಚಿತ್ರದ ಹೆಸರು,…

18 hours ago

ಕೊಡಗು ಜಿಲ್ಲೆಯಲ್ಲಿ ಶೇ.37ರಷ್ಟು ಮಳೆ ಕೊರತೆ

ನವೀನ್ ಡಿಸೋಜ ಕಳೆದ ಕೆಲ ದಿನಗಳಲ್ಲಿ ಉತ್ತಮ ಮಳೆ; ವಾಡಿಕೆ ಮಳೆ ಕೊರತೆ ವಿರಾಜಪೇಟೆ ತಾಲ್ಲೂಕಿನಲ್ಲಿ ಅತಿ ಹೆಚ್ಚು ಶೇ.೪೩…

18 hours ago

ಕಬಿನಿ ಜಲಾಶಯದಿಂದ ಹರಿಸುತ್ತಿದ್ದ ನೀರು ಸ್ಥಗಿತ

ಮಂಜು ಕೋಟೆ ಎಚ್.ಡಿ.ಕೋಟೆ: ತಾಲ್ಲೂಕಿನ ಕಬಿನಿ ಜಲಾಶಯಕ್ಕೆ ಬರುತ್ತಿದ್ದ ಒಳಹರಿವ ಇಳಿಮುಖವಾಗಿರುವ ಹಿನ್ನೆಲೆಯಲ್ಲಿ ಹೊರಹರಿವು ಸ್ಥಗಿತಗೊಳಿಸಿ ಜಲಾಶಯದ ಕ್ರಸ್ಟ್‌ಗೇಟ್‌ಗಳನ್ನು ಬಂದ್…

18 hours ago