ವಯನಾಡು: ರಾಹುಲ್ ಗಾಂಧಿ ರಾಜೀನಾಮೆಯಿಂದ ತೆರವಾಗಿದ್ದ ವಯನಾಡು ಲೋಕಸಭಾ ಕ್ಷೇತ್ರದಲ್ಲಿ ಪ್ರಿಯಾಂಕಾ ಗಾಂಧಿ ಸ್ಪರ್ಧೆ ಮಾಡುತ್ತಿದ್ದು, ಇಂದು ನಾಮಪತ್ರ ಸಲ್ಲಿಕೆ ಮಾಡಿದ್ದಾರೆ.
ಈ ಹಿನ್ನೆಲೆಯಲ್ಲಿಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ಅವರು ನಾಮಪತ್ರ ಸಲ್ಲಿಸಿದ್ದು, ಈ ಮೂಲಕ ಮೊದಲ ಬಾರಿಗೆ ಚುನಾವಣಾ ಕಣಕ್ಕಿಳಿದಿದ್ದಾರೆ.
ನಾಮಪತ್ರ ಸಲ್ಲಿಸುವುದಕ್ಕಿಂತಲೂ ಮೊದಲು ವಯನಾಡಿನಲ್ಲಿ ಬೃಹತ್ ರೋಡ್ ಶೋ ನಡೆಸಿದ ಪ್ರಿಯಾಂಕಾ ಗಾಂಧಿ, ಕ್ಷೇತ್ರದಲ್ಲಿ ಗೆಲ್ಲಿಸಿ ಕೊಡುವಂತೆ ಮತದಾರರಿಗೆ ಮನವಿ ಮಾಡಿದ್ದಾರೆ. ಈ ವೇಳೆ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ, ಸೋನಿಯಾ ಗಾಂಧಿ, ಮಲ್ಲಿಕಾರ್ಜುನ ಖರ್ಗೆ, ಸಿಎಂ ಸಿದ್ದರಾಮಯ್ಯ ಸೇರಿದಂತೆ ಹಲವು ಕಾಂಗ್ರೆಸ್ ನಾಯಕರು ಭಾಗಿಯಾಗಿದ್ದರು.
ಬಳಿಕ ಜಿಲ್ಲಾಧಿಕಾರಿ ಕಚೇರಿಗೆ ತೆರಳಿ ನಾಮಪತ್ರ ಸಲ್ಲಿಸಿದರು. ಈ ವೇಳೆ ಹಲವು ಕಾಂಗ್ರೆಸ್ ನಾಯಕರು ಪ್ರಿಯಾಂಕಾ ಗಾಂಧಿಗೆ ಸಾಥ್ ನೀಡಿದರು.
ಇನ್ನು ವಯನಾಡು ಕ್ಷೇತ್ರದಲ್ಲಿ ಬಿಜೆಪಿ ತನ್ನ ಮಹಿಳಾ ಮೋರ್ಚಾದ ರಾಜ್ಯ ಪ್ರಧಾನ ಕಾರ್ಯದರ್ಶಿ ನವ್ಯ ಹರಿದಾಸ್ ಅವರನ್ನು ಕಣಕ್ಕಿಳಿಸಿದೆ. ಸಿಪಿಐನಿಂದ ಸತ್ಯೇನ್ ಮೊಕೇರಿ ಅವರು ಅಖಾಡದಲ್ಲಿದ್ದು, ತ್ರಿಕೋನ ಸ್ಪರ್ಧೆ ಏರ್ಪಟ್ಟಿದೆ.
ಇಂದಿನ ಧಾವಂತದ ಬದುಕಿನಲ್ಲಿ ನಾವೆಲ್ಲರೂ ಆಸೆಗಳ ಬೆನ್ನೇರಿ ಓಡುತ್ತಿದ್ದು, ನಮ್ಮ ಉಸಿರಿಗೆ ಆಧಾರವಾಗಿರುವ ಪ್ರಕೃತಿಯನ್ನು ಮರೆಯುತ್ತಿದ್ದೇವೆ. ಗಾಳಿ, ನೀರು, ಬೆಳಕಿಲ್ಲದೆ…
ಆರ್ಬಿಐ ಮುಂದಿನ ಹಣಕಾಸು ವರ್ಷದಿಂದ (೨೦೨೭-೨೮) ಪ್ಲಾಸ್ಟಿಕ್ (ಪಾಲಿಮರ್) ನೋಟುಗಳನ್ನು ಚಲಾವಣೆಗೆ ತರಲು ನಿರ್ಧರಿಸಿರುವುದು ಸ್ವಾಗತಾರ್ಹ ಮತ್ತು ದೂರದೃಷ್ಟಿಯ ಹೆಜ್ಜೆಯಾಗಿದೆ.…
ರಾಜ್ಯ ಸಚಿವ ಸಂಪುಟದಲ್ಲಿ ಮಹಿಳೆಯರಿಗೆ ಪ್ರಾತಿನಿಧ್ಯ ನೀಡದಿರುವುದು ಮಹಿಳೆಯರಿಗೆ ಮಾಡಿದ ಘೋರ ಅನ್ಯಾಯ. ಅಧಿಕಾರಕ್ಕೆ ಬರುವ ಮುನ್ನ ಮಹಿಳೆಯರ ಹೆಸರಿನಲ್ಲಿ…
ವೈಡ್ ಆಂಗಲ್: ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ ಇಂದು ಬಿಡುಗಡೆಯಾಗುತ್ತಿರುವ ‘ ಬಾಸ್’ಎಂದೋ ತೆರೆಗೆ ಬರಬೇಕಾಗಿತ್ತು. ಆದರೆ ಚಿತ್ರದ ಹೆಸರು,…
ನವೀನ್ ಡಿಸೋಜ ಕಳೆದ ಕೆಲ ದಿನಗಳಲ್ಲಿ ಉತ್ತಮ ಮಳೆ; ವಾಡಿಕೆ ಮಳೆ ಕೊರತೆ ವಿರಾಜಪೇಟೆ ತಾಲ್ಲೂಕಿನಲ್ಲಿ ಅತಿ ಹೆಚ್ಚು ಶೇ.೪೩…
ಮಂಜು ಕೋಟೆ ಎಚ್.ಡಿ.ಕೋಟೆ: ತಾಲ್ಲೂಕಿನ ಕಬಿನಿ ಜಲಾಶಯಕ್ಕೆ ಬರುತ್ತಿದ್ದ ಒಳಹರಿವ ಇಳಿಮುಖವಾಗಿರುವ ಹಿನ್ನೆಲೆಯಲ್ಲಿ ಹೊರಹರಿವು ಸ್ಥಗಿತಗೊಳಿಸಿ ಜಲಾಶಯದ ಕ್ರಸ್ಟ್ಗೇಟ್ಗಳನ್ನು ಬಂದ್…