ನವದೆಹಲಿ: ದೆಹಲಿ ವಿಧಾನಸಭೆ ಚುನಾವಣೆಯಲ್ಲಿ ಆಮ್ ಆದ್ಮಿ ಪಕ್ಷದ ಸೋಲಿಗೆ ಕಾಂಗ್ರೆಸ್ ಪಕ್ಷ ಜವಾಬ್ದಾರಿಯಲ್ಲ. ಆ ಪಕ್ಷವನ್ನು ಗೆಲ್ಲಿಸುವುದೇ ನಮ್ಮ ಕೆಲಸವಲ್ಲ ಎಂದು ಕಾಂಗ್ರೆಸ್ ಹೇಳಿದೆ.
ದೆಹಲಿ ವಿಧಾನಸಭೆ ಚುನಾವಣೆಯಲ್ಲಿ ಎಎಪಿ ಪಕ್ಷ ಸೋಲಿನತ್ತ ಮುಖ ಮಾಡಿದ್ದು, ಬಿಜೆಪಿ ಭಾರೀ ಅಂತರದ ಗೆಲುವಿನತ್ತ ದಾಪುಗಾಲಿರಿಸಿದೆ. ದೆಹಲಿ ಮಾಜಿ ಸಿಎಂ ಅರವಿಂದ್ ಕೇಜ್ರಿವಾಲ್, ಮಾಜಿ ಡಿಸಿಎಂ ಮನೀಶ್ ಸಿಸೋಡಿಯಾಗೆ ದೆಹಲಿ ಜನತೆ ಶಾಕ್ ನೀಡಿದ್ದು, ಇಬ್ಬರು ನಾಯಕರು ಸೋಲು ಕಂಡಿದ್ದಾರೆ.
ಇನ್ನು ದೆಹಲಿ ಚುನಾವಣಾ ಫಲಿತಾಂಶದ ಬೆನ್ನಲ್ಲೇ ಎಎಪಿ ಸೋಲಿಗೆ ಕಾಂಗ್ರೆಸ್ ಕಾರಣ ಎಂಬ ಟೀಕೆಗಳು ಉದ್ಬವವಾಗಿದ್ದು, ಈ ಬಗ್ಗೆ ಕಾಂಗ್ರೆಸ್ ಖಾರವಾಗಿ ಪ್ರತಿಕ್ರಿಯೆ ನೀಡಿದೆ.
ಎಎಪಿ ಸೋಲಿಗೆ ನಾವು ಜವಾಬ್ದಾರರಲ್ಲ. ಆ ಪಕ್ಷವನ್ನು ಗೆಲ್ಲಿಸುವುದೇ ನಮ್ಮ ಕೆಲಸವಲ್ಲ ಎಂದು ಹೇಳಿದೆ.
ಈ ಬಗ್ಗೆ ಮಾತನಾಡಿರುವ ಕಾಂಗ್ರೆಸ್ ವಕ್ತಾರೆ ಸುಪ್ರಿಯಾ ಶ್ರಿನಾಟಿ ಅವರು, ಆಮ್ ಆದ್ಮಿ ಪಕ್ಷವನ್ನು ಗೆಲ್ಲಿಸುವುದು ಕಾಂಗ್ರೆಸ್ನ ಜವಾಬ್ದಾರಿಯಲ್ಲ. ಆಮ್ ಆದ್ಮಿ ಪಕ್ಷವನ್ನು ಗೆಲ್ಲಿಸುವ ಜವಾಬ್ದಾರಿ ಕಾಂಗ್ರಸ್ನ ಮೇಲಿಲ್ಲ. ನಾವು ಫಲವತ್ತಾದ ರಾಜಕೀಯ ಭದ್ರಕೋಟೆಗಳನ್ನು ಹುಡುಕುತ್ತೇವೆ. ಇವುಗಳನ್ನು ಗೆಲ್ಲಲು ಬಯಸುತ್ತೇವೆ. ಇಲ್ಲಿ ಯಾವುದೇ ಪಕ್ಷದ ಮೇಲೂ ಕಾಂಗ್ರೆಸ್ ಅವಲಂಬಿತವಾಗಿಲ್ಲ ಎಂದು ಹೇಳಿದರು.
ನವದೆಹಲಿ : ಹೆಚ್ಚುತ್ತಿರುವ ಭೌಗೋಳಿಕ ರಾಜಕೀಯ ಉದ್ವಿಗ್ನತೆಗಳು ಜಾಗತಿಕವಾಗಿ ಸಾಮಾನ್ಯ ಜೀವನದ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತಿದೆ ಎಂದು ಪ್ರಧಾನಿ…
ಮೇಘನ ಕೆ.ಆರ್ ಕೇರಳಿಗಳಾದ ನನಗೆ ವರ್ಷಕ್ಕೆರಡು ಹಬ್ಬ-ಓಣಂ, ವಿಶು ಮಾತ್ರ ತಿಳಿದಿತ್ತು. ದೀಪಾವಳಿಗೆ ದನಗಳಿಗೆ ಪೂಜೆ ಮಾಡಿ ಅಮ್ಮ ಕೆಲಸಕ್ಕೆ…
ಡಾ. ಶಿಲಿನಾ ಕೋಟೆ ಎನ್. ಭಾರತೀಯ ಸಂಸ್ಕೃತಿಯಲ್ಲಿ ಹಬ್ಬಗಳು ಕೇವಲ ಧಾರ್ಮಿಕ ಆಚರಣೆ ಗಳಲ್ಲ; ಅವು ಪ್ರಕೃತಿ, ಕೃಷಿ, ಮಳೆ,…
ಶುಭಮಂಗಳ ರಾಮಾಪುರ ಗೌರಿಹಬ್ಬವೆಂದ ಕೂಡಲೇ ಸಂಭ್ರಮದ ನೆನಪು ಒಂದೆಡೆಯಾದರೆ ಕೆಲಸದ ಹೊರೆ ಮತ್ತೊಂದೆಡೆ. ನನ್ನೂರಿನಲ್ಲಂತೂ ಗೌರಿಹಬ್ಬಕ್ಕೆ ಮಡಿ ಮಾಡುವುದೇ ದೊಡ್ಡ…
ನಾಳಿನ ಗೌರಿ ಗಣೇಶ ಸಂಭ್ರಮಕ್ಕೆ ಬರಹಗಳ ಬಾಗಿನ ಡಾ.ಶುಭಶ್ರೀ ಪ್ರಸಾದ್, ಮಂಡ್ಯ ‘ಮಗಳು’ಎಂದ ಕ್ಷಣ ಕಣ್ಮುಂದೆ ಬರುವುದು ಜರಿ ಲಂಗ,…
ಅರಮನೆ ನಗರಿಯ ಮಾರುಕಟ್ಟೆಗಳಲ್ಲಿ ಖರೀದಿ ಭರಾಟೆ ಜೋರು ಸೇವಂತಿಗೆ ಹೂವು, ಏಲಕ್ಕಿ ಬಾಳೆಹಣ್ಣು ಸೇರಿ ಇನ್ನಿತರೆ ಹಣ್ಣುಗಳ ಬೆಲೆ ಹೆಚ್ಚಳ…