Mysore
22
overcast clouds

Social Media

ಶನಿವಾರ, 01 ಆಗಸ್ಟ್ 2026
Light
Dark

ಈವರೆಗೂ ಇರಾನ್‌ನಿಂದ 67 ಸಾವಿರ ಭಾರತೀಯರನ್ನು ಕರೆ ತಂದಿದ್ದೇವೆ: ಸಚಿವ ಜೈಶಂಕರ್‌

Jaishankar

ನವದೆಹಲಿ: ಇರಾನ್-‌ಇಸ್ರೇಲ್‌ ಸಂಘರ್ಷದ ಹಿನ್ನೆಲೆಯಲ್ಲಿ ಇರಾನ್‌ನಲ್ಲಿ ಸಿಲುಕಿದ್ದ 67 ಸಾವಿರ ಭಾರತೀಯರನ್ನು ಕರೆ ತಂದಿದ್ದೇವೆ ಎಂದು ವಿದೇಶಾಂಗ ಸಚಿವ ಜೈಶಂಕರ್‌ ತಿಳಿಸಿದರು.

ರಾಜ್ಯಸಭೆ ಕಲಾಪದಲ್ಲಿ ಮಾತನಾಡಿದ ಅವರು, ಮಧ್ಯ ಪ್ರಾಚ್ಯದಲ್ಲಿ ಸಿಲುಕಿರುವ ಭಾರತೀಯರ ರಕ್ಷಣೆಗೆ ಸಿದ್ಧ. ಅಲ್ಲಿ ಸಿಲುಕಿರುವ ಭಾರತೀಯರಿಗೆ ಸಲಹೆ ಸೂಚನೆ ನೀಡಲಾಗುತ್ತಿದೆ. ಸುರಕ್ಷಿತ ಪ್ರದೇಶಗಳಲ್ಲಿ ಇರುವಂತೆ ಸೂಚನೆ ನೀಡಲಾಗಿದೆ. ಯುದ್ಧ ಪರಿಸ್ಥಿತಿ ಅರಿತು ಮೊದಲೇ ಸೂಚನೆ ಕೊಡಲಾಗಿದೆ. ಸಹಾಯವಾಣಿ ಕೂಡ ಬಿಡುಗಡೆ ಮಾಡಿದ್ದೇವೆ ಎಂದು ಹೇಳಿದರು.

ಇನ್ನು ಮಧ್ಯಪ್ರಾಚ್ಯದ ಎಲ್ಲಾ ದೇಶಗಳಲ್ಲಿರುವ ಭಾರತೀಯರ ರಕ್ಷಣೆ ಮುಖ್ಯ. ಭಾರತೀಯರನ್ನು ಸುರಕ್ಷಿತವಾಗಿ ಕರೆತರುವ ವ್ಯವಸ್ಥೆ ಮಾಡಲಾಗಿದೆ. ಶಾಂತಿ ಕಾಪಾಡುವವರ ಪರ ಭಾರತ ಇದೆ ಎಂದು ಹೇಳಿದರು.

 

Tags:
error: Content is protected !!