ಹೊಸದಿಲ್ಲಿ : ಇಂದು ನನ್ನ ಮಗನಿಗೆ ಎಂಟು ಗಂಟೆಯ ಆಪರೇಷನ್ ಇತ್ತು. ಪತ್ನಿ, ಮಗಳು ಎಲ್ಲರೂ ಫೋನ್ ಮಾಡಿ ಬಹಳ ಮುಖ್ಯವಾದ ಆಪರೇಷನ್, ಬರಲೇಬೇಕು ಅಂತ ಹೇಳಿದ್ದಾರೆ. . ನಾನು ಅದಕ್ಕೆ ಗಡಿಯಲ್ಲಿ ಸೈನಿಕರು ಜೀವ ಬಲಿ ಕೊಡ್ತಿದ್ದಾರೆ. ಇಂದಿರಾ ಗಾಂಧಿ, ರಾಜೀವ್ ಗಾಂಧಿ ದೇಶಕ್ಕಾಗಿ ಪ್ರಾಣತ್ಯಾಗ ಮಾಡಿದ್ರು. ಅವರ ತ್ಯಾಗದ ಮುಂದೆ ನಮ್ಮದೇನು? ಅಂತ ಹೇಳಿ ದೇಶಕ್ಕಾಗಿ ನಾನು ಇಲ್ಲಿಯೇ ಉಳಿದೆ.. ʻವೋಟ್ ಚೋರಿʼ ಸಮಾವೇಶದಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಆಡಿದ ಭಾವುಕ ನುಡಿಗಳಿವು.
ದೆಹಲಿಯ ರಾಮಲೀಲಾ ಮೈದಾನದಲ್ಲಿ ನಡೆದ ಬೃಹತ್ ಸಮಾವೇಶ ಬೃಹತ್ ಸಮಾವೇಶವನ್ನುದ್ದೇಶಿಸಿ ಮಾತನಾಡಿದ ಅವರು, ನಮ್ಮ ಮಗನಿಗೆ ಏನಾದ್ರೂ ಪರ್ವಾಗಿಲ್ಲ ಅಂತ, ದೇಶದ 140 ಕೋಟಿ ಜನರಿಗಾಗಿ ನಾನು ಇಲ್ಲೇ ಉಳಿಯಲು ನಿರ್ಧರಿಸಿದೆ ಎಂದರು.
ಮೋದಿ ಸೋತ್ರೆ ಅವರ ಹೆಸರು ಎಲ್ಲೂ ಇರಲ್ಲ
ಮುಂದುವರಿದು ಮಾತನಾಡಿದ ಅವರು, ನಾವು ಸೋತಿದ್ದೇವೆ, ಆದ್ರೆ ನಮ್ಮ ಸಿದ್ಧಾಂತ ಬದುಕಿದೆ. ಮೋದಿ ಒಮ್ಮೆ ಸೋತರೆ ಅವರ ಹೆಸರೂ ಎಲ್ಲೂ ಇರಲ್ಲ. ನಾವು 10 ಬಾರಿ ಸೋತರೂ ಬದುಕಿದ್ದೇವೆ, ಹೋರಾಟಕ್ಕೆ ಸಿದ್ಧರಿದ್ದೇವೆ. ವಂದೇ ಮಾತರಂ ಕೂಡ ನಮ್ಮಿಂದ ಕದ್ದಿದ್ದಾರೆ. ಆ ಕಳ್ಳರ ಬಗ್ಗೆ ಎಚ್ಚರಿಕೆಯಿಂದ ಇರಿ ಎಂದು ಕಿವಿಮಾತು ಹೇಳಿದರು.
ಸಿದ್ದಾಪುರ : ವಿರಾಜಪೇಟೆ ತಾಲ್ಲೂಕಿನ ಮಾಲ್ದಾರೆ ಸಮೀಪದ ತಟ್ಟಳ್ಳಿಯಲ್ಲಿ ಕಾಫಿ ತೋಟದಲ್ಲಿ ಕೆಲಸ ನಿರ್ವಹಿಸುತ್ತಿದ್ದ ಕಾರ್ಮಿಕರ ಮೇಲೆ ಕಾಡಾನೆ ದಾಳಿ…
ಮೈಸೂರು : ಫೆ.28ರಿಂದ ಮಾ.17ರವರೆಗೆ ಮೈಸೂರು ನಗರದ 28 ಪರೀಕ್ಷಾ ಕೇಂದ್ರಗಳಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆ ನಡೆಯಲಿದ್ದು, ಸದರಿ ಪರೀಕ್ಷೆಗಳನ್ನು…
ತಿ.ನರಸೀಪುರ : ತಾಲ್ಲೂಕಿನ ಕೇತಹಳ್ಳಿ ಗ್ರಾಮದಲ್ಲಿ ಚಿರತೆಯೊಂದು ಪ್ರತ್ಯಕ್ಷವಾಗಿದ್ದು, ಗ್ರಾಮಸ್ಥರು ಆತಂಕಗೊಂಡಿದ್ದಾರೆ. ಗ್ರಾಮದಲ್ಲಿ ರಾತ್ರಿ ವೇಳೆ ಚಿರತೆ ಸಂಚರಿಸುತ್ತಿದ್ದುದನ್ನು ಯುವಕರಿಬ್ಬರು…
ಮೈಸೂರು : ಈ ಹಿಂದೆ ಎಂಡಿಎ ಆಯುಕ್ತರಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಡಾ.ಡಿ.ಬಿ.ನಟೇಶ್ ಅವರ ವಿರುದ್ಧ ಲಂಚ ನೀಡಿರುವ ಆರೋಪ ಹೊರಿಸಿದ್ದ…
ಹನೂರು : ಇಲ್ಲಿನ ಗುಂಡಾಲ್ ಜಲಾಶಯದಲ್ಲಿ ಹುಲಿ ಕಳೇಬರ ಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ವ್ಯಕ್ತಿಯೋರ್ವನನ್ನು ಅರಣ್ಯ ಇಲಾಖೆ ಅಧಿಕಾರಿಗಳು ಬಂಧಿಸಿದ್ದಾರೆ.…
ನಾಗಮಂಗಲ : ಮಂಡ್ಯ ಜಿಲ್ಲೆ ಸಾಕಷ್ಟು ಅಭಿವೃದ್ಧಿ ಹೊಂದಿದೆ. ಮತ್ತಷ್ಟು ಅಭಿವೃದ್ಧಿ ಹೊಂದಬೇಕಾಗಿದೆ. ಪಕ್ಷಾತೀತವಾಗಿ ನನ್ನನ್ನು ಈ ಕ್ಷೇತ್ರದ ಜನರು…