ದೇಶ- ವಿದೇಶ

ಇಂದಿರಾಗಾಂಧಿ ತ್ಯಾಗದ ಮುಂದೆ ನಮ್ಮದೇನು ಇಲ್ಲ : ಖರ್ಗೆ ಭಾವುಕ ನುಡಿ

ಹೊಸದಿಲ್ಲಿ : ಇಂದು ನನ್ನ ಮಗನಿಗೆ ಎಂಟು ಗಂಟೆಯ ಆಪರೇಷನ್‌ ಇತ್ತು. ಪತ್ನಿ, ಮಗಳು ಎಲ್ಲರೂ ಫೋನ್‌ ಮಾಡಿ ಬಹಳ ಮುಖ್ಯವಾದ ಆಪರೇಷನ್‌, ಬರಲೇಬೇಕು ಅಂತ ಹೇಳಿದ್ದಾರೆ. . ನಾನು ಅದಕ್ಕೆ ಗಡಿಯಲ್ಲಿ ಸೈನಿಕರು ಜೀವ ಬಲಿ ಕೊಡ್ತಿದ್ದಾರೆ. ಇಂದಿರಾ ಗಾಂಧಿ, ರಾಜೀವ್‌ ಗಾಂಧಿ ದೇಶಕ್ಕಾಗಿ ಪ್ರಾಣತ್ಯಾಗ ಮಾಡಿದ್ರು. ಅವರ ತ್ಯಾಗದ ಮುಂದೆ ನಮ್ಮದೇನು? ಅಂತ ಹೇಳಿ ದೇಶಕ್ಕಾಗಿ ನಾನು ಇಲ್ಲಿಯೇ ಉಳಿದೆ.. ʻವೋಟ್‌ ಚೋರಿʼ ಸಮಾವೇಶದಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಆಡಿದ ಭಾವುಕ ನುಡಿಗಳಿವು.

ದೆಹಲಿಯ ರಾಮಲೀಲಾ ಮೈದಾನದಲ್ಲಿ ನಡೆದ ಬೃಹತ್ ಸಮಾವೇಶ ಬೃಹತ್‌ ಸಮಾವೇಶವನ್ನುದ್ದೇಶಿಸಿ ಮಾತನಾಡಿದ ಅವರು, ನಮ್ಮ ಮಗನಿಗೆ ಏನಾದ್ರೂ ಪರ್ವಾಗಿಲ್ಲ ಅಂತ, ದೇಶದ 140 ಕೋಟಿ ಜನರಿಗಾಗಿ ನಾನು ಇಲ್ಲೇ ಉಳಿಯಲು ನಿರ್ಧರಿಸಿದೆ ಎಂದರು.

ಮೋದಿ ಸೋತ್ರೆ ಅವರ ಹೆಸರು ಎಲ್ಲೂ ಇರಲ್ಲ
ಮುಂದುವರಿದು ಮಾತನಾಡಿದ ಅವರು, ನಾವು ಸೋತಿದ್ದೇವೆ, ಆದ್ರೆ ನಮ್ಮ ಸಿದ್ಧಾಂತ ಬದುಕಿದೆ. ಮೋದಿ ಒಮ್ಮೆ ಸೋತರೆ ಅವರ ಹೆಸರೂ ಎಲ್ಲೂ ಇರಲ್ಲ. ನಾವು 10 ಬಾರಿ ಸೋತರೂ ಬದುಕಿದ್ದೇವೆ, ಹೋರಾಟಕ್ಕೆ ಸಿದ್ಧರಿದ್ದೇವೆ. ವಂದೇ ಮಾತರಂ ಕೂಡ ನಮ್ಮಿಂದ ಕದ್ದಿದ್ದಾರೆ. ಆ ಕಳ್ಳರ ಬಗ್ಗೆ ಎಚ್ಚರಿಕೆಯಿಂದ ಇರಿ ಎಂದು ಕಿವಿಮಾತು ಹೇಳಿದರು.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಬಂಡಾಯದ ಹೊಳೆ

ಬಂಡಾಯದ ಹೊಳೆ ಮಿಂಚು ಹೂಮಳೆ ! ಅತಿವೃಷ್ಟಿ,ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ, ಕಾರಣ,…

14 hours ago

ಓದುಗರ ಪತ್ರ: ಆತಂಕಕಾರಿ ವಿಚಾರ

ರಾಜ್ಯದಲ್ಲಿ ಎಂಟು ಸಾವಿರಕ್ಕೂ ಅಧಿಕ ಪೋಕ್ಸೊ ಪ್ರಕರಣಗಳು ದಾಖಲಾಗಿವೆ ಎಂದು ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ನ್ಯಾಯಮೂರ್ತಿ…

14 hours ago

ಓದುಗರ ಪತ್ರ: ಜ್ಞಾಪಿಸಿಕೊಳ್ಳಬೇಕಿತ್ತು, ಕೃತಜ್ಞತೆ ಹೇಳಬೇಕಿತ್ತು…

ಮೈಸೂರಿನ ನಾರಾಯಣ ಶಾಸಿ ರಸ್ತೆಯಲ್ಲಿ, ಕಳೆದ ಶನಿವಾರ ಪ್ರಧಾನಿ ನರೇಂದ್ರ ಮೋದಿ ಅವರಿಂದ ಉದ್ಘಾಟನೆಗೊಂಡ ವಿವೇಕ ಸ್ಮಾರಕದ ಜಗವು ಕೆಲವು…

14 hours ago

ಮನುಕುಲದ ಏರಿಳಿತಗಳಿಗೆ ಸಾಕ್ಷಿದಾರರಾದ ಈ ಪೀಳಿಗೆಗಳು

ಶುಭಾ ಖಟಾವಕರ ಮ್ಹೆತ್ರಸ್ ಹೊಸ ಇತಿಹಾಸ ಸೃಷ್ಟಿಸಿದ ‘ಜೆನ್ ಝೀ’ ಪೀಳಿಗೆ ಸಂಪ್ರದಾಯಗಳನ್ನು ಪ್ರಶ್ನಿಸಿದ ‘ಬೂಮರ್ಸ್’ ಯುವಜನ ೧೯೦೦ ರಿಂದ…

14 hours ago

ನನೆಗುದಿಗೆ ಬಿದ್ದ ರಾಜ್‌ಘಾಟ್ ಮಾದರಿ ಗಾಂಧಿ ಸ್ಮಾರಕ

ಪುನೀತ್ ೩ ವರ್ಷ ಕಳೆದರೂ ಮುಗಿಯದ ಕಾಮಗಾರಿ: ಶೀಘ್ರ ಪೂರ್ಣಗೊಳಿಸಲು ಒತ್ತಾಯ ಮಡಿಕೇರಿ: ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಭಾಷಣ ಮಾಡಿದ್ದ…

14 hours ago

ಅನಿಲ್ ಚಿಕ್ಕಮಾದುಗೆ ಕೈತಪ್ಪಿದ ಸಚಿವ ಸ್ಥಾನ; ಕ್ಷೇತ್ರದ ಜನರಿಗೆ ನಿರಾಸೆ

ಮಂಜು ಕೋಟೆ ಕೋಟೆ: ಸಚಿವ ಸ್ಥಾನ ದೊರೆತಿದ್ದರೆ ಹಿಂದುಳಿದ ಕ್ಷೇತ್ರದ ಅಭಿವೃದ್ಧಿಯಾಗುತ್ತಿತ್ತು ಎಂಬ ನಿರೀಕ್ಷೆ ಎಚ್.ಡಿ.ಕೋಟೆ: ಮೈಸೂರು ಪ್ರಾಂತ್ಯದ ನಾಯಕ…

14 hours ago