ದೇಶ- ವಿದೇಶ

ಮಾನವೀಯತೆಗಾಗಿ ಸೇವೆ ಸಲ್ಲಿಸುವ ಪ್ರಾಮಾಣಿಕ ನಾಗರಿಕರು ನಾವಾಗಬೇಕು: ವಕೀಲರಿಗೆ ನ್ಯಾ. ಖಾನ್ವಿಲ್ಕರ್ ಕಿವಿಮಾತು

ನವದೆಹಲಿ: ವೃತ್ತಿ ಜೀವನದಲ್ಲಿ ವಕೀಲರು ಪ್ರಾಮಾಣಿಕರಾಗಿರಬೇಕು ಮತ್ತು ಮಾನವೀಯತೆಗಾಗಿ ಸೇವೆ ಸಲ್ಲಿಸಬೇಕು ಎಂದು ಸುಪ್ರೀಂ ಕೋರ್ಟ್‌ ನಿವೃತ್ತ ನ್ಯಾಯಮೂರ್ತಿ ಎ ಎಂ ಖಾನ್ವಿಲ್ಕರ್‌ ತಿಳಿಸಿದರು.

ನ್ಯಾಯಮೂರ್ತಿ ಖಾನ್ವಿಲ್ಕರ್‌ ಸೇವೆಯಿಂದ ನಿವೃತ್ತರಾಗಿದ್ದ ಹಿನ್ನೆಲೆಯಲ್ಲಿ ಅವರಿಗೆ ರಾಷ್ಟ್ರೀಯ ಕಾನೂನು ವಿವಿಗಳ ಪ್ರತಿಷ್ಠಾನದ ಹಳೆ ವಿದ್ಯಾರ್ಥಿಗಳ ಒಕ್ಕೂಟ (ಸಿಎಎನ್‌) ನವದೆಹಲಿಯ ಸುಬ್ರೊತೊ ಪಾರ್ಕ್‌ನಲ್ಲಿರುವ ಏರ್ ಫೋರ್ಸ್ ಆಡಿಟೋರಿಯಂನಲ್ಲಿ ಬೀಳ್ಕೊಡುಗೆ ಕಾರ್ಯಕ್ರಮ ಹಮ್ಮಿಕೊಂಡಿತ್ತು. ಈ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು ಕಾನೂನು ಶಿಕ್ಷಣವು ಸಕಾರಾತ್ಮಕ ಸಾಮಾಜಿಕ ಬದಲಾವಣೆಯ ಸಾಧನವಾಗಿದೆ ಮತ್ತು ವಿಫುಲ ಅವಕಾಶಗಳನ್ನು ಒದಗಿಸುತ್ತದೆ ಎಂದರು.

“ವೃತ್ತಿ ಜೀವನದಲ್ಲಿ ನಾವು ಪ್ರಾಮಾಣಿಕ, ಗೌರವಾನ್ವಿತ, ಕಷ್ಟಪಟ್ಟು ದುಡಿಯುವ, ಮಾನವೀಯತೆಗಾಗಿ ಸೇವೆ ಸಲ್ಲಿಸುವ ನಾಗರಿಕರಾಗಬೇಕು. ಮಾನವೀಯತೆ, ಸಹಾನುಭೂತಿ ಮಾತ್ರವಲ್ಲದೆ ಕಠಿಣ ಸಂದರ್ಭಗಳು ಎದುರಾದಾಗ ಅದನ್ನು ಎದುರಿಸಲು ಸಮರ್ಥರಾಗಿರಬೇಕು ಎಂಬುದನ್ನು ಸದಾ ನೆನಪಿನಲ್ಲಿಟ್ಟುಕೊಳ್ಳಬೇಕು. ವಕೀಲ ವೃತ್ತಿಯಲ್ಲಿನ ನಮ್ಮ ಯಾನ ತೀರ್ಥಯಾತ್ರೆಯ ರೀತಿಯದ್ದು ಎಂಬುದು ನನಗೆ ಅರ್ಥವಾಗಿದೆ ಎಂದು ಅವರು ಹೇಳಿದರು.

ಕಾನೂನು ಅಧ್ಯಯನ ದುಸ್ಸಾಹಸದಿಂದ ಕೂಡಿದ್ದರೂ ವಕೀಲಿ ವೃತ್ತಿ ಪ್ರತಿಷ್ಠಿತ ಎಂದು ಮನ್ನಣೆ ಪಡೆದಿದ್ದು ಹಲವು ಮಾರ್ಗೋಪಯಗಳನ್ನು ತೆರೆದಿಡುತ್ತದೆ. ವಕೀಲಿಕೆ, ನ್ಯಾಯಾಂಗ ಸೇವೆಯ ಸದಸ್ಯರಾಗುವುದರಿಂದ ಹಿಡಿದು ಕಾನೂನು ವಿದ್ವಾಂಸರಾಗುವವರೆಗೆ ಅವಕಾಶಗಳು ಅನಂತವಾಗಿರುತ್ತವೆ ಎಂದು ಅವರು ಹೇಳಿದರು.

ಭಾರತದಲ್ಲಿ ಹುಟ್ಟಿರುವುದು ನನ್ನ ಅದೃಷ್ಟ ಎಂದು ಭಾವಿಸುವೆ. ನಮ್ಮ ಸಮಾಜದ ವೈವಿಧ್ಯತೆಯ ಗುಣಗಳನ್ನು ಗುರುತಿಸಿ ಅದನ್ನು ಆಚರಿಸುವ ಅಗತ್ಯವಿದೆ. ಚಿಂತನೆ, ಅಭಿವ್ಯಕಿ, ಆರಾಧನೆಯ ಸ್ವರೂಪ, ಭಾಷೆ, ಪ್ರದೇಶ, ಜನಾಂಗೀಯತೆ ಹಾಗೂ ಅವಕಾಶಗಳಲ್ಲಿರುವ ವೈವಿಧ್ಯಮಯತೆ ನಮ್ಮ ದೇಶವನ್ನು ನಾಗರಿಕತೆಗಳ ಸಮ್ಮಿಲನದ ಕುಂಡವಾಗಿದೆ. ನಾವು ವೈವಿಧ್ಯತೆಯನ್ನು ಆಚರಿಸಲು ಕಿಯಬೇಕು. ಆಗ ಮಾತ್ರ ನಾವು ಸರಿಯಾದ ದಿಕ್ಕಿನಲ್ಲಿ ಕೊಡುಗೆ ನೀಡಬಹುದು” ಎಂದು ಅವರು ಹೇಳಿದರು.

ಕಾರ್ಯಕ್ರಮದಲ್ಲಿ ಸರ್ವೋಚ್ಚ ನ್ಯಾಯಾಲಯದ ನ್ಯಾಯಮೂರ್ತಿಗಳಾದ ಬಿ ಆರ್ ಗವಾಯಿ, ಎ ಎಸ್ ಓಕಾ ಹಾಗೂ ವಿಕ್ರಮ್ ನಾಥ್ ಮತ್ತಿತರರು ಉಪಸ್ಥಿತರಿದ್ದರು.

andolana

Recent Posts

ತಿರುಪತಿ ಲಡ್ಡು: ತುಪ್ಪದಲ್ಲಿ ಪ್ರಾಣಿ ಕೊಬ್ಬು ಬಳಕೆ

ಅಮರಾವತಿ: ಜಗತ್‌ ಪ್ರಸಿದ್ಧ ತಿರುಪತಿ ಲಡ್ಡು ಪ್ರಸಾದದಲ್ಲಿ ಪ್ರಾಣಿಗಳ ಕೊಬ್ಬು ಹಾಗೂ ಕಳಪೆ ಗುಣಮಟ್ಟದ ಪದಾರ್ಥಗಳು ಪತ್ತೆಯಾಗಿದೆ ಎಂದು ತೆಲುಗು…

27 mins ago

ಬುರ್ಖಾಧಾರಿ ಮಹಿಳೆಯಿಂದ ಸಲ್ಮಾನ್‌ ಖಾನ್‌ ತಂದೆಗೆ ಜೀವ ಬೆದರಿಕೆ: ಮಹಿಳೆ ಸೇರಿ ಇಬ್ಬರ ಬಂಧನ

ಮುಂಬೈ:‌ ಬಾಲಿವುಡ್‌ನ ಭಾಯಿಜಾನ್ ಸಲ್ಮಾನ್‌ ಖಾನ್‌ ಅವರ ತಂದೆಗೆ ಬುರ್ಖಾ ಧರಿಸಿದ್ದ ಮಹಿಳೆ ಹಾಗೂ ಇನ್ನೊರ್ವ ವ್ಯಕ್ತಿ ಜೀವ ಬೆದರಿಕೆ…

53 mins ago

ಶಾಸಕ ಮುನಿರತ್ನಗೆ ಜಾಮೀನು: ಅತ್ಯಾಚಾರ ಪ್ರಕರಣದಲ್ಲಿ ಮತ್ತೆ ಬಂಧನ ಸಾಧ್ಯತೆ

ಬೆಂಗಳೂರು: ಗುತ್ತಿಗೆದಾರರೊಬ್ಬರಿಗೆ ಜಾತಿನಿಂದನೆ ಹಾಗೂ ಪ್ರಾಣ ಬೆದರಿಕೆ ಹಾಕಿದ ಪ್ರಕರಣದಲ್ಲಿ ಬೆಂಗಳೂರಿನ ರಾಜರಾಜೇಶ್ವರಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಮುನಿರತ್ನಗೆ…

2 hours ago

ನುಡಿ ಹಬ್ಬಕ್ಕೆ ಆಹ್ವಾನಿಸಲು ಸಿದ್ಧವಾಗಿದೆ ಕನ್ನಡ ರಥ

ಮಂಡ್ಯ: ಜಿಲ್ಲೆಯಲ್ಲಿ ಡಿಸೆಂಬರ್ 20, 21, 22 ರಂದು ನಡೆಯಲಿರುವ 87 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ…

2 hours ago

ಬಸ್‌ನಲ್ಲಿ ಪ್ರಯಾಣ: ಮಹಿಳೆಯರಿಂದ ಶಕ್ತಿಯೋಜನೆಯ ಅಭಿಪ್ರಾಯ ಪಡೆದ ಪುಷ್ಪ ಅಮರನಾಥ್‌

ಮೈಸೂರು: ರಾಜ್ಯ ಸರ್ಕಾರದ ಮಹತ್ವಕಾಂಕ್ಷೆ ಯೋಜನೆಗಳಲ್ಲಿ ಒಂದಾದ ಶಕ್ತಿಯೋಜನೆ ಫಲಾನುಭವಿಗಳ ಅಭಿಪ್ರಾಯ ಸಂಗ್ರಹಿಸಲು ಗ್ಯಾರಂಟಿ ಅನುಷ್ಠಾನ ಸಮಿತಿ ಉಪಾಧ್ಯಕ್ಷೆಯಾದ ಡಾ…

2 hours ago

ಕರ್ನಾಟಕ ಪಬ್ಲಿಕ್ ಶಾಲೆಗೆ ಮೇಲ್ದರ್ಜೇಗೇರಿಸಲು ಅಗತ್ಯ ಕ್ರಮ: ʻಜಿಟಿಡಿʼ

ಮೈಸೂರು: ಬಡವರ ಮಕ್ಕಳೇ ಸರ್ಕಾರಿ ಶಾಲೆಗಳಲ್ಲಿ ಹೆಚ್ಚಾಗಿ ವ್ಯಾಸಂಗ ಮಾಡುವ ಕಾರಣ ಶಾಲೆಗಳ ಅಭಿವೃದ್ಧಿ ಶಿಕ್ಷಕರ ಮೇಲಿದೆ. ಕ್ಷೇತ್ರದಲ್ಲಿ ಬರುವ…

3 hours ago