ದೇಶ- ವಿದೇಶ

ಮಾನವೀಯತೆಗಾಗಿ ಸೇವೆ ಸಲ್ಲಿಸುವ ಪ್ರಾಮಾಣಿಕ ನಾಗರಿಕರು ನಾವಾಗಬೇಕು: ವಕೀಲರಿಗೆ ನ್ಯಾ. ಖಾನ್ವಿಲ್ಕರ್ ಕಿವಿಮಾತು

ನವದೆಹಲಿ: ವೃತ್ತಿ ಜೀವನದಲ್ಲಿ ವಕೀಲರು ಪ್ರಾಮಾಣಿಕರಾಗಿರಬೇಕು ಮತ್ತು ಮಾನವೀಯತೆಗಾಗಿ ಸೇವೆ ಸಲ್ಲಿಸಬೇಕು ಎಂದು ಸುಪ್ರೀಂ ಕೋರ್ಟ್‌ ನಿವೃತ್ತ ನ್ಯಾಯಮೂರ್ತಿ ಎ ಎಂ ಖಾನ್ವಿಲ್ಕರ್‌ ತಿಳಿಸಿದರು.

ನ್ಯಾಯಮೂರ್ತಿ ಖಾನ್ವಿಲ್ಕರ್‌ ಸೇವೆಯಿಂದ ನಿವೃತ್ತರಾಗಿದ್ದ ಹಿನ್ನೆಲೆಯಲ್ಲಿ ಅವರಿಗೆ ರಾಷ್ಟ್ರೀಯ ಕಾನೂನು ವಿವಿಗಳ ಪ್ರತಿಷ್ಠಾನದ ಹಳೆ ವಿದ್ಯಾರ್ಥಿಗಳ ಒಕ್ಕೂಟ (ಸಿಎಎನ್‌) ನವದೆಹಲಿಯ ಸುಬ್ರೊತೊ ಪಾರ್ಕ್‌ನಲ್ಲಿರುವ ಏರ್ ಫೋರ್ಸ್ ಆಡಿಟೋರಿಯಂನಲ್ಲಿ ಬೀಳ್ಕೊಡುಗೆ ಕಾರ್ಯಕ್ರಮ ಹಮ್ಮಿಕೊಂಡಿತ್ತು. ಈ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು ಕಾನೂನು ಶಿಕ್ಷಣವು ಸಕಾರಾತ್ಮಕ ಸಾಮಾಜಿಕ ಬದಲಾವಣೆಯ ಸಾಧನವಾಗಿದೆ ಮತ್ತು ವಿಫುಲ ಅವಕಾಶಗಳನ್ನು ಒದಗಿಸುತ್ತದೆ ಎಂದರು.

“ವೃತ್ತಿ ಜೀವನದಲ್ಲಿ ನಾವು ಪ್ರಾಮಾಣಿಕ, ಗೌರವಾನ್ವಿತ, ಕಷ್ಟಪಟ್ಟು ದುಡಿಯುವ, ಮಾನವೀಯತೆಗಾಗಿ ಸೇವೆ ಸಲ್ಲಿಸುವ ನಾಗರಿಕರಾಗಬೇಕು. ಮಾನವೀಯತೆ, ಸಹಾನುಭೂತಿ ಮಾತ್ರವಲ್ಲದೆ ಕಠಿಣ ಸಂದರ್ಭಗಳು ಎದುರಾದಾಗ ಅದನ್ನು ಎದುರಿಸಲು ಸಮರ್ಥರಾಗಿರಬೇಕು ಎಂಬುದನ್ನು ಸದಾ ನೆನಪಿನಲ್ಲಿಟ್ಟುಕೊಳ್ಳಬೇಕು. ವಕೀಲ ವೃತ್ತಿಯಲ್ಲಿನ ನಮ್ಮ ಯಾನ ತೀರ್ಥಯಾತ್ರೆಯ ರೀತಿಯದ್ದು ಎಂಬುದು ನನಗೆ ಅರ್ಥವಾಗಿದೆ ಎಂದು ಅವರು ಹೇಳಿದರು.

ಕಾನೂನು ಅಧ್ಯಯನ ದುಸ್ಸಾಹಸದಿಂದ ಕೂಡಿದ್ದರೂ ವಕೀಲಿ ವೃತ್ತಿ ಪ್ರತಿಷ್ಠಿತ ಎಂದು ಮನ್ನಣೆ ಪಡೆದಿದ್ದು ಹಲವು ಮಾರ್ಗೋಪಯಗಳನ್ನು ತೆರೆದಿಡುತ್ತದೆ. ವಕೀಲಿಕೆ, ನ್ಯಾಯಾಂಗ ಸೇವೆಯ ಸದಸ್ಯರಾಗುವುದರಿಂದ ಹಿಡಿದು ಕಾನೂನು ವಿದ್ವಾಂಸರಾಗುವವರೆಗೆ ಅವಕಾಶಗಳು ಅನಂತವಾಗಿರುತ್ತವೆ ಎಂದು ಅವರು ಹೇಳಿದರು.

ಭಾರತದಲ್ಲಿ ಹುಟ್ಟಿರುವುದು ನನ್ನ ಅದೃಷ್ಟ ಎಂದು ಭಾವಿಸುವೆ. ನಮ್ಮ ಸಮಾಜದ ವೈವಿಧ್ಯತೆಯ ಗುಣಗಳನ್ನು ಗುರುತಿಸಿ ಅದನ್ನು ಆಚರಿಸುವ ಅಗತ್ಯವಿದೆ. ಚಿಂತನೆ, ಅಭಿವ್ಯಕಿ, ಆರಾಧನೆಯ ಸ್ವರೂಪ, ಭಾಷೆ, ಪ್ರದೇಶ, ಜನಾಂಗೀಯತೆ ಹಾಗೂ ಅವಕಾಶಗಳಲ್ಲಿರುವ ವೈವಿಧ್ಯಮಯತೆ ನಮ್ಮ ದೇಶವನ್ನು ನಾಗರಿಕತೆಗಳ ಸಮ್ಮಿಲನದ ಕುಂಡವಾಗಿದೆ. ನಾವು ವೈವಿಧ್ಯತೆಯನ್ನು ಆಚರಿಸಲು ಕಿಯಬೇಕು. ಆಗ ಮಾತ್ರ ನಾವು ಸರಿಯಾದ ದಿಕ್ಕಿನಲ್ಲಿ ಕೊಡುಗೆ ನೀಡಬಹುದು” ಎಂದು ಅವರು ಹೇಳಿದರು.

ಕಾರ್ಯಕ್ರಮದಲ್ಲಿ ಸರ್ವೋಚ್ಚ ನ್ಯಾಯಾಲಯದ ನ್ಯಾಯಮೂರ್ತಿಗಳಾದ ಬಿ ಆರ್ ಗವಾಯಿ, ಎ ಎಸ್ ಓಕಾ ಹಾಗೂ ವಿಕ್ರಮ್ ನಾಥ್ ಮತ್ತಿತರರು ಉಪಸ್ಥಿತರಿದ್ದರು.

andolana

Recent Posts

ಪಾಕ್‌ನಿಂದ ಆಫ್ಗಾನಿಸ್ತಾನದ ಮೇಲೆ ವಾಯು ದಾಳಿ ; 13 ಮಂದಿ ಸಾವು; 14 ಮಂದಿಗೆ ಗಾಯ

ಕಾಬೂಲ್ : ಪಾಕಿಸ್ತಾನವು ಬುಧವಾರ ನಡೆಸಿದ ಹೊಸ ವಾಯುದಾಳಿಗಳಲ್ಲಿ ಕನಿಷ್ಠ 13 ಮಂದಿ ಸಾವನ್ನಪ್ಪಿದ್ದಾರೆ ಎಂದು ಅಫ್ಘಾನಿಸ್ತಾನ ತಿಳಿಸಿದೆ. ಪಾಕ್…

1 hour ago

ಭಾರತಿರಾಜ್‌ ಅಂತಿಮ ದರ್ಶನ ಪಡೆದ ರಜನಿ, ಕಮಲ್‌, ಸಿ.ಎಂ.ವಿಜಯ್‌

ಚೆನ್ನೈ : ತಮಿಳಿನ ಖ್ಯಾತ ನಿರ್ದೇಶಕ, ಪದ್ಮಶ್ರೀ ಭಾರತಿರಾಜ್ ನಿಧನಕ್ಕೆ ಹೆಸರಾಂತ ನಟರು ಕಂಬನಿ ಮಿಡಿದಿದ್ದಾರೆ. ಅವರ ಅಂತಿಮ ದರ್ಶನಕ್ಕೆ…

4 hours ago

ಎಚ್.ಸಿ.ಮಹದೇವಪ್ಪನವರಿಗೆ ಸಚಿವ ಸ್ಥಾನಕ್ಕೆ ದಲಿತ ಸಂಘಟನೆಗಳ ಆಗ್ರಹ

ವರುಣ : ಮಾಜಿ ಸಚಿವ ಡಾ.ಎಚ್.ಸಿ.ಮಹದೇವಪ್ಪನವರಿಗೆ ಸಚಿವ ಸ್ಥಾನ ನೀಡಬೇಕು ಎಂದು ವರುಣ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ದಲಿತ ಸಂಘಟನೆಗಳ…

4 hours ago

ಕೇಂದ್ರದ ಮೇಲೆ ಗೂಬೆ ಕೂರಿಸುವ ಕೆಲಸ ಬಿಟ್ಟು ಬೇರೇನೂ ಮಾಡಲಿಲ್ಲ ಸಿದ್ದರಾಮಯ್ಯ: ಟೀಕೆ

ಮೈಸೂರು : ರಾಜ್ಯದ ನೂತನ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹಾಗೂ ಸಚಿವರು ಕೇಂದ್ರ ಸರ್ಕಾರದೊಂದಿಗೆ ಸೌಹಾರ್ದದಿಂದ ಸಂಪರ್ಕ ಸಾಧಿಸಿ ರಾಜ್ಯದ ಅಭಿವೃದ್ಧಿ…

4 hours ago

ರಾಜ್ಯಸಭಾ ಸ್ಥಾನ ಕೇಳಿಲ್ಲ, ಚರ್ಚೆಯೂ ನಡೆಸಿಲ್ಲ: ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ

ಬೆಂಗಳೂರು: ರಾಜ್ಯಸಭಾ ಸ್ಥಾನಕ್ಕೆ ಟಿಕೆಟ್‌ ತಪ್ಪಿದೆ ಎಂಬ ಕಾರಣದಿಂದ ನನ್ನ ಮತ್ತು ಪ್ರಧಾನಿ ನರೇಂದ್ರ ಮೋದಿ ಅವರ ನಡುವಿನ ಸಂಬಂಧ…

7 hours ago

ಖ್ಯಾತ ತಮಿಳು ನಿರ್ದೇಶಕ, ನಟ ಭಾರತಿರಾಜ ನಿಧನ

ಚೆನ್ನೈ: ರಾಷ್ಟ್ರಪ್ರಶಸ್ತಿ ವಿಜೇತ ಖ್ಯಾತ ತಮಿಳು ನಿರ್ದೇಶಕ, ನಟ ಭಾರತಿರಾಜ ಇಂದು ವಿಧಿವಶರಾಗಿದ್ದಾರೆ. ಅವರಿಗೆ 84 ವರ್ಷ ವಯಸ್ಸಾಗಿತ್ತು. ಕೆಲ…

10 hours ago