ನವದೆಹಲಿ: ಸರ್ಕಾರದ ಕ್ರಮಗಳಿಂದ ನಕ್ಸಲ್ ಪೀಡಿತ ಜಿಲ್ಲೆಗಳ ಸಂಖ್ಯೆ 125ರಿಂದ 11ಕ್ಕೆ ಇಳಿದಿದ್ದು, 300ಕ್ಕೂ ಹೆಚ್ಚು ಮಾವೋವಾದಿಗಳು ಶರಣಾಗಿದ್ದಾರೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.
ಈ ಕುರಿತು ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಅವರು, ನಕ್ಸಲಿಸಂನ್ನು ಕೆಂಪು ಭಯೋತ್ಪಾದನೆ ಎಂದು ಕರೆದ ಅವರು, ಈ ಕೆಂಪು ಭಯೋತ್ಪಾದನೆಯನ್ನು ನಾಶ ಮಾಡುವ ದಿನ ದೂರವಿಲ್ಲ. ನಕ್ಸಲಿಸಂ ದೇಶದ ವಿರುದ್ಧದ ಪಾಪ ಎಂದು ಹೇಳಿದ್ದಾರೆ. ಮಾವೋವಾದಿ ಉಗ್ರವಾದವು ಭಾರತದ ಯುವಕರಿಗೆ ಮಾಡಿದ ಅನ್ಯಾಯ, ಅದನ್ನು ಸಂಪೂರ್ಣವಾಗಿ ತೊಡೆದು ಹಾಕುವುದೇ ನಮ್ಮ ಸರ್ಕಾರದ ದೃಢಸಂಕಲ್ಪ ಎಂದು ಹೇಳಿದ್ದಾರೆ.
ಇದನ್ನು ಓದಿ: ಛತ್ತೀಸ್ಗಢದಲ್ಲಿ ಎನ್ಕೌಂಟರ್: 16 ನಕ್ಸಲರ ಹತ್ಯೆ
ಇನ್ನು ಪಹಲ್ಗಾಮ್ನಲ್ಲಿ ಭಾರತೀಯರನ್ನು ಹತ್ಯೆ ಮಾಡಿದ್ದಕ್ಕಾಗಿ ಪಾಕಿಸ್ತಾನ ಹಾಗೂ ಭಯೋತ್ಪಾದಕರಿಗೆ ಆಪರೇಷನ್ ಸಿಂಧೂರ್ ಮೂಲಕ ಉತ್ತರ ನೀಡಿದ್ದೇವೆ. ದೇಶವು ಗಡಿಯಾಚೆಗಿನ ಬೆದರಿಕೆಗಳನ್ನು ನಾಶ ಮಾಡಲು ಹಲವು ಕ್ರಮಗಳನ್ನು ತೆಗೆದುಕೊಂಡಿದ್ದೇವೆ ಎಂದು ಹೇಳಿದರು.
ಭಾರತವು ಈಗ ಚಿಪ್ಗಳಿಂದ ಹಿಡಿದು ಹಡಗುಗಳಿಗೆ ಎಲ್ಲವನ್ನೂ ತಯಾರಿಸುತ್ತಿದೆ. ಸ್ವಾವಲಂಬನೆ ಮೂಲಕ ಭಾರತ ಪ್ರಗತಿ ಸಾಧಿಸುತ್ತಿದೆ. ಜೊತೆಗೆ ಈಗಾಗಲೇ ವಿಶ್ವದ ಅತ್ಯಂತ ವೇಗವಾಗಿ ಬೆಳಯುತ್ತಿರುವ ಆರ್ಥಿಕತೆ ರಾಷ್ಟ್ರಗಳಲ್ಲಿ ಒಂದಾಗಿದೆ ಎಂದು ಹೇಳಿದರು.
ಈಗಾಗಲೇ 75 ಗಂಟೆಗಳಲ್ಲಿ ಶಸ್ತ್ರಾಸ್ತ್ರಗಳನ್ನು ತ್ಯಜಿಸಿ, ಸರ್ಕಾರ ನೀಡಿದ ಅಂತಿಮ ಸೂಚನೆಯ ನಂತರ 308ಕ್ಕೂ ಹೆಚ್ಚು ಕಟ್ಟಾ ಮಾವೋವಾದಿ ಕಾರ್ಯಕರ್ತರು ಶರಣಾಗತಿಯಾಗಿದ್ದಾರೆ. ಇನ್ನು ದೇಶದಲ್ಲಿರುವ ಅನೇಕ ಜಿಲ್ಲೆಗಳು ಮಾವೋವಾದಿ ಪೀಡಿತದಿಂದ ಮುಕ್ತವಾಗುತ್ತಿದೆ. ಸುಮಾರು 11 ವರ್ಷಗಳ ಹಿಂದೆ 125 ಜಿಲ್ಲೆಗಳು ಮಾವೋವಾದಿ ಹಿಂಸಾಚಾರಕ್ಕೆ ಒಳಗಾಗಿತ್ತು. ಆದರೆ ಇದೀಗ ಇದು 11ಕ್ಕೆ ಇಳಿದಿದೆ ಎಂದು ಹೇಳಿದ್ದಾರೆ.
ಮೈಸೂರು: ಫಲವತ್ತಾದ ಕೃಷಿ ಭೂಮಿಯನ್ನು ಉಳಿಸಿಕೊಳ್ಳುವ ಆಕಾಂಕ್ಷೆ ಪ್ರಭುತ್ವಕ್ಕೆ ಇರಬೇಕು. ಭೂಮಿ ನೀಡುವ ರೈತರ ಬದುಕಿನ ಹೊಣೆಗಾರಿಕೆಯನ್ನು ಸರ್ಕಾರ ವಹಿಸಿಕೊಳ್ಳುತ್ತದೆಯೇ…
ಮೈಸೂರು : ಶಾಲಾ ಶಿಕ್ಷಣ ಇಲಾಖೆಯ ಜಿಪಿಎಸ್ಟಿಆರ್ ಹಾಗೂ ಎಚ್ಎಸ್ಟಿಆರ್ ಶಿಕ್ಷಕರ ನೇಮಕಾತಿಯಲ್ಲಿ ಕನ್ನಡ ಭಾಷಾ ಶಿಕ್ಷಕರ ಹುದ್ದೆಗಳನ್ನು ಪ್ರತ್ಯೇಕವಾಗಿ…
ಬೆಂಗಳೂರು: ಗುಟ್ಕಾ ನಿಷೇಧ ಆದೇಶವನ್ನು ರಾಜ್ಯ ಸರ್ಕಾರ ಶೀಘ್ರದಲ್ಲೇ ವಾಪಸ್ ಪಡೆಯುವ ಸಾಧ್ಯತೆಯಿದೆ. ಆಡಳಿತರೂಢ ಕಾಂಗ್ರೆಸ್ ಶಾಸಕರಿಂದಲೇ ಸರ್ಕಾರದ ನಿರ್ಧಾರಕ್ಕೆ…
ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲ ತಾಲ್ಲೂಕಿನ ಶಿವಗಂಗೆ ಬೆಟ್ಟದಲಲಿ ಟ್ರೆಕ್ಕಿಂಗ್ಗೆ ತೆರಳಿ ನಾಪತ್ತೆಯಾಗಿದ್ದ ಟೆಕ್ಕಿ ಟದ್ವೈತ್ಗಾಗಿ ನಡೆಸುತ್ತಿದ್ದ ಶೋಧ ಕಾರ್ಯಾಚರಣೆಗೆ…
ಬೆಂಗಳೂರು: ವಿಧಾನಸಭೆಯ ನೂತನ ಸ್ಪೀಕರ್ ಆಗಿ ಜಿ.ಎಸ್.ಪಾಟೀಲ್ ಸರ್ವಾನುಮತದಿಂದ ಆಯ್ಕೆಯಾದರು. ಸಂಪ್ರದಾಯದಂತೆ ವಿಪಕ್ಷ ನಾಯಕ ಆರ್.ಅಶೋಕ್ ಹಾಗೂ ಸಿಎಂ ಡಿ.ಕೆ.ಶಿವಕುಮಾರ್…
ಡೆಹ್ರಾಡೂನ್: ಉತ್ತರಾಖಂಡದ ಚಮೋಲಿ ಜಿಲ್ಲೆಯಲ್ಲಿ ನಿರ್ಮಾಣ ಹಂತದಲ್ಲಿದ್ದ ಜಲವಿದ್ಯುತ್ ಯೋಜನೆಗೆ ಸಂಬಂಧಿಸಿದ ಸುರಂಗದೊಳಗೆ ಏಕಾಏಕಿ ನೀರು ಮತ್ತು ಮಣ್ಣಿನ ಅವಶೇಷಗಳು…