ದೇಶ- ವಿದೇಶ

ಭಾರತದಲ್ಲಿರುವ ನಕ್ಸಲಿಸಂ ಸಂಪೂರ್ಣ ನಾಶ ಮಾಡುತ್ತೇವೆ: ಪ್ರಧಾನಿ ನರೇಂದ್ರ ಮೋದಿ

ನವದೆಹಲಿ: ಸರ್ಕಾರದ ಕ್ರಮಗಳಿಂದ ನಕ್ಸಲ್‌ ಪೀಡಿತ ಜಿಲ್ಲೆಗಳ ಸಂಖ್ಯೆ 125ರಿಂದ 11ಕ್ಕೆ ಇಳಿದಿದ್ದು, 300ಕ್ಕೂ ಹೆಚ್ಚು ಮಾವೋವಾದಿಗಳು ಶರಣಾಗಿದ್ದಾರೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.

ಈ ಕುರಿತು ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಅವರು, ನಕ್ಸಲಿಸಂನ್ನು ಕೆಂಪು ಭಯೋತ್ಪಾದನೆ ಎಂದು ಕರೆದ ಅವರು, ಈ ಕೆಂಪು ಭಯೋತ್ಪಾದನೆಯನ್ನು ನಾಶ ಮಾಡುವ ದಿನ ದೂರವಿಲ್ಲ. ನಕ್ಸಲಿಸಂ ದೇಶದ ವಿರುದ್ಧದ ಪಾಪ ಎಂದು ಹೇಳಿದ್ದಾರೆ. ಮಾವೋವಾದಿ ಉಗ್ರವಾದವು ಭಾರತದ ಯುವಕರಿಗೆ ಮಾಡಿದ ಅನ್ಯಾಯ, ಅದನ್ನು ಸಂಪೂರ್ಣವಾಗಿ ತೊಡೆದು ಹಾಕುವುದೇ ನಮ್ಮ ಸರ್ಕಾರದ ದೃಢಸಂಕಲ್ಪ ಎಂದು ಹೇಳಿದ್ದಾರೆ.

ಇದನ್ನು ಓದಿ: ಛತ್ತೀಸ್‌ಗಢದಲ್ಲಿ ಎನ್‌ಕೌಂಟರ್:‌ 16 ನಕ್ಸಲರ ಹತ್ಯೆ

ಇನ್ನು ಪಹಲ್ಗಾಮ್‌ನಲ್ಲಿ ಭಾರತೀಯರನ್ನು ಹತ್ಯೆ ಮಾಡಿದ್ದಕ್ಕಾಗಿ ಪಾಕಿಸ್ತಾನ ಹಾಗೂ ಭಯೋತ್ಪಾದಕರಿಗೆ ಆಪರೇಷನ್‌ ಸಿಂಧೂರ್‌ ಮೂಲಕ ಉತ್ತರ ನೀಡಿದ್ದೇವೆ. ದೇಶವು ಗಡಿಯಾಚೆಗಿನ ಬೆದರಿಕೆಗಳನ್ನು ನಾಶ ಮಾಡಲು ಹಲವು ಕ್ರಮಗಳನ್ನು ತೆಗೆದುಕೊಂಡಿದ್ದೇವೆ ಎಂದು ಹೇಳಿದರು.

ಭಾರತವು ಈಗ ಚಿಪ್‌ಗಳಿಂದ ಹಿಡಿದು ಹಡಗುಗಳಿಗೆ ಎಲ್ಲವನ್ನೂ ತಯಾರಿಸುತ್ತಿದೆ. ಸ್ವಾವಲಂಬನೆ ಮೂಲಕ ಭಾರತ ಪ್ರಗತಿ ಸಾಧಿಸುತ್ತಿದೆ. ಜೊತೆಗೆ ಈಗಾಗಲೇ ವಿಶ್ವದ ಅತ್ಯಂತ ವೇಗವಾಗಿ ಬೆಳಯುತ್ತಿರುವ ಆರ್ಥಿಕತೆ ರಾಷ್ಟ್ರಗಳಲ್ಲಿ ಒಂದಾಗಿದೆ ಎಂದು ಹೇಳಿದರು.

ಈಗಾಗಲೇ 75 ಗಂಟೆಗಳಲ್ಲಿ ಶಸ್ತ್ರಾಸ್ತ್ರಗಳನ್ನು ತ್ಯಜಿಸಿ, ಸರ್ಕಾರ ನೀಡಿದ ಅಂತಿಮ ಸೂಚನೆಯ ನಂತರ 308ಕ್ಕೂ ಹೆಚ್ಚು ಕಟ್ಟಾ ಮಾವೋವಾದಿ ಕಾರ್ಯಕರ್ತರು ಶರಣಾಗತಿಯಾಗಿದ್ದಾರೆ. ಇನ್ನು ದೇಶದಲ್ಲಿರುವ ಅನೇಕ ಜಿಲ್ಲೆಗಳು ಮಾವೋವಾದಿ ಪೀಡಿತದಿಂದ ಮುಕ್ತವಾಗುತ್ತಿದೆ. ಸುಮಾರು 11 ವರ್ಷಗಳ ಹಿಂದೆ 125 ಜಿಲ್ಲೆಗಳು ಮಾವೋವಾದಿ ಹಿಂಸಾಚಾರಕ್ಕೆ ಒಳಗಾಗಿತ್ತು. ಆದರೆ ಇದೀಗ ಇದು 11ಕ್ಕೆ ಇಳಿದಿದೆ ಎಂದು ಹೇಳಿದ್ದಾರೆ.

ಆಂದೋಲನ ಡೆಸ್ಕ್

Recent Posts

ಚಿರಕನಹಳ್ಳಿ ; ಬೋನಿಗೆ ಬಿದ್ದ ಹುಲಿ

ಗುಂಡ್ಲುಪೇಟೆ: ತಾಲ್ಲೂಕಿನ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶ ವ್ಯಾಪ್ತಿಯ ಕುಂದಕೆರೆ ವಲಯದ ಚಿರಕನಹಳ್ಳಿ ಗ್ರಾಮದಲ್ಲಿ ಪೋತರಾಜು ಎಂಬುವವರ ಜಮೀನಿನಲ್ಲಿ ಅರಣ್ಯ…

1 hour ago

ವೆನಿಜುವೆಲಾ ಭೂಕಂಪ ; ಮೃತರ ಸಂಖ್ಯೆ 235ಕ್ಕೆ ಏರಿಕೆ

ಮುಂದುವರಿದ ರಕ್ಷಣಾ ಕಾರ್ಯಾಚರಣೆ ವೆನಿಜುವೆಲಾ : ವೆನಿಜುವೆಲಾದ ಉತ್ತರ ಭಾಗದಲ್ಲಿ ಬುಧವಾರ ಸಂಜೆ ಸಂಭವಿಸಿದ ಸತತ ಎರಡು ಪ್ರಬಲ ಭೂಕಂಪಗಳ…

2 hours ago

ಡಿಕೆಶಿ ಜೊತೆಗಿನ ಬಾಂಧ್ಯವ : ಧರ್ಮಸ್ಥಳದಲ್ಲಿ ವಿಜಯೇಂದ್ರ ಹೇಳಿದಿಷ್ಟು

ಧರ್ಮಸ್ಥಳ : ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ ವಿಜಯೇಂದ್ರ ಮತ್ತು ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಜೊತೆಗಿನ ಬಾಂಧವ್ಯದ ಬಗ್ಗೆ…

4 hours ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಜೂನ್‌ 26, ಶುಕ್ರವಾರ  

6 hours ago

ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ | ಕನ್ನಡಕ್ಕೊಂದು ಒಟಿಟಿ, ʼಗರುಡ ಪುರಾಣʼ ಇತ್ಯಾದಿ

‘ವೆನ್ ಯು ವಾಂಟ್ ಟು ಡು ಸಮ್‌ತಿಂಗ್ ಡು ಇಟ್; ಆರ್ ಎಲ್ಸ್ ವಿಟ್ ನೆಸ್‌ಇಟ್’ ಇದು ಅತ್ಯಂತ ಪ್ರಚಲಿತವಿರುವ…

7 hours ago

ಹಿಟಾಚಿ ಮೇಲೆ ಬಿದ್ದ ಗೋಡೆ: ಚಾಲಕ ಪಾರು

ಮಳವಳ್ಳಿ: ಪೂರಿಗಾಲಿ ಗ್ರಾಮದಲ್ಲಿ ರಸ್ತೆ ಅಗಲೀಕರಣ ಕಾಮಗಾರಿ ಆರಂಭವಾಗಿದ್ದು, ರಸ್ತೆ ಬದಿಯ ಕಟ್ಟಡ ನೆಲಸಮ ಮಾಡುವಾಗ ಕಟ್ಟಡದ ಗೋಡೆ ಹಿಟಾಚಿ…

23 hours ago