ದೇಶ- ವಿದೇಶ

ಪ.ಬಂಗಾಳ ವಿಧಾನಸಭೆ ಚುನಾವಣೆ : 142 ಕ್ಷೇತ್ರಗಳಲ್ಲಿ ಎರಡನೇ ಹಂತದ ಮತದಾನ ಆರಂಭ

ಕೋಲ್ಕತ್ತ : ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಯ ಎರಡನೇ ಮತ್ತು ಅಂತಿಮ ಹಂತದ ಮತದಾನ ಬುಧವಾರ(ಏ.29) ಬೆಳಿಗ್ಗೆ 7 ಗಂಟೆಗೆ ಆರಂಭವಾಗಿದೆ. ಸಂಜೆ 6 ಗಂಟೆವರೆಗೆ ಮತದಾನ ನಡೆಯಲಿದ್ದು, ಮೇ 4ರಂದು ಮತ ಎಣಿಕೆ ನಡೆದು ಫಲಿತಾಂಶ ಪ್ರಕಟವಾಗಲಿದೆ.

142 ಕ್ಷೇತ್ರಗಳಲ್ಲಿ ಮತದಾನ
ಎರಡನೇ ಹಂತದಲ್ಲಿ ಕೋಲ್ಕತ್ತ, ನಾಡಿಯಾ, ಪೂರ್ವ ಬರ್ಧಮಾನ್, ಹೂಗ್ಲಿ, ದಕ್ಷಿಣ 24 ಪರಗಣ, ಉತ್ತರ 24 ಪರಗಣ ಮತ್ತು ಹೌರಾ ಜಿಲ್ಲೆಗಳ 142 ವಿಧಾನಸಭಾ ಕ್ಷೇತ್ರಗಳಲ್ಲಿ ಮತದಾನ ನಡೆಯುತ್ತಿದೆ. ಒಟ್ಟು 3.22 ಕೋಟಿಗೂ ಅಧಿಕ ಮತದಾರರು 1,448 ಅಭ್ಯರ್ಥಿಗಳ ಭವಿಷ್ಯ ನಿರ್ಧರಿಸಲಿದ್ದಾರೆ.

ಭಾರಿ ಭದ್ರತೆ
ಮತದಾನಕ್ಕೆ ಚುನಾವಣಾ ಆಯೋಗ 41,001 ಮತಗಟ್ಟೆಗಳನ್ನು ಸ್ಥಾಪಿಸಿದೆ. ಎಲ್ಲ ಮತಗಟ್ಟೆಗಳಲ್ಲಿ ವೆಬ್‌ಕಾಸ್ಟಿಂಗ್ ವ್ಯವಸ್ಥೆ ಮಾಡಲಾಗಿದೆ. ಕೇಂದ್ರೀಯ ಪಡೆಗಳು ಮತ್ತು ರಾಜ್ಯ ಪೊಲೀಸರನ್ನು ಭಾರಿ ಪ್ರಮಾಣದಲ್ಲಿ ನಿಯೋಜಿಸಲಾಗಿದೆ.

ಗಮನಸೆಳೆದ ಭವಾನಿಪುರ ಕ್ಷೇತ್ರ
ಈ ಹಂತದಲ್ಲಿ ಭವಾನಿಪುರ ಕ್ಷೇತ್ರದ ಕಡೆ ಎಲ್ಲರ ಚಿತ್ತ ನೆಟ್ಟಿದೆ. ಇಲ್ಲಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮತ್ತು ಬಿಜೆಪಿ ನಾಯಕ ಸುವೇಂದು ಅಧಿಕಾರಿ ನಡುವೆ ನೇರ ಹಣಾಹಣಿ ಏರ್ಪಟ್ಟಿದೆ.

ಏ.23ರಂದು ನಡೆದ ಮೊದಲ ಹಂತದಲ್ಲಿ ಉತ್ತರ ಬಂಗಾಳದ 8 ಜಿಲ್ಲೆಗಳು ಮತ್ತು ಮುರ್ಷಿದಾಬಾದ್, ನಾಡಿಯಾ, ಬಿರ್ಭೂಮ್, ಹೂಗ್ಲಿಯ 152 ಕ್ಷೇತ್ರಗಳಲ್ಲಿ ಮತದಾನ ನಡೆದಿತ್ತು.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಮೇಕೆದಾಟು ಯೋಜನೆ ಶೀಘ್ರ ಅನುಷ್ಠಾನವಾಗಲಿ

ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ೨೦೧೪ರ ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ ಕರ್ನಾಟಕವು ಮೇಕೆದಾಟು ಜಲಾಶಯ ನಿರ್ಮಿಸಲು ತಮಿಳುನಾಡು ಸೇರಿದಂತೆ ಯಾವುದೇ…

6 hours ago

ಓದುಗರ ಪತ್ರ: ಫುಟ್‌ಪಾತ್ ಒತ್ತುವರಿ ತೆರವು ಕಾರ್ಯಾಚರಣೆ ಚುರುಕುಗೊಳ್ಳಲಿ

ಮೈಸೂರು ನಗರದಲ್ಲಿ ಅನೇಕ ಕಡೆ ಪಾದಚಾರಿಗಳಿಗೆ ಅಡಚಣೆಯಾಗಿದ್ದ ಫುಟ್‌ಪಾತ್ ವ್ಯಾಪಾರಿಗಳ ಒತ್ತುವರಿ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಆದರೆ ಬಹುತೇಕ ಕಡೆ…

6 hours ago

ಓದುಗರ ಪತ್ರ: ಕೂಡ್ಲಾಪುರ ಗ್ರಾಮಕ್ಕೆ ಕಬಿನಿ ನೀರು ಕೊಡಿ

ನಂಜನಗೂಡು ತಾಲ್ಲೂಕಿನ ಕೂಡ್ಲಾಪುರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಬರ ಪರಿಸ್ಥಿತಿಯಿಂದಾಗಿ ಕೆರೆಗಳು ಬತ್ತಿಹೋಗಿದ್ದು, ಕುಡಿಯುವ ನೀರು ಸಿಗದೆ ತೊಂದರೆಯಾಗಿದೆ. ನಂಜನಗೂಡು…

6 hours ago

ಗಾಮೀಣ ಜನರ ಏಳಿಗೆಗೆ IHDUA ಪಣ

ಪ್ರಸನ್ನ ಎಂ.ಕೆ. ಖ್ಯಾತ ಕ್ಯಾನ್ಸರ್ ರೋಗ ತಜ್ಞರು, ಭಾರತ್ ಕ್ಯಾನ್ಸರ್ ಹಾಸ್ಪಿಟಲ್ ಹಾಗೂ ಎಚ್‌ಸಿಜಿ ಆಸ್ಪತ್ರೆ ಛೇರ್ಮನ್ ಮತ್ತು ಸಂಸ್ಥಾಪಕರು,…

6 hours ago

ಸತ್ಯಮಂಗಲ-ಮೀಣ್ಯಂ ರಸ್ತೆಯಲ್ಲಿ ಸಂಚಾರ ದುಸ್ತರ

ಮಾದೇಶ್ ಗೌಡ ಹದಗೆಟ್ಟ ರಸ್ತೆ ಅಭಿವೃದ್ಧಿಗೆ ಸವಾರರ ಆಗ್ರಹ; ಅಭಿವೃದ್ಧಿಯಾಗದಿದ್ದರೆ ಪ್ರತಿಭಟನೆ ಎಚ್ಚರಿಕೆ ಹನೂರು: ತಾಲ್ಲೂಕಿನ ಮೀಣ್ಯಂ ಗ್ರಾಪಂ ವ್ಯಾಪ್ತಿಯ…

6 hours ago

ಪಿರಿಯಾಪಟ್ಟಣ: ಗರಿಗೆದರಿದ ತಂಬಾಕು ಕೃಷಿ ಚಟುವಟಿಕೆ

ನವೀನ್‌ಕುಮಾರ್ ತಂಬಾಕು ಹದಗೊಳಿಸುವ ಕಾರ್ಯ ಚುರುಕು; ಉತ್ತಮ ಬೆಲೆ ನಿರೀಕ್ಷೆಯಲ್ಲಿ ರೈತರು ಪಿರಿಯಾಪಟ್ಟಣ: ತಾಲ್ಲೂಕಿನಾದ್ಯಂತ ತಂಬಾಕು ಕೃಷಿ ಚಟುವಟಿಕೆಗಳು ಗರಿಗೆದರಿವೆ.…

6 hours ago