ಕೊಲ್ಕತ್ತಾ : ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯ ಮೊದಲ ಹಂತಕ್ಕೆ ಇಂದು ಮತದಾನ ನಡೆಯುತ್ತಿದೆ. ಈ ಹೊತ್ತಿನಲ್ಲೇ ಆತಂಕಕಾರಿ ಘಟನೆಯೊಂದು ನಡೆದಿದೆ.
ಮತದಾನ ನಡೆಯುತ್ತಿದ್ದ ಮುರ್ಷಿದಾಬಾದ್ ಜಿಲ್ಲೆಯಲ್ಲಿ ಅಪರಿಚಿತ ವ್ಯಕ್ತಿಗಳು ಕಚ್ಚಾ ಬಾಂಬ್ದಾಳಿ ನಡೆಸಿದ್ದಾರೆ. ಜಿಲ್ಲೆಯ ನೌಡಾದಲ್ಲಿ ಘಟನೆ ನಡೆದಿದ್ದು, ಹಲವರು ಗಾಯಗೊಂಡಿದ್ದಾರೆ. ಇದು ಸ್ಥಳೀಯರಲ್ಲಿ ಭೀತಿ ಹೆಚ್ಚಿಸಿದೆ.
ಕಚ್ಚಾ ಬಾಂಬ್ ದಾಳಿಯ ಬಳಿಕ ಹಿಂಸಾಚಾರ ಪೀಡಿತವಾಗಿರುವ ಮುರ್ಷಿದಾಬಾದ್ ಜಿಲ್ಲೆಯಲ್ಲಿ ಭದ್ರತೆ ಹೆಚ್ಚಿಸಲಾಗಿದೆ. ಕಳೆದ ತಿಂಗಳು, ಜಿಲ್ಲೆಯ ಜಂಗಿಪುರ ಮತ್ತು ರಘುನಾಥಗಂಜ್ ಪ್ರದೇಶಗಳಲ್ಲಿ ಎರಡು ಗುಂಪುಗಳ ನಡುವೆ ಭಾರೀ ಘರ್ಷಣೆ ನಡೆದಿತ್ತು. ಇದರಿಂದಾಗಿ ಅಧಿಕಾರಿಗಳು ನಿಷೇಧಾಜ್ಞೆ ಹೊರಡಿಸಿ 30 ಜನರನ್ನ ಬಂಧಿಸಲಾಗಿತ್ತು. ಅಂದಿನಿಂದಲೂ ಕೇಂದ್ರ ಪಡೆಗಳು ಸಹ ಈ ಸ್ಥಳದ ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತಂದಿವೆ.
ಮೊದಲ ಹಂತದ ಚುನಾವಣೆ
ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯ ಮೊದಲ ಹಂತಕ್ಕೆ ಇಂದು ಮತದಾನ ನಡೆಯುತ್ತಿದೆ. ಉತ್ತರ ಬಂಗಾಳದ ಎಲ್ಲಾ 152 ಕ್ಷೇತ್ರಗಳಲ್ಲಿ ಮತದಾನ ಆರಂಭಗೊಂಡಿದೆ. ಉತ್ತರ ಬಂಗಾಳದ ಮುರ್ಷಿದಾಬಾದ್, ಜರ್ಗಾಮ, ಮೇದಿನಿಪುರ, ಬಂಕುರಾ, ಪುರುಲಿಯಾ, ಪಶ್ಚಿಮ ಬರ್ಧಮಾನ್ ಮತ್ತು ಬಿರ್ಬುಮ್ನಲ್ಲಿ ಮೊದಲ ಹಂತದ ಚುನಾವಣೆ ನಡೆಯುತ್ತಿದೆ.
ದೇಶ ಆಳುವ ವರ್ಗದ ಏಕಚಕ್ರಾಧಿಪತ್ಯವನ್ನು ವಿರೋಧಿಸಿ ನಡೆದ ಚಳವಳಿ ಸರ್ಕಾರವನ್ನು ಮಂಡಿಯೂರುವಂತೆ ಮಾಡಿದೆ. ದೇಶಾದ್ಯಂತ ಕಾಕ್ರೋಚ್ ಜನತಾ ಪಾರ್ಟಿ ನೇತೃತ್ವದಲ್ಲಿ…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಸರ್ಕಾರ ಟೇಕಾಫ್ ಆಗಲು ಪೂರ್ಣ ಪ್ರಮಾಣದ ಸಚಿವ ಸಂಪುಟ ರಚನೆ ಅನಿವಾರ್ಯ ಕಳೆದ ವಾರ…
ಆನಂದ್ ಹೊಸೂರು ಚುಂಚನಕಟ್ಟೆ ಹೋಬಳಿಯಲ್ಲಿ ಭತ್ತ ಬೆಳೆಯುತ್ತಿದ್ದ ರೈತರಿಗೆ ಈಗ ಸಂಕಷ್ಟದ ಸ್ಥಿತಿ ಹೊಸೂರು: ಕಾವೇರಿ ನೀರು ಕುಡಿಯಲು ಮಾತ್ರ,…
ಮಹೇಂದ್ರ ಹಸಗೂಲಿ ಸಂಚಾರಕ್ಕೆ ಅಡಚಣೆ; ಬಿಎಸ್ಎನ್ಎಲ್ ಗುತ್ತಿಗೆದಾರರ ವಿರುದ್ಧ ಕ್ರಮಕ್ಕೆ ಸಾರ್ವಜನಿಕರ ಒತ್ತಾಯ ಗುಂಡ್ಲುಪೇಟೆ: ಬಿಎಸ್ಎನ್ಎಲ್ನಿಂದ ನೇಮಿಸಲ್ಪಟ್ಟಿರುವ ಗುತ್ತಿಗೆದಾರರು ಕೇಬಲ್…
ನವದೆಹಲಿ : ದೇಶದ ರಾಜಕೀಯದ ಭಾಷೆ ಬದಲಾಗುತ್ತಿದೆ. ಒಮ್ಮೆ ಟ್ವಿಟರ್, ಈಗಿನ ಎಕ್ಸ್ನಲ್ಲಿ ನಡೆಯುತ್ತಿದ್ದ ವಾಗ್ವಾದ, ಟ್ರೆಂಡ್ಗಳು ಈಗ ಇನ್ಸ್ಟಾಗ್ರಾಂ…