ಕೊಲ್ಕತ್ತಾ : ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯ ಎರಡನೇ ಹಂತದ ಬಹಿರಂಗ ಚುನಾವಣೆ ಸೋಮವಾರ ಅಂತ್ಯವಾಗಿದೆ. ಏ.29ರಂದು ಮತದಾನ ನಡೆಯಲಿದ್ದು, ಭಾರೀ ಬಿಗಿ ಭದ್ರತೆ ಕೈಗೊಳ್ಳಲಾಗಿದೆ.
ಮತದಾನಕ್ಕೆ ಅಡ್ಡಿಪಡಿಸುವ ಅಥವಾ ಮತದಾರರಿಗೆ ಅಡ್ಡಿಯುಂಟು ಮಾಡುವ ಯಾವುದೇ ಪ್ರಯತ್ನದ ವಿರುದ್ಧ ಕಠಿಣ ಕ್ರಮ ನಡೆಸಲಾಗುವುದು ಎಂದು ಚುನಾವಣಾ ಆಯೋಗ ತಿಳಿಸಿದೆ. ಕೊನೆಯ ದಿನದಂದು ಆಡಳಿತರೂಢ ಪಕ್ಷ ತೃಣಮೂಲ ಕಾಂಗ್ರೆಸ್ ಮತ್ತು ಭಾರತೀಯ ಜನತಾ ಪಕ್ಷ ಭರ್ಜರಿ ಪ್ರಚಾರ ನಡೆಸಿತು. ಪ್ರಧಾನಿ ನರೇಂದ್ರ ಮೋದಿ ಮತ್ತು ಗೃಹ ಸಚಿವ ಅಮಿತ್ ಶಾ ಸೇರಿದಂತೆ ಪ್ರಮುಖ ನಾಯಕರು ಪ್ರಮುಖ ಸಮಾವೇಶ ಮತ್ತು ಪ್ರಚಾರದಲ್ಲಿ ಭಾಗಿಯಾಗಲಿದ್ದಾರೆ.
ಕಳೆದ 48 ಗಂಟೆಗಳಲ್ಲಿ, ದಕ್ಷಿಣ 24 ಪರಗಣ ಜಿಲ್ಲೆಯ ಭಂಗಾರ್ನಲ್ಲಿರುವ ಟಿಎಂಸಿ ಕಾರ್ಯಕರ್ತನ ಮನೆಯಿಂದ ಪೊಲೀಸರು ಡಜನ್ಗಟ್ಟಲೆ ಕಚ್ಚಾ ಬಾಂಬ್ಗಳನ್ನು ವಶಪಡಿಸಿಕೊಂಡಿದ್ದಾರೆ. ಚುನಾವಣಾ ಆಯೋಗವು ಕಚ್ಚಾ ಬಾಂಬ್ಗಳ ತಯಾರಿಕೆಯಲ್ಲಿ ತೊಡಗಿರುವವರನ್ನು ಬಂಧಿಸಲು ವಿಶೇಷ ಕಾರ್ಯಾಚರಣೆಯನ್ನು ಪ್ರಾರಂಭಿಸಲು ಪೊಲೀಸರಿಗೆ ನಿರ್ದೇಶನ ನೀಡಿದೆ ಮತ್ತು ರಾಷ್ಟ್ರೀಯ ತನಿಖಾ ಸಂಸ್ಥೆ ಅಂತಹ ಎಲ್ಲಾ ಪ್ರಕರಣಗಳನ್ನು ತನಿಖೆ ಮಾಡುತ್ತದೆ.
ಮತದಾರರು ನಿರ್ಭೀತಿಯಿಂದ ಮತ ಚಲಾಯಿಸುವಂತೆ ಖಚಿತಪಡಿಸಿಕೊಳ್ಳಲು ಕ್ಷೇತ್ರವಾರು ಪೊಲೀಸ್ ಭದ್ರತೆ ಹೆಚ್ಚಿಸಲು ಸಿಬ್ಬಂದಿಗೆ ನಿರ್ದೇಶನ ನೀಡಿದೆ.
ಏ.29ರಂದು ಚುನಾವಣೆ ನಡೆಯಲಿರುವ 142 ಕ್ಷೇತ್ರಗಳಲ್ಲಿನ ಕೊಲ್ಕತ್ತಾ ವ್ಯಾಪ್ತಿಯ ಮೂರು ಚುನಾವಣಾ ಜಿಲ್ಲೆಗಳ ಚುನಾವಣಾ ಅಧಿಕಾರಿಗಳು, ಹಿರಿಯ ಪೊಲೀಸ್ ಅಧಿಕಾರಿಗಳು ಮತ್ತು ಕೇಂದ್ರ ಪಡೆಗಳ ಕಮಾಂಡರ್ಗಳು ಭಾಗವಹಿಸಿದ್ದ ಉನ್ನತ ಮಟ್ಟದ ಸಮನ್ವಯ ಸಭೆ ನಡೆಸಿ, ಪರಿಶೀಲನೆ ನಡೆಸಿದರು.
ದಕ್ಷಿಣ 24 ಪರಗಣ ಜಿಲ್ಲೆಯ ಕಾಕ್ದ್ವೀಪ್ಗೆ ಭೇಟಿ ನೀಡಿದ ರಾಜ್ಯ ಮುಖ್ಯ ಚುನಾವಣಾ ಅಧಿಕಾರಿ ಮನೋಜ್ ಕುಮಾರ್ ಅಗರ್ವಾಲ್, ವಿವಿಧ ರಾಜಕೀಯ ಪಕ್ಷಗಳ ಪ್ರತಿನಿಧಿಗಳೊಂದಿಗೆ ಸಭೆ ನಡೆಸಿ ಮತದಾರರು ಮುಕ್ತವಾಗಿ ಭಾಗವಹಿಸುವಂತೆ ತಿಳಿಸಿದರು.
ಏ.23ರಂದು ನಡೆದ ಮೊದಲ ಹಂತದ ಚುನಾವಣೆಯಲ್ಲಿ ಶೇ.93.19 ಮತದಾನವಾಗಿತ್ತು. ಎ.29ರಂದು ಎರಡನೇ ಹಂತದ ಮತದಾನ ನಡೆಯಲಿದೆ. ಮೇ 4ರಂದು ಫಲಿತಾಂಶ ಹೊರಬೀಳಲಿದೆ.
ದೇಶ ಆಳುವ ವರ್ಗದ ಏಕಚಕ್ರಾಧಿಪತ್ಯವನ್ನು ವಿರೋಧಿಸಿ ನಡೆದ ಚಳವಳಿ ಸರ್ಕಾರವನ್ನು ಮಂಡಿಯೂರುವಂತೆ ಮಾಡಿದೆ. ದೇಶಾದ್ಯಂತ ಕಾಕ್ರೋಚ್ ಜನತಾ ಪಾರ್ಟಿ ನೇತೃತ್ವದಲ್ಲಿ…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಸರ್ಕಾರ ಟೇಕಾಫ್ ಆಗಲು ಪೂರ್ಣ ಪ್ರಮಾಣದ ಸಚಿವ ಸಂಪುಟ ರಚನೆ ಅನಿವಾರ್ಯ ಕಳೆದ ವಾರ…
ಆನಂದ್ ಹೊಸೂರು ಚುಂಚನಕಟ್ಟೆ ಹೋಬಳಿಯಲ್ಲಿ ಭತ್ತ ಬೆಳೆಯುತ್ತಿದ್ದ ರೈತರಿಗೆ ಈಗ ಸಂಕಷ್ಟದ ಸ್ಥಿತಿ ಹೊಸೂರು: ಕಾವೇರಿ ನೀರು ಕುಡಿಯಲು ಮಾತ್ರ,…
ಮಹೇಂದ್ರ ಹಸಗೂಲಿ ಸಂಚಾರಕ್ಕೆ ಅಡಚಣೆ; ಬಿಎಸ್ಎನ್ಎಲ್ ಗುತ್ತಿಗೆದಾರರ ವಿರುದ್ಧ ಕ್ರಮಕ್ಕೆ ಸಾರ್ವಜನಿಕರ ಒತ್ತಾಯ ಗುಂಡ್ಲುಪೇಟೆ: ಬಿಎಸ್ಎನ್ಎಲ್ನಿಂದ ನೇಮಿಸಲ್ಪಟ್ಟಿರುವ ಗುತ್ತಿಗೆದಾರರು ಕೇಬಲ್…
ನವದೆಹಲಿ : ದೇಶದ ರಾಜಕೀಯದ ಭಾಷೆ ಬದಲಾಗುತ್ತಿದೆ. ಒಮ್ಮೆ ಟ್ವಿಟರ್, ಈಗಿನ ಎಕ್ಸ್ನಲ್ಲಿ ನಡೆಯುತ್ತಿದ್ದ ವಾಗ್ವಾದ, ಟ್ರೆಂಡ್ಗಳು ಈಗ ಇನ್ಸ್ಟಾಗ್ರಾಂ…