ಕೋಲ್ಕತ್ತಾ : ಪಶ್ಚಿಮ ಬಂಗಾಳದಲ್ಲಿ 15 ವರ್ಷಗಳ ಟಿಎಂಸಿ ಆಡಳಿತಕ್ಕೆ ತೆರೆ ಎಳೆದು ಐತಿಹಾಸಿಕ ಗೆಲುವು ಸಾಧಿಸಿರುವ ಬಿಜೆಪಿ, ಮೇ 9ರಂದು ಬೆಳಿಗ್ಗೆ 10 ಗಂಟೆಗೆ ಬ್ರಿಗೇಡ್ ಪರೇಡ್ ಮೈದಾನದಲ್ಲಿ ಹೊಸ ಸರ್ಕಾರದ ಪ್ರಮಾಣವಚನ ಸಮಾರಂಭ ನಡೆಸಲಿದೆ. ಪಕ್ಷದ ಹಿರಿಯ ನಾಯಕ, ನಂದಿಗ್ರಾಮ-ಭವಾನಿಪುರ ಎರಡೂ ಕ್ಷೇತ್ರಗಳ ಶಾಸಕ ಸುವೆಂದು ಅಧಿಕಾರಿ ಮುಖ್ಯಮಂತ್ರಿ ಗದ್ದುಗೆ ಏರುವುದು ಖಚಿತವಾಗಿದೆ.
ಇಂದು ನಡೆದ ಬಿಜೆಪಿ ಶಾಸಕಾಂಗ ಪಕ್ಷದ ಸಭೆಯಲ್ಲಿ, ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸುವೆಂದು ಅಧಿಕಾರಿ ಹೆಸರನ್ನು ಮುಖ್ಯಮಂತ್ರಿಯನ್ನಾಗಿ ಘೋಷಿಸಿದರು.
ಇದರೊಂದಿಗೆ ಇದೇ ಮೊದಲ ಬಾರಿಗೆ ಅಭೂತಪೂರ್ವ ಜಯ ಗಳಿಸಿರುವ ಪಶ್ಚಿಮ ಬಂಗಾಳದಲ್ಲಿ ಸುವೇಂದು ಅಧಿಕಾರಿ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ.
ಮೇ 9 ರಂದು ಸುವೇಂದು ಅಧಿಕಾರಿ ಪ್ರಮಾಣ ವಚನ ಸ್ವೀಕರಿಸಲಿದ್ದು, ಪ್ರಧಾನಿ ನರೇಂದ್ರ ಮೋದಿ, ಅಮಿತ್ ಶಾ, ಜೆ.ಪಿ. ನಡ್ಡಾ, ರಾಜನಾಥ್ ಸಿಂಗ್ ಸೇರಿದಂತೆ 20 ರಾಜ್ಯಗಳ ಬಿಜೆಪಿ ಮುಖ್ಯಮಂತ್ರಿಗಳು ಸಮಾರಂಭದಲ್ಲಿ ಭಾಗವಹಿಸಲಿದ್ದಾರೆ. ಸ್ವಾತಂತ್ರ್ಯ ನಂತರ ಮೊದಲ ಬಾರಿಗೆ ಬಂಗಾಳದಲ್ಲಿ ಬಿಜೆಪಿ ಸರ್ಕಾರ ಅಸ್ತಿತ್ವಕ್ಕೆ ಬರಲಿದೆ.
ಯಾರೀ ಸುವೆಂದು ಅಧಿಕಾರಿ?
1970 ಡಿಸೆಂಬರ್ 15ರಂದು ಜನಿಸಿದ ಸುವೆಂದು, ಮಾಜಿ ಕೇಂದ್ರ ಸಚಿವ ಶಿಶಿರ್ ಅಧಿಕಾರಿ ಪುತ್ರ. 1995ರಲ್ಲಿ ಕಾಂಗ್ರೆಸ್ನಿಂದ ರಾಜಕೀಯ ಆರಂಭಿಸಿ, 2000ದಲ್ಲಿ ಟಿಎಂಸಿ ಸೇರಿ ಮಮತಾ ಅವರ ಆಪ್ತರಾಗಿದ್ದರು. 2020ರ ಡಿಸೆಂಬರ್ನಲ್ಲಿ ಬಿಜೆಪಿ ಸೇರಿದರು. 2016-2020ರಲ್ಲಿ ಮಮತಾ ಸಂಪುಟದಲ್ಲಿ ಸಾರಿಗೆ, ನೀರಾವರಿ ಸಚಿವರಾಗಿದ್ದರು.





