ಹೈದರಾಬಾದ್: ಕಾಲ್ತುಳಿತ ಪ್ರಕರಣದಲ್ಲಿ ಬಂಧನವಾಗಿದ್ದ ತೆಲುಗು ನಟ ಅಲ್ಲು ಅರ್ಜುನ್ ಚಂಚಲಗುಡ ಸೆಂಟ್ರಲ್ ಜೈಲಿನಿಂದ ಇಂದು ಬಿಡುಗಡೆಯಾಗಿದ್ದಾರೆ.
ಪುಷ್ಪ-2 ಚಿತ್ರದ ಪ್ರದರ್ಶನದ ವೇಳೆ ಉಂಟಾದ ಕಾಲ್ತುಳಿತದಿಂದ ಓರ್ವ ಮಹಿಳೆ ಮೃತಪಟ್ಟಿದ್ದರು. ಈ ಪ್ರಕರಣ ಸಂಬಂಧವಾಗಿ ಅಲ್ಲು ಅರ್ಜುನ್ ಅವರನ್ನು ಪೊಲೀಸರು ಬಂಧಿಸಿ ನಾಂಪಲ್ಲಿ ಕೋರ್ಟ್ಗೆ ಹಾಜರುಪಡಿಸಿದ್ದರು. ಬಳಿಕ ತೆಲಂಗಾಣ ಹೈಕೋರ್ಟ್ ಷರತ್ತು ಬದ್ಧ ಜಾಮೀನು ಮಧ್ಯಂತರ ಜಾಮೀನು ನೀಡಿತ್ತು. ಈ ಹಿನ್ನೆಲೆಯಲ್ಲಿ ಇಂದು(ಡಿ.14) ಬೆಳಿಗ್ಗೆ ಜೈಲಿನಿಂದ ಬಿಡುಗಡೆಯಾಗಿ ತಮ್ಮ ನಿವಾಸವಾಗಿರುವ ಜುಬಿಲಿ ಹಿಲ್ಸ್ಗೆ ತೆರಳಿದ್ದಾರೆ.
ಈ ವೇಳೆ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ನನಗೆ ಬೆಂಬಲ ನೀಡಿದ ಎಲ್ಲರಿಗೂ ಹಾಗೂ ನನ್ನ ಎಲ್ಲಾ ಅಭಿಮಾನಿಗಳಿಗೂ ನಾನು ಧನ್ಯವಾದ ಸಮರ್ಪಿಸುತ್ತಿದ್ದೇನೆ. ಇನ್ನು ನನ್ನ ಬಗ್ಗೆ ಯಾವುದೇ ಚಿಂತೆ ಮಾಡುವ ಅಗತ್ಯವಿಲ್ಲ. ನಾನು ಕ್ಷೇಮವಾಗಿದ್ದೇನೆ ಎಂದು ಹೇಳಿದ್ದಾರೆ.
ನಾನು ಕಾನೂನು ಪಾಲಿಸುವ ನಾಗರೀಕನಾಗಿದ್ದು, ಎಲ್ಲದಕ್ಕೂ ನಾನು ಸಹಕರಿಸುತ್ತೇನೆ. ಘಟನೆಯಲ್ಲಿ ಮೃತಪಟ್ಟವರ ಕುಟುಂಬದವರಿಗೆ ನಾನು ಇನ್ನೊಮ್ಮೆ ಸಂತಾಪ ಕೋರುತ್ತೇನೆ. ಅದೊಂದು ದುರದೃಷ್ಟಕರ ಘಟನೆ. ಹಾಗಾಗಿ ನಾವು ಅವರ ಬಳಿ ಕ್ಷಮೆ ಕೇಳುತ್ತೇನೆ ಎಂದು ತಿಳಿಸಿದ್ದಾರೆ.
ಬಂಡಾಯದ ಹೊಳೆ ಮಿಂಚು ಹೂಮಳೆ ! ಅತಿವೃಷ್ಟಿ,ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ, ಕಾರಣ,…
ರಾಜ್ಯದಲ್ಲಿ ಎಂಟು ಸಾವಿರಕ್ಕೂ ಅಧಿಕ ಪೋಕ್ಸೊ ಪ್ರಕರಣಗಳು ದಾಖಲಾಗಿವೆ ಎಂದು ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ನ್ಯಾಯಮೂರ್ತಿ…
ಮೈಸೂರಿನ ನಾರಾಯಣ ಶಾಸಿ ರಸ್ತೆಯಲ್ಲಿ, ಕಳೆದ ಶನಿವಾರ ಪ್ರಧಾನಿ ನರೇಂದ್ರ ಮೋದಿ ಅವರಿಂದ ಉದ್ಘಾಟನೆಗೊಂಡ ವಿವೇಕ ಸ್ಮಾರಕದ ಜಗವು ಕೆಲವು…
ಶುಭಾ ಖಟಾವಕರ ಮ್ಹೆತ್ರಸ್ ಹೊಸ ಇತಿಹಾಸ ಸೃಷ್ಟಿಸಿದ ‘ಜೆನ್ ಝೀ’ ಪೀಳಿಗೆ ಸಂಪ್ರದಾಯಗಳನ್ನು ಪ್ರಶ್ನಿಸಿದ ‘ಬೂಮರ್ಸ್’ ಯುವಜನ ೧೯೦೦ ರಿಂದ…
ಪುನೀತ್ ೩ ವರ್ಷ ಕಳೆದರೂ ಮುಗಿಯದ ಕಾಮಗಾರಿ: ಶೀಘ್ರ ಪೂರ್ಣಗೊಳಿಸಲು ಒತ್ತಾಯ ಮಡಿಕೇರಿ: ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಭಾಷಣ ಮಾಡಿದ್ದ…
ಮಂಜು ಕೋಟೆ ಕೋಟೆ: ಸಚಿವ ಸ್ಥಾನ ದೊರೆತಿದ್ದರೆ ಹಿಂದುಳಿದ ಕ್ಷೇತ್ರದ ಅಭಿವೃದ್ಧಿಯಾಗುತ್ತಿತ್ತು ಎಂಬ ನಿರೀಕ್ಷೆ ಎಚ್.ಡಿ.ಕೋಟೆ: ಮೈಸೂರು ಪ್ರಾಂತ್ಯದ ನಾಯಕ…