ಹೊಸದಿಲ್ಲಿ : ನಾನು ಯಾವ ತಪ್ಪು ಮಾಡಿಲ್ಲ, ನನ್ನ ನಿರ್ಧಾರ ಸರಿಯಿದೆ. ಹೀಗಾಗಿ ಯಾರನ್ನು ಕ್ಷಮೆ ಕೇಳುವ ಪ್ರಶ್ನೆಯೇ ಇಲ್ಲ ಎಂದು ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಬಿ ಆರ್ ಗವಾಯಿ ಅವರ ಮೇಲೆ ಶೂ ಎಸೆಯಲು ಮುಂದಾಗಿದ್ದ ವಕೀಲ ರಾಕೇಶ್ ಕಿಶೋರ್ ಹೇಳಿಕೊಂಡಿದ್ದಾನೆ.
ಮಾಧ್ಯಮದ ಜೊತೆ ಮಾತನಾಡಿದ ಆತ, ನಾನು ಜೈಲು ಶಿಕ್ಷೆ ಎದುರಿಸಲು ಸಿದ್ಧ. ಈ ಕೃತ್ಯಕ್ಕೆ ನಾನು ಕ್ಷಮೆಯಾಚಿಸಲ್ಲ. ಅಷ್ಟೇ ಅಲ್ಲದೇ ಯಾವುದೇ ರಾಜಕೀಯ ಪಕ್ಷದೊಂದಿಗೆ ನಾನು ಸಂಬಂಧ ಹೊಂದಿಲ್ಲ ಎಂದು ಸ್ಪಷ್ಟನೆ ನೀಡಿದ್ದಾನೆ.
ಇದನ್ನು ಓದಿ : ಸಿಜೆಐಗೆ ಶೂ ಎಸೆದ ವಕೀಲನ ಗಲ್ಲಿಗೇರಿಸಿ: ದೇವಗಳ್ಳಿ ಸೋಮಶೇಖರ ಒತ್ತಾಯ
ಶೂ ಎಸೆಯಲು ದೇವರೇ ಪ್ರಚೋದನೆ ನೀಡಿದ್ದಾನೆ. ಖಜುರಾಹೊ ಅರ್ಜಿ ವಿಚಾರಣೆ ವೇಳೆ ನ್ಯಾ.ಗವಾಯಿ ಹೇಳಿದ ಅಭಿಪ್ರಾಯದಿಂದ ನನಗೆ ರಾತ್ರಿ ನಿದ್ದೆಯೇ ಬರಲಿಲ್ಲ. ನಂತರ ಮಾರಿಷಸ್ನಲ್ಲಿ ಭಾರತೀಯ ಕಾನೂನು ವ್ಯವಸ್ಥೆಯು ಕಾನೂನಿನ ಆಳ್ವಿಕೆಯಿಂದ ನಿಯಂತ್ರಿಸಲ್ಪಡುತ್ತದೆಯೇ ಹೊರತು ಬುಲ್ಡೋಜರ್ ನಿಯಮದಿಂದ ಅಲ್ಲ ಎಂದು ಗವಾಯಿ ಹೇಳಿಕೆಯಿಂದ ನನಗೆ ಅಸಮಾಧಾನವಾಗಿತ್ತು ಎಂದು ಹೇಳಿದರು.
ಸಿಜೆಐ ಗವಾಯಿ ಮೇಲೆ ಶೂ ಎಸೆಯಲು ಮುಂದಾಗಿದ್ದ ವಕೀಲ ಬನಾರಸ್ ಹಿಂದೂ ವಿಶ್ವವಿದ್ಯಾಲಯದಿಂದ ವೈದ್ಯಕೀಯ ಕೀಟಶಾಸ್ತ್ರದಲ್ಲಿ ಪಿಎಚ್ಡಿ ಪಡೆದಿದ್ದೇನೆ ಎಂದು ಹೇಳಿಕೊಂಡಿದ್ದು, ವಕೀಲ ವೃತ್ತಿ ಮಾಡುವ ಮೊದಲು ವಿಶ್ವ ಆರೋಗ್ಯ ಸಂಸ್ಥೆಗೆ ಸಲಹೆ ನೀಡಿದ್ದೇನೆ. ಮಾನಸಿಕವಾಗಿಯೂ ನಾನು ಸ್ಥಿಮಿತದಲ್ಲಿದ್ದೇನೆ ಎಂದಿದ್ದಾರೆ.
ನನ್ನ ಕೃತ್ಯದಿಂದ ಕುಟುಂಬದವರು ಅಸಮಾಧಾನಗೊಂಡಿದ್ದಾರೆ ಎನ್ನುವುದು ನನಗೆ ತಿಳಿದಿದೆ. ಮುಂದೆ ಯಾವುದೇ ರೀತಿಯ ಪರಿಣಾಮ ಎದುರಿಸಲು ನಾನು ಸಿದ್ಧನಿದ್ದೇನೆ. ದೇವರ ಹೆಸರಿನಲ್ಲೇ ಎಲ್ಲವನ್ನೂ ಸಹಿಸುತ್ತೇನೆ ಎಂದು ಅವರು ಹೇಳಿದ್ದಾರೆ.
ಮೈಸೂರು : ಮುಡುಕುತೊರೆ ಭ್ರಮರಾಂಬ ಸಮೇತ ಶ್ರೀ ಮಲ್ಲಿಕಾರ್ಜುನಸ್ವಾಮಿ ಜಾತ್ರಾ ಮಹೋತ್ಸವದ ಅಂಗವಾಗಿ ಧಾರ್ಮಿಕ ಮತ್ತು ದತ್ತಿ ಇಲಾಖೆ ಹಾಗೂ…
ಹನೂರು : ಪ್ರತಿಯೊಬ್ಬ ವಿದ್ಯಾರ್ಥಿಗೂ ದ್ವಿತೀಯ ಪಿಯುಸಿ ಒಂದು ಪ್ರಮುಖ ಘಟವಾಗಿದ್ದು, ವಿದ್ಯಾರ್ಥಿಗಳು ತಮ್ಮ ಜೀವನವನ್ನು ರೂಪಿಸಿಕೊಳ್ಳುವಲ್ಲಿ ಒಂದು ಗುರಿ…
ಉತ್ತರ ಪ್ರದೇಶ: ಇಲ್ಲಿನ ಪ್ರಯಾಗ್ರಾಜ್ನಲ್ಲಿ ತರಬೇತಿ ಹಾರಾಟ ನಡೆಸುತ್ತಿದ್ದಾಗ ಭಾರತೀಯ ವಾಯುಪಡೆಯ ಮೈಕ್ರೋಲೈಟ್ ವಿಮಾನವೊಂದು ಅಪಘಾತಕ್ಕೀಡಾಗಿದೆ. ವಿಮಾನದಲ್ಲಿದ್ದ ಇಬ್ಬರೂ ಪೈಲಟ್ಗಳನ್ನು…
ಬೆಂಗಳೂರು: ಕರ್ನಾಟಕದಲ್ಲಿ ಜೀವನೋಪಾಯಕ್ಕೆ ಅದರಲ್ಲೂ ಮಹಿಳೆಯರ ಜೀವನೋಪಾಯಕ್ಕೆ ಹೆಚ್ಚು ಆದ್ಯತೆ ನೀಡಲಾಗುತ್ತಿದೆ. ಇದರ ಜೊತೆಗೆ ನೃಸರ್ಗಿಕ ಕೃಷಿ ಪದ್ಧತಿಯ ಬಗ್ಗೆ…
ಮೈಸೂರು: ಪ್ರಸಾದ್ ಯೋಜನೆಯಡಿ ಚಾಮುಂಡಿ ಬೆಟ್ಟದ ಪಾರಂಪರಿಕತೆಗೆ ಯಾವುದೇ ಧಕ್ಕೆ ಆಗದಂತೆ ಅಭಿವೃದ್ಧಿ ಮಾಡಲಾಗುವುದು ಎಂದು ಸಮಾಜ ಕಲ್ಯಾಣ ಇಲಾಖೆಯ…
ಬೆಂಗಳೂರು: ಸೋಷಿಯಲ್ ಮೀಡಿಯಾದಲ್ಲಿ ಅಶ್ಲೀಲ ಮೆಸೇಜ್, ಕಮೆಂಟ್ ಮಾಡಿ ನಿಂದಿಸಿದ ಆರೋಪಕ್ಕೆ ಸಂಬಂಧಿಸಿದಂತೆ ದರ್ಶನ್ ಪತ್ನಿ ವಿಜಯಲಕ್ಷ್ಮೀಗೆ ಸಿಸಿಬಿ ಪೊಲೀಸರು…