ದೇಶ- ವಿದೇಶ

ಸಿಜೆಐ ಗವಾಯಿ ಮೇಲೆ ಶೂ ಎಸೆಯಲು ಯತ್ನಿಸಿದ್ದ ವಕೀಲ ರಾಕೇಶ್‌ ಕಿಶೋರ್‌ ಹೇಳೊದೇನು?

ಹೊಸದಿಲ್ಲಿ : ನಾನು ಯಾವ ತಪ್ಪು ಮಾಡಿಲ್ಲ, ನನ್ನ ನಿರ್ಧಾರ ಸರಿಯಿದೆ. ಹೀಗಾಗಿ ಯಾರನ್ನು ಕ್ಷಮೆ ಕೇಳುವ ಪ್ರಶ್ನೆಯೇ ಇಲ್ಲ ಎಂದು ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಬಿ ಆರ್ ಗವಾಯಿ ಅವರ ಮೇಲೆ ಶೂ ಎಸೆಯಲು ಮುಂದಾಗಿದ್ದ ವಕೀಲ ರಾಕೇಶ್ ಕಿಶೋರ್ ಹೇಳಿಕೊಂಡಿದ್ದಾನೆ.

ಮಾಧ್ಯಮದ ಜೊತೆ ಮಾತನಾಡಿದ ಆತ, ನಾನು ಜೈಲು ಶಿಕ್ಷೆ ಎದುರಿಸಲು ಸಿದ್ಧ. ಈ ಕೃತ್ಯಕ್ಕೆ ನಾನು ಕ್ಷಮೆಯಾಚಿಸಲ್ಲ. ಅಷ್ಟೇ ಅಲ್ಲದೇ ಯಾವುದೇ ರಾಜಕೀಯ ಪಕ್ಷದೊಂದಿಗೆ ನಾನು ಸಂಬಂಧ ಹೊಂದಿಲ್ಲ ಎಂದು ಸ್ಪಷ್ಟನೆ ನೀಡಿದ್ದಾನೆ.

ಇದನ್ನು ಓದಿ :  ಸಿಜೆಐಗೆ ಶೂ ಎಸೆದ ವಕೀಲನ ಗಲ್ಲಿಗೇರಿಸಿ: ದೇವಗಳ್ಳಿ ಸೋಮಶೇಖರ ಒತ್ತಾಯ

ಶೂ ಎಸೆಯಲು ದೇವರೇ ಪ್ರಚೋದನೆ ನೀಡಿದ್ದಾನೆ. ಖಜುರಾಹೊ ಅರ್ಜಿ ವಿಚಾರಣೆ ವೇಳೆ ನ್ಯಾ.ಗವಾಯಿ ಹೇಳಿದ ಅಭಿಪ್ರಾಯದಿಂದ ನನಗೆ ರಾತ್ರಿ ನಿದ್ದೆಯೇ ಬರಲಿಲ್ಲ. ನಂತರ ಮಾರಿಷಸ್‍ನಲ್ಲಿ ಭಾರತೀಯ ಕಾನೂನು ವ್ಯವಸ್ಥೆಯು ಕಾನೂನಿನ ಆಳ್ವಿಕೆಯಿಂದ ನಿಯಂತ್ರಿಸಲ್ಪಡುತ್ತದೆಯೇ ಹೊರತು ಬುಲ್ಡೋಜರ್ ನಿಯಮದಿಂದ ಅಲ್ಲ ಎಂದು ಗವಾಯಿ ಹೇಳಿಕೆಯಿಂದ ನನಗೆ ಅಸಮಾಧಾನವಾಗಿತ್ತು ಎಂದು ಹೇಳಿದರು.

ಸಿಜೆಐ ಗವಾಯಿ ಮೇಲೆ ಶೂ ಎಸೆಯಲು ಮುಂದಾಗಿದ್ದ ವಕೀಲ ಬನಾರಸ್ ಹಿಂದೂ ವಿಶ್ವವಿದ್ಯಾಲಯದಿಂದ ವೈದ್ಯಕೀಯ ಕೀಟಶಾಸ್ತ್ರದಲ್ಲಿ ಪಿಎಚ್‍ಡಿ ಪಡೆದಿದ್ದೇನೆ ಎಂದು ಹೇಳಿಕೊಂಡಿದ್ದು, ವಕೀಲ ವೃತ್ತಿ ಮಾಡುವ ಮೊದಲು ವಿಶ್ವ ಆರೋಗ್ಯ ಸಂಸ್ಥೆಗೆ ಸಲಹೆ ನೀಡಿದ್ದೇನೆ. ಮಾನಸಿಕವಾಗಿಯೂ ನಾನು ಸ್ಥಿಮಿತದಲ್ಲಿದ್ದೇನೆ ಎಂದಿದ್ದಾರೆ.

ನನ್ನ ಕೃತ್ಯದಿಂದ ಕುಟುಂಬದವರು ಅಸಮಾಧಾನಗೊಂಡಿದ್ದಾರೆ ಎನ್ನುವುದು ನನಗೆ ತಿಳಿದಿದೆ. ಮುಂದೆ ಯಾವುದೇ ರೀತಿಯ ಪರಿಣಾಮ ಎದುರಿಸಲು ನಾನು ಸಿದ್ಧನಿದ್ದೇನೆ. ದೇವರ ಹೆಸರಿನಲ್ಲೇ ಎಲ್ಲವನ್ನೂ ಸಹಿಸುತ್ತೇನೆ ಎಂದು ಅವರು ಹೇಳಿದ್ದಾರೆ.

ಆಂದೋಲನ ಡೆಸ್ಕ್

Recent Posts

ಮಾನವ ಕಲಿಯಬೇಕಾದ ಬದುಕಿನ ಪಾಠಗಳು

ಶ್ರೇಯಸ್ ದೇವನೂರು ಇಂದು ವಿಶ್ವ ಆನೆ ದಿನಾಚರಣೆ  ಭೂಮಿಯ ಮೇಲಿರುವ ಜೀವಿಗಳಲ್ಲಿ ಆನೆ, ಅತಿ ದೊಡ್ಡ ಪ್ರಾಣಿ ಮಾತ್ರವಲ್ಲ ,…

8 hours ago

ಸಾವಿರಾರು ಹೆರಿಗೆ ಮಾಡಿಸಿದ ಫ್ಲಾರೆನ್ಸ್ ನೈಟಿಂಗೇಲ್ ಗೀತಾ ‘ಮಾ’

ಪಂಜುಗಂಗೊಳ್ಳಿ ಅವರ ವಾರದ ಅಂಕಣ  ಕಡು ಬಡತನದ ಕುಟುಂಬದಿಂದ ಬಂದ ಶುಶ್ರೂಷಕಿ ಪ. ಬಂಗಾಳದ ಗೀತಾ ಕಾರ್ಮಕಾರ್ ನರ್ಸಿಂಗ್ ತರಬೇತಿ…

8 hours ago

ಸಿದ್ದರಾಮಯ್ಯ ಸಿದ್ಧಾಂತದ ಹೋರಾಟಕ್ಕೆ ಅಂತ್ಯವೆಂಬುದೇ ಇಲ್ಲ

ಆರ್.ಟಿ.ವಿಠ್ಠಲಮೂರ್ತಿ ಕರ್ನಾಟಕದ ರಾಜಕೀಯ ಚರಿತ್ರೆಯಲ್ಲಿ ಹೊಸ ಮೈಲಿಗಲ್ಲಾಗಿ ದಾಖಲಾಗಿರುವ ಸಿದ್ದರಾಮಯ್ಯ ಅವರೀಗ ಮತ್ತೊಂದು ಪಯಣಕ್ಕೆ ಸಜ್ಜಾಗಬೇಕಿದೆ. ಇನ್ನು ಚುನಾವಣೆಗಳಲ್ಲಿ ಸ್ಪರ್ಧಿಸುವು…

8 hours ago

ಕಣ್ಮನ ಸೆಳೆಯುತ್ತಿದೆ ಮಲ್ಲಳ್ಳಿ ಜಲಪಾತ!

ಲಕ್ಷ್ಮೀಕಾಂತ್ ಕೊಮಾರಪ್ಪ ಪ್ರಾಕೃತಿಕ ಸೌಂದರ್ಯಕ್ಕೆ ಮಾರುಹೋಗುತ್ತಿರುವ ಪ್ರವಾಸಿಗರು ಸೋಮವಾರಪೇಟೆ: ಎತ್ತ ನೋಡಿದರೂ ಅಚ್ಚಹಸಿರಿನ ಕಾಡು ಸುಂದರ ಪ್ರಕೃತಿಯ ಸೊಬಗು... ನಿಮಿಷಕ್ಕೊಮ್ಮೆ…

8 hours ago

ಓದುಗರ ಪತ್ರ: ಸ್ಥಾನ…ಮಾನ !

ಸ್ಥಾನ...ಮಾನ ! ಅಳೆದೂ ಸುರಿದು ಅಲ್ಲಿಂದಿಲ್ಲಿಗೆ ಓಡಾಡಿ ಕೊಟ್ಟೂ ಕೊಡಲಾಗದೆ ಬಿಟ್ಟೂ ಇರಲಾಗದೆ ಉಳಿಸಿಕೊಂಡಿರುವುದು ಒಂದೇ ಒಂದು ಮಂತ್ರಿ ಸ್ಥಾನ…

8 hours ago

ಓದುಗರ ಪತ್ರ: ಸಚಿವ ಸ್ಥಾನ: ಹಿರಿಯರ ನಿರ್ಲಕ್ಷ್ಯ ಸರಿಯಲ್ಲ

ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ನೇತೃತ್ವದ ಮಂತ್ರಿಮಂಡಲ ವಿಸ್ತರಣೆಯಾಗಿ ೨೦ ಸ್ಥಾನಗಳ ಪೈಕಿ ೧೯ ಶಾಸಕರು ಸಚಿವರಾಗಿ ಪ್ರಮಾಣವಚನ ಸ್ವೀಕಾರ…

8 hours ago