ದೇಶ- ವಿದೇಶ

ದಲೈಲಾಮಾ ಉತ್ತರಾಧಿಕಾರಿ ಆಯ್ಕೆ ಬಗ್ಗೆ ಟ್ರಂಪ್ ಹೇಳಿದ್ದೇನು?

ವಾಷಿಂಗ್ಟನ್ : ಟಿಬಟಿಯನ್ನರ ಧಾರ್ಮಿಕ ಗುರು ದಲೈ ಲಾಮಾ ಅವರಿಗೆ ತನ್ನ ಹುಟ್ಟುಹಬ್ಬದ ಶುಭಾಶಯಗಳನ್ನು ಹೇಳಿರುವ ಅಮೆರಿಕ, ಮುಂದಿನ ಉತ್ತರಾಧಿಕಾರಿ ಆಯ್ಕೆಯ ವಿಷಯದಲ್ಲಿ ಯಾರೊಬ್ಬರ ಹಸ್ತಕ್ಷೇಪದ ಅಗ್ಯತ್ಯವಿಲ್ಲ ಎಂದು ಪರೋಕ್ಷವಾಗಿ ಚೀನಾಗೆ ಎಚ್ಚರಿಕೆ ಕೊಟ್ಟಿದೆ.

ತಮ್ಮ ಉತ್ತರಧಿಕಾರಿ ಆಯ್ಕೆಯ ವಿಷಯದಲ್ಲಿ ಚೀನಾದ ಅನುಮತಿ ಕಡ್ಡಯವಾಗಿ ಅಗತ್ಯ ಎಂದು ಚೀನಾ ಹೇಳಿದ್ದಕ್ಕೆ ಆಕ್ಷೇಪ ವ್ಯಕ್ತಪಡಿಸಿರುವ ಅಮೇರಿಕಾ, ಟಿಬೆಟಿಯನ್ನರು ತಮ್ಮ ಧಾರ್ಮಿಕ ನಾಯಕರನ್ನು ‘ಹಸ್ತಕ್ಷೇಪವಿಲ್ಲದೆ‘ ಮುಕ್ತವಾಗಿ ಆಯ್ಕೆ ಮಾಡುವ ಸಾಮರ್ಥ್ಯಕ್ಕೆ ಬೆಂಬಲ ವ್ಯಕ್ತಪಡಿಸುವ ಮೂಲಕ ಚೀನಾಕ್ಕೆ ಸ್ಪಷ್ಟ ಸಂದೇಶ ರವಾನಿಸಿದೆ.

ಟಿಬೆಟಿಯನ್ನರ ಮೂಲಭೂತ ಸ್ವಾತಂತ್ರ್ಯವನ್ನು ಉತ್ತೇಜಿಸುವ ಅಮೆರಿಕದ ಬದ್ಧತೆಯನ್ನು ಅಮೆರಿಕದ ವಿದೇಶಾಂಗ ಕಾರ್ಯದರ್ಶಿ ಮಾರ್ಕೊ ರೂಬಿಯೊ ಹೇಳಿಕೆಯಲ್ಲಿ ದೃಢಪಡಿಸಿದ್ದಾರೆ.

ಅವರ ೯೦ನೇ ಹುಟ್ಟುಹಬ್ಬದಂದು ಯುನೈಟೆಡ್ ಸ್ಟೇಟ್ಸ್ ಅವರಿಗೆ ಶುಭಾಶಯಗಳನ್ನು ಕೋರುತ್ತದೆ. ದಲೈ ಲಾಮಾ ಅವರು ಏಕತೆ, ಶಾಂತಿ ಮತ್ತು ಸಹಾನುಭೂತಿಯ ಸಂದೇಶವನ್ನು ಸಾಕಾರಗೊಳಿಸುವ ಮೂಲಕ ಜನರನ್ನು ಪ್ರೇರೇಪಿಸುವುದನ್ನು ಮುಂದುವರಿಸಿದ್ದಾರೆ‘ ಎಂದು ವಿದೇಶಾಂಗ ಇಲಾಖೆ ಹಂಚಿಕೊಂಡ ಹೇಳಿಕೆಯಲ್ಲಿ ರೂಬಿಯೊ ಹೇಳಿದ್ದಾರೆ.

ಚೀನಾವನ್ನು ಹೆಸರಿಸದೆ, ರೂಬಿಯೊ ಟಿಬೆಟಿಯನ್ನರ ಸಾಂಸ್ಕ ತಿಕ ಮತ್ತು ಧಾರ್ಮಿಕ ಸ್ವಾತಂತ್ರ್ಯಕ್ಕೆ ಅಮೆರಿಕದ ಬೆಂಬಲದ ಬಗ್ಗೆ ದೇಶಕ್ಕೆ ಪರೋಕ್ಷ ಸಂದೇಶವನ್ನು ರವಾನಿಸಿದರು, ‘ಯುನೈಟೆಡ್ ಸ್ಟೇಟ್ಸ್ ಟಿಬೆಟಿಯನ್ನರ ಮಾನವ ಹಕ್ಕುಗಳು ಮತ್ತು ಮೂಲಭೂತ ಸ್ವಾತಂತ್ರ್ಯಗಳಿಗೆ ಗೌರವವನ್ನು ಉತ್ತೇಜಿಸಲು ದೃಢವಾಗಿ ಬದ್ಧವಾಗಿದೆ. ಟಿಬೆಟಿಯನ್ನರ ವಿಶಿಷ್ಟ ಭಾಷಾ, ಸಾಂಸ್ಕತಿಕ ಮತ್ತು ಧಾರ್ಮಿಕ ಪರಂಪರೆಯನ್ನು ಸಂರಕ್ಷಿಸುವ ಪ್ರಯತ್ನಗಳನ್ನು ನಾವು ಬೆಂಬಲಿಸುತ್ತೇವೆ, ಇದರಲ್ಲಿ ಧಾರ್ಮಿಕ ನಾಯಕರನ್ನು ಹಸ್ತಕ್ಷೇಪವಿಲ್ಲದೆ ಮುಕ್ತವಾಗಿ ಆಯ್ಕೆ ಮಾಡುವ ಮತ್ತು ಪೂಜಿಸುವ ಅವರ ಸಾಮಥ್ರ್ಯವೂ ಸೇರಿದೆ ಎಂದಿದ್ದಾರೆ.

ಆಂದೋಲನ ಡೆಸ್ಕ್

Recent Posts

ನಾಳೆಯಿಂದ ಮಡಿಕೇರಿಯಲ್ಲಿ ಕೂರ್ಗ್‌ ಕಾರ್ನಿವಲ್‌

ನವೀನ್ ಡಿಸೋಜ ೨ನೇ ಬಾರಿಗೆ ನಡೆಯುವ ಪ್ರವಾಸಿ ಉತ್ಸವಕ್ಕೆ ಸಿದ್ಧತೆ; ಹೋಟೆಲ್ ಮತ್ತು ರೆಸಾರ್ಟ್ ಅಸೋಸಿಯೇಷನ್ ಸಹಭಾಗಿತ್ವ  ಮಡಿಕೇರಿ: ಡಿ.೨೦…

1 hour ago

ಮುಡಾ ಅಕ್ರಮ : ತೆರೆಗೆ ಸರಿದ ದೇಸಾಯಿ ಆಯೋಗದ ವರದಿ

ಕೆ.ಬಿ.ರಮೇಶನಾಯಕ ಮುಡಾ ಅಕ್ರಮಗಳ ಕುರಿತು ೬ ಸಂಪುಟಗಳಲ್ಲಿ ಸಲ್ಲಿಸಿದ್ದ ವರದಿ ೩೦೦ ನಿವೇಶನಗಳು ಬದಲಿ ನಿವೇಶನಗಳಾಗಿ ಹಂಚಿಕೆ ೫೦:೫೦ ಅನುಪಾತದಡಿ…

2 hours ago

ಗುಂಡ್ಲುಪೇಟೆ | ಉಪಟಳ ನೀಡುತಿದ್ದ ಹುಲಿ ಸೆರೆ ; ಮತ್ತೊಂದು ದರ್ಶನ

ಗುಂಡ್ಲುಪೇಟೆ : ತಾಲ್ಲೂಕಿನ ಬೊಮ್ಮಲಾಪುರ ಬಳಿ ಅನೇಕ ದಿನಗಳಿಂದ ರೈತರಿಗೆ ಉಪಟಳ ನೀಡಿ ಜಾನುವಾರುಗಳ ಮೇಲೆ ದಾಳಿ ನಡೆಸುತ್ತಿದ್ದ ಹುಲಿಯನ್ನು…

13 hours ago

ಬೆಳ್ತಂಗಡಿ | ಮಹೇಶ್‌ ಶೆಟ್ಟಿ ತಿಮರೋಡಿ ಮತ್ತೆ ಗಡಿಪಾರು

ಬೆಳ್ತಂಗಡಿ : ಧರ್ಮಸ್ಥಳ ವಿರುದ್ಧ ಹೋರಾಟ ನಡೆಸುತ್ತಿರುವ ಮಹೇಶ್ ಶೆಟ್ಟಿ ತಿಮರೋಡಿಗೆ ಎರಡನೇ ಬಾರಿಗೆ ಗಡಿಪಾರು ಮಾಡಿ ಪುತ್ತೂರು ಎ.ಸಿ.ಆದೇಶ…

13 hours ago

ಲೋಕಸಭೆ | ವಿಭಾ ಜಿರಾಮ್‌ ಮಸೂದೆ ಅಂಗೀಕಾಋ : ಪ್ರತಿಪಕ್ಷಗಳಿಂದ ಪ್ರತಿ ಹರಿದು ಆಕ್ರೋಶ

ಹೊಸದಿಲ್ಲಿ : ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಅಸ್ತಿತ್ವದಲ್ಲಿರುವ ‘ಮನ್ರೇಗಾ ಯೋಜನೆ’(ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆ)ಯಿಂದ…

13 hours ago