ಹೊಸದಿಲ್ಲಿ : ಇರಾನ್-ಇಸ್ರೇಲ್,ಅಮೆರಿಕ ಸಂಘರ್ಷದ ಪರಿಣಾಮವಾಗಿ ದೇಶದಲ್ಲಿ ಇಂಧನ ಬಿಕ್ಕಟ್ಟು ಎದುರಾಗುವು ಸಂಭವ ಇದ್ದು, ಡಿಸೇಲ್,ಪೆಟ್ರೋಲ್ ಮತ್ತು ಅಡುಗೆ ಅನಿಲ ಅಭಾವ ಸೃಷ್ಟಿಯಾಗಲಿದೆ ಎಂದು ಮಾಧ್ಯಮಗಳು ವರದಿ ಮಾಡುತ್ತಿವೆ. ಏತನ್ಮಧ್ಯೆ ಇಂಧನ ಸಚಿವಾಲಯವು ಈ ಕುರಿತು ಸ್ಪಷ್ಟನೆ ನೀಡಿದೆ.
ಎಲ್ಪಿಜಿ ಸಿಲಿಂಡರ್ ಕೊರತೆಯಾಗಿಲ್ಲ. ದೇಶದ ಕಚ್ಚಾ ತೈಲ ಸರಬರಾಜು ಸುಸ್ಥಿತಿಯಲ್ಲಿದೆ. ಕೆಲ ದಿನಗಳಲ್ಲಿ ಎಲ್ಲವೂ ಯಥಸ್ಥಿತಿಗೆ ಬರಲಿದೆ. ಆತಂಕದಿಂದ ಜನರು ಹೆಚ್ಚುವರಿ ಸಿಲಿಂಡರ್ಗಳನ್ನು ಬುಕ್ಕಿಂಗ್ ಮಾಡುತ್ತಿದ್ದಾರೆ. ಜನರು ಭಯದಿಂದ ಬುಕ್ಕಿಂಗ್ ಮಾಡುವುದನ್ನು ನಿಲ್ಲಿಸುವಂತೆ ಸಚಿವಾಲಯ ಮನವಿ ಮಾಡಿದೆ. ಮುಂದುವರೆದು ನಿತ್ಯ 50 ಲಕ್ಷ ಸಿಲಿಂಡರ್ಗಳನ್ನು ವಿತರಿಸುತ್ತಿದ್ದೇವೆ ಎಂದು ಹೇಳಿದೆ.
ಏಕಾಏಕಿ ಬುಕ್ಕಿಂಗ್ ಪ್ರಮಾಣದಲ್ಲಿ ಏರಿಕೆಯಾಗಿರುವುದರಿಂದ ಆಗುವ ತೊಂದರೆಯನ್ನು ತಪ್ಪಿಸಲು, ಗೃಹ ಹಾಗೂ ವಾಣಿಜ್ಯ ಬಳಕೆಯ ಸಿಲಿಂಡರ್ ಫಲಾನುಭವಿಗಳ ಪಟ್ಟಿ ತಯಾರು ಮಾಡುವಂತೆ ರಾಜ್ಯ ಸರ್ಕಾರಗಳಿಗೆ ತಿಳಿಸಲಾಗಿದೆ. ಇದರಿಂದ, ಆದ್ಯತೆಯ ಅನುಸಾರ ಸಿಲಿಂಡರ್ ವಿತರಿಸಲು ಸಾಧ್ಯವಾಗಲಿದೆ ಎಂದು ಸಚಿವಾಲಯದ ತಿಳಿಸಿದೆ.
ಮೈಸೂರು : ಪೊಲೀಸ್ ಠಾಣೆಯಲ್ಲಿ ಮಹಿಳೆಯುರು ದೂರು ದಾಖಲಿಸಲು ಅಥವಾ ಯಾವುದೇ ರೀತಿಯ ಮಾಹಿತಿ ಪಡೆಯಲು ಬಂದಾಗ ಅವರೊಂದಿಗೆ ಗೌರವಯುತವಾಗಿ…
• ವಿಧಾನಸಭೆಯಲ್ಲಿ ನಗರಾಭಿವೃದ್ಧಿ ಸಚಿವ ಬೈರತಿ ಸುರೇಶ್ ಮಾಹಿತಿ • ಇ-ಆಸ್ತಿ ತಂತ್ರಾಂಶದಲ್ಲಿ ಯಾವುದೇ ತೊಡಕಿಲ್ಲ ವಿಧಾನಸಭೆ : ಸದ್ಯದಲ್ಲೇ…
ವಿಧಾನಸಭೆ : ಸಾಂಸ್ಕೃತಿಕ ನಗರ ಮೈಸೂರಿನ ಕುಡಿಯುವ ನೀರು ಮತ್ತು ಒಳಚರಂಡಿ ವ್ಯವಸ್ಥೆ ಅಭಿವೃದ್ಧಿಗೆ ಈ ಬಾರಿ ಬಜೆಟ್ ನಲ್ಲಿ…
ಬೆಂಗಳೂರು : ಮಧ್ಯಪ್ರಾಚ್ಯದಲ್ಲಿ ಸಂಘರ್ಷದಿಂದ ದೇಶದಲ್ಲಿ ಗ್ಯಾಸ್ ಸಿಲಿಂಡರ್ ಪೂರೈಕೆಯಲ್ಲಿ ವ್ಯತ್ಯಯವಾಗುತ್ತಿದೆ. ಈ ಮಧ್ಯೆ ಸಿಲಿಂಡರ್ ಕಳ್ಳತನ ಸಹ ಹೆಚ್ಚಾಗಿದ್ದು…
ಟೆಹ್ರಾನ್ : ಇರಾನ್- ಇಸ್ರೇಲ್, ಅಮೆರಿಕಾ ಯುದ್ಧ ದಿನಕ್ಕೊಂದು ಸ್ವರೂಪ ಪಡೆಯುತ್ತಿದ್ದು, ತಂದೆ ಸಾವಿನ ಬಳಿಕ ನೇಮಕಗೊಂಡ ಇರಾನ್ ಸುಪ್ರೀಂ…
ಬೆಂಗಳೂರು: ಮಧ್ಯಪ್ರಾಚ್ಯದ ಯುದ್ಧದ ಹಿನ್ನೆಲೆಯಲ್ಲಿ ದೇಶಾದ್ಯಂತ ತಲೆದೋರಿರುವ ಅಡುಗೆ ಅನಿಲ ಅಭಾವದ ಬಿಸಿ ಇದೀಗ ರಾಜ್ಯದ ಅರಣ್ಯಗಳ ಮೇಲೆ ತಟ್ಟುವ…